ಬೆಳಗ್ಗೆ 8ರಿಂದಲೇ ಕಾಲೇಜು
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೆಳಗ್ಗೆ ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆ ಯಿದ್ದು, ಎರಡು ಪಾಳಿಯಲ್ಲಿ ತರಗತಿ ನಡೆಸುವ ಕಾಲೇಜುಗಳಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ಕಾಲೇಜು ತರಗತಿ ಆರಂಭಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸಿದ ಮನವಿಯನ್ನು ಕೂಲಂಕಷವಾಗಿ ಪರಿಶೀಲಿಸಿರುವ ಇಲಾಖೆ, ತರಗತಿ ಆರಂಭದ ಸಮಯಕ್ಕೆ ಸಂಬಂಧಿಸಿದ ಮೂರು ಮಾರ್ಗೋಪಾಯ ತಿಳಿಸಿದೆ. ಈಗಾಗಲೇ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸುತ್ತಿರುವ ಕಾಲೇಜುಗಳಲ್ಲಿ ಬೆಳಗಿನ ಬ್ಯಾಚ್ಗಳನ್ನು ಮತ್ತು ಎಲ್ಲ ಕಾಲೇಜುಗಳಲ್ಲೂ ಪ್ರಯೋಗಾಲಯ ಹಿಂದಿನಂತೆಯೇ ಬೆಳಗ್ಗೆ 8 ಗಂಟೆಗೆ ಆರಂಭಿಸುವಂತೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಿದೆ.
ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಅನಾನುಕೂಲ ಆಗುತ್ತಿರುವ ಕಾಲೇಜುಗಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಹಾಜರಾತಿ ದೃಷ್ಟಿಯಿಂದ ಬೆಳಗ್ಗೆ 9 ಗಂಟೆಯಿಂದ 10 ಗಂಟೆಯ ಮಧ್ಯದಲ್ಲಿ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಆರಂಭಿಸುವುದು. ಈ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರು ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶಿಸಿದೆ. ವೇಳಾಪಟ್ಟಿ ಬದಲಾವಣೆಯಿಂದ ಪಠ್ಯೇತರ ಚಟುವಟಿಕೆಗಳಾದ ಎನ್ಎಸ್ಎಸ್, ಎನ್ಸಿಸಿ, ಕೌಶಲ್ಯಾಭಿವೃದ್ಧಿ ತರಬೇತಿ, ವಿಶೇಷ ತರಬೇತಿ, ಕ್ರೀಡಾ ಚಟುವಟಿಕೆಗಳನ್ನು ಯಾವುದೇ ರೀತಿಯಲ್ಲೂ ಕಡಿತಗೊಳಿಸದಂತೆ ಪ್ರಾಂಶು
ಪಾಲಕರಿಗೆ ಎಚ್ಚರಿಕೆ ನೀಡಿದೆ.
ಸಾರಿಗೆ ಸಮಸ್ಯೆ ಪರಿಹಾರಕ್ಕೆ ಈ ಕ್ರಮ: ರಾಜ್ಯದಲ್ಲಿ 412 ಸರ್ಕಾರಿ ಪದವಿ ಕಾಲೇಜುಗಳಿದ್ದು, ಶೇ.25ರಷ್ಟು ಕಾಲೇಜುಗಳಲ್ಲಿ ಎರಡು ಪಾಳಿಯಲ್ಲಿ ತರಗತಿ ನಡೆಸಲಾಗುತ್ತಿದೆ. ಉಳಿದ ಎಲ್ಲ ಕಾಲೇಜುಗಳಲ್ಲೂ ಬೆಳಗ್ಗೆಯಿಂದಲೇ ತರಗತಿ ನಡೆಯುತ್ತಿದೆ. ಪ್ರಸಕ್ತ ಸಾಲಿನ ತರಗತಿಗಳನ್ನು 9ಗಂಟೆಯಿಂದ ಆರಂಭಿಸುವಂತೆ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆ ಸೂಚನೆ ನೀಡಿತ್ತು. ಇದಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು, ಪ್ರಾಂಶುಪಾಲರು ಮತ್ತು
