Tel: 7676775624 | Mail: info@yellowandred.in

Language: EN KAN

    Follow us :


ಮುಖ್ಯಮಂತ್ರಿ ಕ್ಷೇತ್ರದಲ್ಲೇ ರೈತರಿಗೆ ಕೋರ್ಟ್ ನಿಂದ ನೋಟೀಸ್

Posted date: 05 Dec, 2018

Powered by:     Yellow and Red

ಮುಖ್ಯಮಂತ್ರಿ ಕ್ಷೇತ್ರದಲ್ಲೇ ರೈತರಿಗೆ ಕೋರ್ಟ್ ನಿಂದ ನೋಟೀಸ್

ಸಾಲ ಬಾಕಿ ಉಳಿಸಿಕೊಂಡ ಮಹಿಳೆಗೆ ಬ್ಯಾಂಕ್ ನವರು ನ್ಯಾಯಾಲಯದ ಮೂಲಕ ನೋಟೀಸ್‌ಜಾರಿ ಮಾಡಿದ್ದರಿಂದ ರೈತಸಂಘದ ಪದಾಧಿಕಾರಿಗಳು ಆಕ್ರೊಶ ವ್ಯಕ್ತಪಡಿಸಿದರು.

 ಅತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಹಾತ್ವಾಕಾಂಕ್ಷಿ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಋಣಮುಕ್ತ ಪತ್ರ ನೀಡಲು ಸಿದ್ದತೆ ನಡೆಸುತ್ತಿದ್ದರೆ, ಇತ್ತ ಸಿಎಂ ಸ್ವಕ್ಷೇತ್ರದಲ್ಲಿ ಸಾಲ ಮರುಪಾವತಿ ಮಾಡದ ರೈತರಿಗೆ ನ್ಯಾಯಾಲಯದಿಂದ ನೋಟೀಸ್ ಜಾರಿ ಮಾಡಿರುವ ಸಂಗತಿಯನ್ನು ರಾಜ್ಯ ರೈತಸಂಘ ಬಹಿರಂಗ ಗೊಳಿಸಿದೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿದ ರಾಜ್ಯ ರೈತಸಂಘದ ಪದಾಧಿಕಾರಿಗಳು, ರೈತ ಮಹಿಳೆಗೆ ನೀಡಿರುವ ಕೋರ್ಟ್ ನೋಟೀಸ್ ಅನ್ನು ಪ್ರದರ್ಶಿಸಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲೇ ಬ್ಯಾಂಕ್‌ಗಳು ರೈತರಿಗೆ ನೋಟೀಸ್ ಜಾರಿಗೊಳಿಸುತ್ತಿವೆ. ಸಾಲ ಮನ್ನಾ ಯೋಜನೆ ಬಗ್ಗೆ ಬ್ಯಾಂಕ್‌ಗಳಿಗೆ ನಂಬಿಕೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಗೆ ನೋಟೀಸ್

ತಾಲೂಕಿನ ಕುರಿದೊಡ್ಡಿ ಗ್ರಾಮದ ಶಾರದಮ್ಮ  ತಮ್ಮ ೫ ಎಕರೆ ಭೂಮಿಯಲ್ಲಿ ಬೆಳೆ ಬೆಳೆಯಲು ೨೦೧೧ರಲ್ಲಿ ಬೇವೂರು ಗ್ರಾಮದ ಕೆನರಾ ಬ್ಯಾಂಕ್‌ನಿಂದ ೫ ಲಕ್ಷ ರೂ. ಸಾಲ ಪಡೆದಿದ್ದರು. ಬರ ಹಾಗೂ ಬೆಲೆ ಕುಸಿತದ ಪರಿಣಾಮ ಇವರು ಸಾಲವನ್ನು ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದ ಹಿನ್ನೆಯಲ್ಲಿ ಇವರು ನಿಟ್ಟುಸಿರು ಬಿಟ್ಟಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ನೋಟೀಸ್ ಜಾರಿ ಮಾಡಿಸುವ ಮೂಲಕ ಇವರು ನ್ಯಾಯಾಲಯಕ್ಕೆ ಅಲೆದಾಡುವಂತಾಗಿದೆ.

ಮಕ್ಕಳಿಗೂ ನೋಟೀಸ್

ಸಾಲ ಪಡೆದಿರುವ ಶಾರದಮ್ಮ ಮಾತ್ರವಲ್ಲದೆ ಅವರ ಮಕ್ಕಳಾದ ಉಮಾಪತಿ, ಯೋಗಾನಂದ, ಪಂಕಜಗೆ ಬ್ಯಾಂಕ್ ಕಡೆಯಿಂದ ಕೋರ್ಟ್‌ಗೆ ಬರುವಂತೆ ನೋಟೀಸ್ ನೀಡಲಾಗಿದೆ ಎಂದು ರೈತಸಂಘದ ಮುಖಂಡರು ತಿಳಿಸಿದರು. ಮದುವೆಯಾಗಿ ಗಂಡನ ಮನೆಯಲ್ಲಿರುವ ಮಗಳಿಗೂ ನೋಟೀಸ್ ಜಾರಿ ಮಾಡಿ ಅವರ ಸಂಸಾರ ಹಾಳು ಮಾಡಲು ಬ್ಯಾಂಕ್ ಮುಂದಾಗಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸ್ಪಷ್ಟೀಕರಿಸಲಿ

