Tel: 7676775624 | Mail: info@yellowandred.in

Language: EN KAN

    Follow us :


ಪಿಡಿಒ ನೇಮಕಾತಿಗೆ ತಾತ್ಕಾಲಿಕ ಬ್ರೇಕ್

Posted date: 09 Apr, 2018

Powered by:     Yellow and Red

ಬೆಂಗಳೂರು: ಚುನಾವಣಾ ನೀತಿ ಸಂಹಿತೆಯ ಬಿಸಿ ಪಿಡಿಒ ಹಾಗೂ ಗ್ರಾಪಂ ಕಾರ್ಯದರ್ಶಿಗಳ ನೇಮಕಾತಿಗೂ ತಟ್ಟಿದೆ. ಇನ್ನೇನು ಹುದ್ದೆಗಳನ್ನು ವಹಿಸಿಕೊಂಡು ಸೇವೆಗೆ ಅಣಿಯಾಗಬೇಕು ಅಂದುಕೊಂಡಿದ್ದ ಪಿಡಿಒ ಮತ್ತು ಪಂಚಾಯಿತಿ ಕಾರ್ಯದರ್ಶಿಗಳ ಉಮೇದಿಗೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ನೇಮಕಾತಿ ಕ್ರಮ ಕೈಗೊಳ್ಳದಂತೆ ಎಲ್ಲ ಜಿಲ್ಲಾ ಪಂಚಾಯಿತಿಗಳ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ  ಇಲಾಖೆ ತುರ್ತು ಸುತ್ತೋಲೆ ರವಾನಿಸಿದ್ದು, ಆಯ್ಕೆಯಾದ 1,624 ಅಭ್ಯರ್ಥಿಗಳು ಹುದ್ದೆ ವಹಿಸಿಕೊಳ್ಳಲು ಇನ್ನೂ ಒಂದು ತಿಂಗಳಿಗೂ ಹೆಚ್ಚು ಕಾಯಬೇಕಾಗಿದೆ.

ಗ್ರಾಮೀಣಾಭಿವೃದ್ಧಿ  ಇಲಾಖೆಯಲ್ಲಿ 815 ಪಿಡಿಒ ಹಾಗೂ 809 ಕಾರ್ಯದರ್ಶಿ (ಗ್ರೇಡ್‌-1) ಸೇರಿ ನೇಮಕಗೊಂಡಿದ್ದ ಒಟ್ಟು 1,624 ನೌಕರರಿಗೆ ಮಾ.5ರಂದು ಸಚಿವರು ಸೇವಾ ಸಂಕಲ್ಪ ಪ್ರತಿಜ್ಞಾವಿಧಿ ಬೋಧಿಸಿದ್ದರು. ಅದರ ಬೆನ್ನಲ್ಲೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳ ನಿಗದಿಪಡಿಸಿ ನೇಮಕಾತಿ ಆದೇಶ ನೀಡುವಂತೆ ಎಲ್ಲ ಜಿಲ್ಲಾ ಪಂಚಾಯಿತಿಗಳ ಸಿಇಒಗಳಿಗೆ ಆದೇಶ ಸಹ ನೀಡಲಾಗಿತ್ತು. ಹುದ್ದೆ ವಹಿಸಿಕೊಂಡ ಬಳಿಕ ಈ ಪಿಡಿಒ ಮತ್ತು ಕಾರ್ಯದರ್ಶಿಗಳ 2 ತಿಂಗಳ ತರಬೇತಿಗೂ ಕಾರ್ಯಸೂಚಿ ಸಿದಟಛಿವಾಗಿತ್ತು. ಆದರೆ,ನೀತಿ ಸಂಹಿತೆ ಕಾರಣದಿಂದಾಗಿ ಅದೆಲ್ಲವೂ ಈಗ ಮುಂದಕ್ಕೆ ಹೋಗಿದೆ. ಪಿಡಿಒ ಮತ್ತು ಕಾರ್ಯದರ್ಶಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2017ರ ಜನವರಿಯಲ್ಲಿ ಪರೀಕ್ಷೆ ನಡೆದಿತ್ತು. ಫ‌ಲಿತಾಂಶ ಮತ್ತು ಪಟ್ಟಿ ಪ್ರಕಟಕ್ಕೆ ಸಾಕಷ್ಟು ವಿಳಂಬವಾಗಿತ್ತು.

ಪಟ್ಟಿ ಪ್ರಕಟವಾದ ಮೇಲೆ ಹೆಚ್ಚುವರಿ ಅಂಕಗಳ(ಗ್ರೇಸ್‌ ಮಾರ್ಕ್ಸ್) ವಿಚಾರದಲ್ಲಿ ಗೊಂದಲ ಉಂಟಾಗಿದ್ದರಿಂದ ಪ್ರಕರಣ ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೆಟ್ಟಿಲೇರಿತು. ಹೀಗಾಗಿ ಸುಮಾರು 4 ತಿಂಗಳು ನೇಮಕಾತಿ ನನೆಗುದಿಗೆ ಬಿತ್ತು. ಪರಿಷ್ಕೃತ ಪಟ್ಟಿ ಪ್ರಕಟಗೊಂಡ ಬಳಿಕವೂ ಸಂದರ್ಶನ ಪ್ರಕ್ರಿಯೆ ವಿಳಂಬವಾಯಿತು. ಕೊನೆಗೆ 2018ರ ಫೆಬ್ರವರಿಯಲ್ಲಿ ಅಂತಿಮ ಪಟ್ಟಿ ಪ್ರಕಟವಾಯಿತು. ಈ ರೀತಿ ಅಧಿಸೂಚನೆ, ಪರೀಕ್ಷೆ, ಫ‌ಲಿತಾಂಶ, ಪಟ್ಟಿ ಪ್ರಕಟ ಎಲ್ಲದರಲ್ಲೂ ವಿಳಂಬ ಆಗುತ್ತಲೇ ಬಂತು. ಈಗ ಎಲ್ಲ ಮುಗಿದು ಹುದ್ದೆ ವಹಿಸಿಕೊಳ್ಳಬೇಕು ಎಂದರೆ ಚುನಾವಣಾ ನೀತಿ ಸಂಹಿತೆ ಪರಿಣಾಮ ಮತ್ತೇ ವಿಳಂಬ ಆಗಲಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in jobs »

ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ

ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ, ಜೂ. 09:   ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾ಼ದ

ವಿಕಲಚೇತನರಿಂದ ಅರ್ಜಿ ಆಹ್ವಾನ
ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 03:      ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನ

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

ಚನ್ನಪಟ್ಟಣ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚನ್ನಪಟ್ಟಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಇರುವ ಮುದುಗೆರೆ ಅರಣ್ಯ, ರಾಂಪುರ-, ಗೊಲ್ಲರದೊಡ್ಡಿ(ಮಿನ

ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/31/20/ಶನಿವಾರ.


ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ  ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್. ತರಬೇತಿಯನ್ನು

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ

ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್

ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಗ್ನಿಶಾಮಕ ಇಲಾಖೆಯಿಂದ ೧೫೬೭ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೂ:೨೦/೨೦/ಶನಿವಾರ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ ೧೫೬೭ ವಿವಿಧ ವೃಂದಗಳ ಹು

ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ
ಗುತ್ತಿಗೆ ಆಧಾರದ ಮೇಲೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಸಂದರ್ಶನ

ರಾಮನಗರ:ಏ/೦೩/೨೦/ಶುಕ್ರವಾರ. ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖ

ಸೇನೆ ಹುದ್ದೆಗೆ ಅರ್ಜಿ ಹಾಕಿ

ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹ

Top Stories »  


Top ↑