ಅಕ್ಕೂರು ರಾಮಕೃಷ್ಣಯ್ಯ ಇನ್ನು ನೆನಪು ಮಾತ್ರ
ತನ್ನ ಸಮಕಾಲೀನ ಗೆಳೆಯರೊಂದಿಗೆ ಯಾವಾಗಲೂ ಸಮಾಜದ ಸ್ಥಿತಿಗತಿ, ರಾಜಕೀಯ, ಕೃಷಿಯ ಬಗ್ಗೆ ಚರ್ಚಿಸುತ್ತಿದ್ದ ಸಿ. ರಾಮಕೃಷ್ಣಯ್ಯ ಏಪ್ರಿಲ್ 2ರಂದು ಸೋಮವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅಕ್ಕೂರು ರಾಮಕೃಷ್ಣಯ್ಯ ಎಂದೆ ಖ್ಯಾತರಾಗಿದ್ದ ಇವರು ಸ್ನೇಹಜೀವಿಯಾಗಿದ್ದರು.
ಆ ಕಾಲದಲ್ಲೇ ಬಿ.ಎಸ್ಸಿ ಪದವೀಧರರಾಗಿದ್ದ ಇವರು ಸಂಘಟನಾ ಶಕ್ತಿಯನ್ನು ಹೊಂದಿದ್ದರು. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ತಮಗೆ ಅನಿಸಿದನ್ನು ಮಾಡುವಲ್ಲಿ ಯಶಸ್ವಿಯಾಗುತ್ತಿದ್ದರು. ಮೊದಲು ವ್ಯವಸಾಯದಲ್ಲಿ ತೊಡಗಿಸಿಕೊಂಡ ಇವರು ಉತ್ತಮ ಕೃಷಿಕರಾದರು. ರಾಮನಗರಕ್ಕೆ ಪಂಪ್ ಸೇಟ್ಗಳನ್ನು ಪರಿಚಯಿಸಿದ ಕೀರ್ತಿ ಅಕ್ಕೂರು ರಾಮಕೃಷ್ಣಯ್ಯ ಅವರಿಗೆ ಸಲ್ಲುತ್ತದೆ.
1960ರ ಸಮಯದಲ್ಲಿ ಇವರು ಪಿಎಸ್ಜಿ ಪಂಪ್ಸೆಟ್ಗಳ ಡೀಲರ್ ಆಗಿದ್ದರು. ಈಗಲೂ ಇವರು ನೀಡಿರುವ ಪಂಪ್ ಮೋಟಾರ್ಗಳು ಚೆನ್ನಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಲವು ಮಂದಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯರು ಈಗಲೂ ನೆನೆಸಿಕೊಳ್ಳುತ್ತಾರೆ.
ಕೃಷಿ ಚಟುವಟಿಕೆಯ ಜೊತೆಗೆ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡ ರಾಮಕೃಷ್ಣಯ್ಯ ಅವರು ಮೊದಲು ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ನಂತರ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡಿದರು. ಕೂಟಗಲ್ ಹೋಬಳಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಆ ಕಾಲದಲ್ಲಿಯೆ ಇವರು ಪ್ರಮುಖ ಪಾತ್ರ ವಹಿಸಿದ್ದರು.
ಈಗ ವಿಧಾನ ಪರಿಷತ್ ಸದಸ್ಯರಾಗಿರುವ ಸಿ.ಎಂ. ಲಿಂಗಪ್ಪ ಅವರು ಶಾಸಕರಾಗಿ ಆಯ್ಕೆಯಾಗಲು ರಾಮಕೃಷ್ಣಯ್ಯ ಅವರ ಕೊಡುಗೆಯು ಇದೆ.
ಅಕ್ಕೂರು : ಮಾಗಡಿ, ಚನ್ನಪಟ್ಟಣ, ಕುಣಿಗಲ್ ಹಾಗೂ ರಾಮನಗರ ತಾಲ್ಲೂಕುಗಳ ಗಡಿ ಗ್ರಾಮವಾಗಿರುವ ಅಕ್ಕೂರು ಗ್ರಾಮಕ್ಕೆ ವಿದ್ಯುತ್ ಸಂಪರ್ವಕವನ್ನು ಕಲ್ಪಿಸಿದ ಕೀರ್ತಿ ರಾಮಕೃಷ್ಣಯ್ಯ ಅವರಿಗೆ ಸಲ್ಲುತ್ತದೆ. ಈಗಲೂ ಹಲವು ಮಂದಿ ರಾಮಕೃಷ್ಣಯ್ಯ ಅವರನ್ನು ಅಕ್ಕೂರುರಾಮಕೃಷ್ಣಯ್ಯ ಎಂದೇ ಕರೆಯುತ್ತಿದ್ದರು.