:ಚುನಾವಣೆಗೆ ಮುನ್ನಾ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ಸಾಲ ಮನ್ನಾ ಮಾಡುತ್ತೇನೆ, ರೈತರು ಯಾವುದೇ ಕಾರಣಕ್ಕೂ ಅಂಜಬೇಕಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಮುಖ್ಯಮಂತ್ರಿಗಳ ಮಾತು ನಂಬಿ ಸಾಲ ಕಟ್ಟದ ರೈತರು ಇದೀಗ ನ್ಯಾಯಾಲಯಕ್ಕೆ ಅಲೆದಾಡುವಂತಾಗಿದ್ದು, ಈ ಬಗ್ಗೆ ಸಿಎಂ ಸ್ಪಷ್ಟೀಕರಣ ನೀಡಬೇಕು ಎಂದು ರೈತಸಂಘದ ಪದಾಧಿಕಾರಿಗಳು ಇದೇ ವೇಳೆ ಒತ್ತಾಯಿಸಿದರು.

ಮುಖ್ಯಮಂತ್ರಿಗಳು ವೇದಿಕೆಗಳಲ್ಲಿ ಹೇಳುವ ಬದಲು ಸಾಲ ಮನ್ನಾಬಗ್ಗೆ ಬ್ಯಾಂಕ್‌ಗಳಿಗೆ ಸೂಚನೆ ನೀಡಲಿ. ಬ್ಯಾಂಕ್‌ಗಳು ಸುಳ್ಳು ಹೇಳುತ್ತಿವೆಯೋ, ಇಲ್ಲಾ ಮುಖ್ಯಮಂತ್ರಿಗಳೇ ಸುಳ್ಳು ಹೇಳುತ್ತಿದ್ದಾರೋ ಎಂಬ ಗೊಂದಲ ರೈತರಲ್ಲಿ ಮೂಡಿದ್ದು ಕೂಡಲೇ ಸಿಎಂ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಲಿ. ರೈತರ ಭಾವನೆಯ ಜತೆ ಆಡವಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಅಕ್ರಮ ಗಣಿಗಾರಿಕೆ

ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಅಕ್ರಮ ಕಲ್ಲುಗಣಿಗಾರಿಕೆಯನ್ನು ನಡೆಸಲಾಗುತ್ತಿದೆ. ರಾತ್ರಿವೇಳೆ ಸ್ಫೋಟಕಗಳನ್ನು ಬಳಸಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದು, ಇದರಿಂದಾಗಿ ಪರಿಸರದ ಮೇಲೆ ಹಾನಿಯಾಗುತ್ತಿದೆ. ಸ್ಫೋಟದ ವೇಳೆ ಕಲ್ಲಿನ ಚೂರುಗಳು ಹಾರಿ ಬಂದು ಎಲ್ಲೆಡೆ ಬೀಳುತ್ತಿವೆ. ಇದರಿಂದಾಗಿ ರಾತ್ರಿ ವೇಳೆ ಜನ ಮನೆಯಿಂದ ಹೊರಬರಲು ಅಂಜುತ್ತಿದ್ದಾರೆ. ಈ ಬಗ್ಗೆ ಅರ್ಜಿಸಲ್ಲಿಸಿದರೆ ತಹಸೀಲ್ದಾರ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಉದಾಸೀನ ಮಾಡುವ ಮೂಲಕ ಅಕ್ರಮ ಗಣಿಗಾರಿಕೆ ಕುಮ್ಮಕ್ಕು ನೀಡುತ್ತಿದ್ದಾರೆ. ಅಧಿಕಾರಿಗಳ ನಡೆ ಅನುಮಾನ ಮೂಡಿಸಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಆರೋಪಿಸಿದರು.

ರೈತರ ಸಭೆ ನಡೆಸುತ್ತಿಲ್ಲ

ಈ ಹಿಂದೆ ಪ್ರತಿ ಮೂರು ತಿಂಗಳಿಗೊಮ್ಮೆ ರೈತರ ಕುಂದುಕೊರತೆ ಸಭೆಯನ್ನು ಕರೆಯಲಾಗುತಿತ್ತು. ಆದರೆ ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆ ಮತ್ತು ತಾಲೂಕಿನಲ್ಲಿ ಒಂದೇ ಒಂದು ರೈತರ ಸಭೆ ಕರೆದಿಲ್ಲ. ಒಮ್ಮೆ ಸಭೆ ಕರೆದಿದ್ದರಾದರೂ ಅದು ಜೆಡಿಎಸ್ ಮುಖಂಡರ ಸಭೆಯಾಗಿತ್ತೇ ವಿನಾ ಅಲ್ಲಿಗೆ ಯಾವುದೇ ರೈತಸಂಘದ ಪದಾಧಿಕಾರಿಗಳನ್ನು ಆಹ್ವಾನಿಸಿರಲಿಲ್ಲ ಎಂದು ರೈತಸಂಘದ ತಾಲೂಕು ಅಧ್ಯಕ್ಷ ಕೃಷ್ಣಪ್ಪ ಆರೋಪಿಸಿದರು.