ಪ್ರಾಧ್ಯಾಪಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯೂ ಎದುರಾಗುವುದರಿಂದ ಕಾಲೇಜು ಶಿಕ್ಷಣ ಇಲಾಖೆ ತರಗತಿ ಆರಂಭದ ವೇಳಾಪಟ್ಟಿ ಪರಿಷ್ಕರಿಸಿದೆ. 2017-18ನೇ ಸಾಲಿನ ಮಧ್ಯಭಾಗದಲ್ಲಿ ಪದವಿ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಆರಂಭಿಸಲು ಇಲಾಖೆ ನಿರ್ಧರಿಸಿ, ಎಲ್ಲ ಕಾಲೇಜುಗಳಿಗೂ ಸುತ್ತೋಲೆ ಕಳುಹಿಸಿತ್ತು. ಪ್ರಾಧ್ಯಾಪಕರ ಹಾಗೂ ವಿದ್ಯಾರ್ಥಿಗಳು ತೀವ್ರ
ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಲಾಖೆ ತನ್ನ ನಿರ್ಧಾರದಿಂದ ಹಿಂದೆ ಸರಿದಿತ್ತು
Recent news in education »
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನ
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ ಉದ್ಯೋಗ
ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ
ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲ
ಪಾಠದ ಜೊತೆಗೆ ಆಟದಲ್ಲಿಯೂ ಮುಂಚೂಣಿಗೆ ಬರಬೇಕು. ವಿ ಬಾಲಸುಬ್ರಹ್ಮಣ್ಯಂ
ಚನ್ನಪಟ್ಟಣ,: ಪ್ರತಿಯೊಬ್ಬ ವಿದ್ಯಾರ್ಥಿಯು ಶಿಕ್ಷಣದ ಜೊತೆಯಲ್ಲಿ ಕ್ರೀಡಾಮನೋಭಾವನೆ ಬೆಳಸಿಕೊಳ್ಳಬೇಕು. ಮನಸ್ಸು ಉಲ್ಲಸಿತವಾಗಲು ಕ್ರೀಡೆ ಸಹಕಾರಿ ಎಂದು ಬಾಲು
ಉಪನ್ಯಾಸಕರ ಧರಣಿ, ಕಲಿಕೆಗೆ ತೊಂದರೆ, ಎಬಿವಿಪಿ ಯಿಂದ ಪ್ರತಿಭಟನೆ
ಚನ್ನಪಟ್ಟಣ: ಸರ್ಕಾರಿ ಕಾಲೇಜುಗಳ ಉಪನ್ಯಾಸಕರು ಧರಣಿ ನಿರತರಾಗಿರುವುದರಿಂದ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿದೆ. ಇದರಿಂದ ಶೈಕ್ಷಣಿಕ ವರ್ಷದ ಕಲಿಕೆಗೆ ತೊ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಆರ್ಥಿಕವಾಗಿ ಬೆಳೆದವರೆಲ್ಲರೂ ವಿದ್ಯಾರ್ಜನೆಗೆ ಮುಂದಡಿಯಿಡಬೇಕು, ಸಚಿವ ಮಧುಬಂಗಾರಪ್ಪ
ಚನ್ನಪಟ್ಟಣ: ಬಡತನದ ಬೇಗೆಯಲ್ಲಿ ಬೆಂದು, ಉನ್ನತ ಶಿಕ್ಷಣ ಪಡೆದು, ಉತ್ತಮ ಸ್ಥಾನಮಾನದ ಜೊತೆಗೆ ಆರ್ಥಿಕವಾಗಿ ಸದೃಢವಾದ ನಂತರ ತನ್ನ ಜನ್ಮದಾತರಿಗೆ, ಹುಟ್ಡಿದೂರ
ಕಾವೇರಿ ಕಿಚ್ಚು, ರಾಮನಗರ ಜಿಲ್ಲೆ ಬಂದ್, ಶಾಲಾ-ಕಾಲೇಜಿಗೆ ರಜೆ, ಸರ್ಕಾರಿ ಕಛೇರಿ ರಜೆಗಾಗಿ ಕಾಯುತ್ತಿರುವ ನೌಕರರು
ರಾಮನಗರ: ನಮ್ಮ ರಾಜ್ಯದ ಕೆಲ ಭಾಗಗಳಿಗೆ ಕುಡಿಯುವ ನೀರಿಗೆ ತತ್ವಾರವಾಗಿದೆ, ಮಂಡ್ಯ, ಮೈಸೂರು ಭಾಗದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲಾ, ಇಂತಹ ಸಂಕಷ್ಟದ ಸಮಯ
ಪ್ರತಿಕ್ರಿಯೆಗಳು