Tel: 7676775624 | Mail: info@yellowandred.in

Language: EN KAN

    Follow us :


ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು

Posted date: 12 Jul, 2018

Powered by:     Yellow and Red

ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟ್‌ ಮ್ಯಾಟ್ರಿಕ್ಸ್‌ ಈಗಾಗಲೇ ಪ್ರಕಟಿಸಿದ್ದರೂ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಸೀಟುಗಳ ವಿವರವನ್ನು ಪ್ರಕಟಿಸದಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಈ ಎರಡು ಕೋರ್ಟ್‌ಗಳ ಸರ್ಕಾರಿ ಕೋಟಾ, ಹೈದರಾಬಾದ್‌ ಕರ್ನಾಟಕ ಕೋಟಾ ಹಾಗೂ ವಿಶೇಷ ಕೋಟಾದ ಸೀಟುಗಳ ಕಾಲೇಜುವಾರು ಪಟ್ಟಿಯನ್ನು ಪ್ರಕಟಿಸಿದೆ.

ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಸೀಟ್‌ಮ್ಯಾಟ್ರಿಕ್ಸ್‌ ಪ್ರಕಟಿಸಲಾಗಿದ್ದು, ಅನುದಾನಿತ ಹಾಗೂ ಅನುದಾನ ರಹಿತ ವೃತ್ತಿಪರ ಕಾಲೇಜುಗಳ ಸೀಟುಗಳು ಇದರಲ್ಲಿ ಸೇರಿಕೊಂಡಿವೆ.

ಪ್ರಸಕ್ತ ಸಾಲಿನ ಎಂಜಿನಿಯರಿಂಗ್‌ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ 46,768 ಸೀಟು, ಹೈದರಾಬಾದ್‌ ಕರ್ನಾಟಕ ಕೋಟಾದಡಿ 6,293 ಸೀಟು ಹಾಗೂ ವಿಶೇಷ ಕೋಟಾದಡಿ 2,155 ಸೀಟು ಸೇರಿದಂತೆ ಒಟ್ಟು 55,216 ಸೀಟು ಲಭ್ಯವಾಗಿದೆ. ಅದೇರೀತಿ ಆರ್ಕಿಟೆಕ್ಚರ್‌ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ 745, ಹೈ.ಕ. ಕೋಟಾದಡಿ 97 ಹಾಗೂ ವಿಶೇಷ ವರ್ಗ ಕೋಟಾದಡಿ 42 ಸೇರಿದಂತೆ 884 ಸೀಟುಗಳು ವಿದ್ಯಾರ್ಥಿಗಳಿಗೆ ದೊರೆಯಲಿದೆ. 

ಕೃಷಿ ವಿಜ್ಞಾನ ಮತ್ತು ಪಶುವೈದ್ಯಕೀಯ ವಿಜ್ಞಾನ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದಡಿ 1,443, ಕೃಷಿ ಕೋಟಾದಡಿ 1,021 ಹಾಗೂ ವಿಶೇಷ ಕೋಟಾದಡಿ 383 ಸೀಟುಗಳ ಪಟ್ಟಿಯನ್ನು ಪ್ರಾಧಿಕಾರ ಈಗಾಗಲೇ ಪ್ರಕಟಿಸಿತ್ತು.

2017ರಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ 47,605, ಹೈ.ಕ. ಕೋಟಾದಡಿ 6300 ಹಾಗೂ ವಿಶೇಷ ಕೋಟಾದಡಿ 1,978 ಸೀಟು ಸೇರಿದಂತೆ 55,883 ಸೀಟು ಲಭ್ಯವಾಗಿತ್ತು. ಈ ವರ್ಷ ಒಟ್ಟು ಸೀಟುಗಳಲ್ಲಿ 667 ಸೀಟು ಕಡಿಮೆಯಾಗಿದೆ. ಆರ್ಕಿಟೆಕ್ಚರ್‌ ಕೋರ್ಸ್‌ಗಳಲ್ಲಿ 1,004 ಸೀಟು ಕಳೆದ ಬಾರಿ ವಿದ್ಯಾರ್ಥಿಗಳಿಗೆ ಲಭ್ಯವಾಗಿದ್ದರೆ, ಈ ಬಾರಿ 120 ಸೀಟುಗಳು ಕಡಿಮೆಯಾಗಿವೆ.

ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗೆ ಪ್ರಸಕ್ತ ಸಾಲಿನಲ್ಲಿ ವಿವಿಧ ಕೋಟಾದಡಿ ಲಭ್ಯವಿರುವ ಸೀಟುಗಳ ವಿವರ ಈಗಾಗಲೇ ಪ್ರಕಟಿಸಿ, ವಿದ್ಯಾರ್ಥಿಗಳು ಆಪ್ಷನ್‌ ಎಂಟ್ರಿ ಕೂಡ ಮಾಡುತ್ತಿದ್ದಾರೆ. ಆದರೆ, ಎಂಜಿನಿಯರಿಂಗ್‌ ಕೋರ್ಸ್‌ಗೆ ಇನ್ನೂ ಆಪ್ಷನ್‌ ಎಂಟ್ರಿಗೆ ಅವಕಾಶ ನೀಡಿಲ್ಲ. ಬುಧವಾರ ಸಂಜೆಯೊಳಗೆ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಆಪ್ಷನ್‌ ಎಂಟ್ರಿ ಆರಂಭವಾಗಲಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬಿ-ಫಾರ್ಮಾ ಸೀಟು ಬಂದಿಲ್ಲ: ಬಿ-ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್‌ಗಳ ಪ್ರಸಕ್ತ ಸಾಲಿನ ಸೀಟ್‌ ಮ್ಯಾಟ್ರಿಕ್ಸ್‌ ಇನ್ನೂ ಹೊರಬಿಟ್ಟಿಲ್ಲ. ಸರ್ಕಾರದಿಂದ ಇಷ್ಟರೊಳಗೆ ಸೀಟ್‌ ಮ್ಯಾಟ್ರಿಕ್ಸ್‌ ಬರಬೇಕಿತ್ತು. ಜುಲೈ 31ರೊಳಗೆ ಎಲ್ಲ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕಿರುವುದರಿಂದ ಪ್ರಾಧಿಕಾರದ ಅಧಿಕಾರಿಗಳೇ ಸೀಟ್‌ ಮ್ಯಾಟ್ರಿಕ್ಸ್‌ಗಾಗಿ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.

ಎಂಜಿನಿಯರಿಂಗ್‌ ಶುಲ್ಕ ಶೇ. 8ರಷ್ಟು ಹೆಚ್ಚಳ: ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಸರ್ಕಾರದ ನಡುವಿನ ಒಪ್ಪಂದಂತೆ ಪ್ರಸಕ್ತ ಸಾಲಿನಲ್ಲಿ ಶೇ. 10ರಷ್ಟು ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಇದಕ್ಕೆ ಆಡಳಿತ ಮಂಡಳಿಯವರು ಕೂಡ ಸಂತಸ ಪಟ್ಟಿದ್ದರು. ಆದರೆ, ಈಗ ಸರ್ಕಾರ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡಿದೆ.

ವೃತ್ತಿಪರ ಕಾಲೇಜುಗಳ ಶುಲ್ಕ ನಿಯಂತ್ರಣ ಸಮಿತಿ ವರದಿಯಂತೆ ಶೇ.8ರಷ್ಟು ಮಾತ್ರ ಹೆಚ್ಚಳ ಮಾಡಲು ಸಾಧ್ಯ ಎಂದು ಹೇಳಿದೆ. ಸರ್ಕಾರ ಶೇ.10ರಷ್ಟು ಶುಲ್ಕ ಹೆಚ್ಚಳ ಮಾಡಿದರೆ ನ್ಯಾಯಾಂಗ ನಿಂದನೆ ಆಗಬಹುದು ಎಂಬ ಉದ್ದೇಶದಿಂದ ತನ್ನ ನಿರ್ಧಾರದಲ್ಲಿ ಸ್ಪಲ್ಪ ಬದಲಾವಣೆ ಮಾಡಿಕೊಂಡಿದ್ದು, ಶೇ.8ರಷ್ಟು ಮಾತ್ರ ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಆಡಳಿತ ಮಂಡಳಿಗಳಿಗೆ ನಿರ್ದೇಶಿಸಿದೆ.


 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ

ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ

ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು

ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ

ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾ

ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ

ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ

ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು

ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ

Top Stories »  


Top ↑