ಸುದ್ದಿಗೋಷ್ಟಿಯಲ್ಲಿ ರೈತಸಂಘದ ಕಾರ್ಯಾಧ್ಯಕ್ಷ ನಾಗೇಶ್, ಗೌರವಾಧ್ಯಕ್ಷ ತಿಮ್ಮೇಗೌಡ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

 

ಗೋ ರಾ ಶ್ರೀನಿವಾಸ...
ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವು

ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ
ಸಂವಿಧಾನ ಜಾಗೃತಿ ಜಾಥಾ ಗೆ ಸ್ವಾಗತ

ಚನ್ನಪಟ್ಟಣ: ಸಂವಿಧಾನ ಜಾಗೃತಿ ಜಾಥಾಕ್ಕೆ ತಾಲ್ಲೂಕು ಆಡಳಿತದಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ

ಸಂವಿಧಾನ ಜಾಗೃತಿ ಜಾಥಾ

ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ,

ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ
ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ರಾಮನಗರ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2019-20, 2020-21, 2021-22 ಮತ್ತು 2022-23ರ (ಜುಲೈ ಆವೃತ್ತಿ) ದ್ವಿತೀಯ/ತೃತೀಯ ವರ್ಷದ ಬಿ

ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ
ಸರ್ವಸಮ್ಮೇಳನಕ್ಕೂ ಮಾದರಿಯಾಗಿ ಯಶಸ್ವಿಯಾದ \'ಪರಿಸರಕ್ಕಾಗಿ ನಾವು\' ಸಮ್ಮೇಳನ

ಹಾಸನ: ಪ್ರಾಕೃತಿಕ ಸೌಂದರ್ಯವು ಇ-ತ್ಯಾಜ್ಯ, ಕೆಲ ತಂತ್ರಜ್ಞಾನ ಹಾಗೂ ಪ್ಲಾಸ್ಟಿಕ್ ನಿಂದ  ಹಾಳಾಗುತ್ತಿದೆ. ಪರಿಸರ ನಾಶಕ್ಕೆ ಮುನ್ನುಡಿ ಬರೆದವನೇ

೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ
೫೨ ಲಕ್ಷಕ್ಕೂ ಹೆಚ್ಚು ಮೌಲ್ಯದ ಪಡಿತರ ಅಕ್ಕಿ ಗೋದಾಮಿನಲ್ಲೇ ಮಾಯ, ಅಧಿಕಾರಿಗಳಿಂದ ಪರಿಶೀಲನೆ, ವ್ಯವಸ್ಥಾಪಕನ ಬಂಧನ

ಚನ್ನಪಟ್ಟಣ: ತಾಲ್ಲೂಕಿನಾದ್ಯಂತ ಪಡಿತರ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲು ಪಡಿತರ ಅಕ್ಕಿಯ ಪೈಕಿ ಸುಮಾರು ೫೨ ಲಕ್ಷಕ್ಕೂ  ಮೌಲ್ಯದ ೧,೫೪೩.೬೫ ಕ್ವಿಂಟಾಲ್ ಅ

ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್
ದಸರಾ ಎಂಬುದು ಮೈಸೂರಿಗಷ್ಟೇ ಸೀಮಿತವಾಗಬಾರದು, ಮನ-ಮನೆಯಲ್ಲೂ ದಸರಾ ಆಗಬೇಕು. ಡಾ ರೂಪಾ ಶ್ರೀಧರ್

ಚನ್ನಪಟ್ಟಣ: ದಸರಾ ಎಂದರೆ ಕೇವಲ ಮೈಸೂರು ಎಂಬಂತಾಗಿದೆ, ಇದು ನಾಡ ಹಬ್ಬ ಎಂಬುದು ಕೇವಲ ಉಲ್ಲೇಖಕ್ಕಷ್ಟೇ ಸೀಮಿತವಾಗಿದೆ. ಇದು ನಾಡಹಬ್ಬ ಎಂಬುದು ಸರ

ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ
ಒಕ್ಕಲಿಗರು ಸಂಸ್ಕೃತಿ ಹಿeನರಲ್ಲ ನೈಜ ಸಂಸ್ಕೃತಿಯ ಮಾಲೀಕರು, ಪ್ರೊ ಭಗವಾನ್ ಗೆ ತಿರುಗೇಟು ನೀಡಿದ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ

ರಾಮನಗರ: ಚನ್ನಪಟ್ಟಣ; ಪ್ರೊ ಭಗವಾನ್ ವಿಚಾರವಾದಿ, ಮೂಢನಂಬಿಕೆಗಳನ್ನು ಕಿತ್ತೊಗೆಯಲು, ಪುರಾಣ ಎಂಬುದು ಕಪೋಲ ಕಲ್ಪಿತ, ಇತಿಹಾಸ ಎಂಬುದು ಸಾರ್ವಕಾಲ

Top Stories »  


Top ↑