ಅಭಿವೃದ್ಧಿಯ ದೃಷ್ಟಿಯಿಂದಲೂ ಹಿಂದುಳಿದಿದ್ದ, ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅಕ್ಕೂರು ಗ್ರಾಮದ ಅಭಿವೃದ್ಧಿಗೆ ದಿಕ್ಸೂಚಿಯಾದವರು ರಾಮಕೃಷ್ಣಯ್ಯನವರು. ಅಕ್ಕೂರು ಗ್ರಾಮ ಪಂಚಾಯತ್ನ ಚೇರ್ಮನ್ ಆಗಿ ಸತತ 16 ವರ್ಷಗಳ ಕಾಲ ಆಡಳಿತ ನಡೆಸಿದ್ದರು. ಯಾರಿಗೂ ಎದರದೆ ನೇರ ನಡೆ ನುಡಿಗೆ ರಾಮಕೃಷ್ಣಯ್ಯ ಅವರು ಹೆಸರುವಾಸಿಯಾಗಿದ್ದರು ಎಂದು ಇವರ ಸಮಕಾಲೀನರು ತಿಳಿಸುತ್ತಾರೆ.
ತಾಯಿ ತಾಳ್ಮೆಯ ಪುಟ್ಟಗೌರಮ್ಮ : 70 ವರ್ಷದ ಪುಟ್ಟಗೌರಮ್ಮ ಅವರು ರಾಮಕೃಷ್ಣಯ್ಯ ಅವರ ಪತ್ನಿ. ಇವರು ಪ್ರಗತಿಪರ ರೈತ ಮಹಿಳೆ. ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ವ್ಯವಸಾಯದಲ್ಲಿ ತೊಡಗಿಕೊಂಡಿರುವ ಇವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
3,500 ಕ್ಕೂ ಹೆಚ್ಚು ಮಾವಿನ ಮರಗಳಿರುವ ತೋಟವನ್ನು ಚೆನ್ನಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತೋಟಗಾರಿಕೆ ಬೆಳೆಗಳಾದ ಬಾಳೆ, ರೇಷ್ಮೆ ಮೊದಲಾದವುಗಳನ್ನು ಬೆಳೆದಿದ್ದಾರೆ.
ಆರ್. ಕುಮಾರಸ್ವಾಮಿ : ರಾಮನಗರ ಜಿಲ್ಲೆಯಲ್ಲಿ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳು ತನ್ನದೇ ಆದ ಗುರುತನ್ನು ಮೂಡಿಸಿದೆ. ಈ ಸಂಸ್ಥೆಗಳ ಸಂಸ್ಥಾಪಕ ಕಾರ್ಯದರ್ಶಿಯಾಗಿ ಆರ್. ಕುಮಾರಸ್ವಾಮಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ಕೂರು ರಾಮಕೃಷ್ಣಯ್ಯ ಅವರ ಮಗನಾದ ಇವರು ಬಿ.ಇ. ಪದವೀಧರರು. ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹವಾದ ಸಾಧನೆ ಮಾಡುತ್ತಿದ್ದಾರೆ. ಜೊತೆಗೆ ವಿವಿಧ ಉದ್ಯಮಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ.
ಸೂಕ್ತ ಸ್ಥಾನಮಾನ ಸಿಗಲಿಲ್ಲ : ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ದುಡಿದ ಅಕ್ಕೂರು ರಾಮಕೃಷ್ಣಯ್ಯ ಅವರಿಗೆ ಸೂಕ್ತ ಸ್ಥಾನಮಾನಗಳನ್ನು ಕಾಂಗ್ರೆಸ್ ಪಕ್ಷ ನೀಡಲಿಲ್ಲ ಎಂದು ಇವರ ಸ್ನೇಹಿತರು ಬೇಸರದಿಂದ ಹೇಳುತ್ತಾರೆ. ಈಗಲಾದರೂ ಇವರ ಪತ್ನಿ ಪುಟ್ಟಗೌರಮ್ಮ ಅವರಿಗೆ ಪಕ್ಷದ ವತಿಯಿಂದ ಸೂಕ್ತ ಸ್ಥಾನಮಾನಗಳನ್ನು ನೀಡಬೇಕು ಎಂದು ಮನವಿ ಮಾಡುತ್ತಾರೆ.
ಲೇಖನ : ಎಸ್. ರುದ್ರೇಶ್ವರ
ಸಂಶೋಧನಾ ವಿದ್ಯಾರ್ಥಿ
ಬೆಂಗಳೂರು ವಿಶ್ವವಿದ್ಯಾಲಯ
ಪ್ರತಿಕ್ರಿಯೆಗಳು5 comments
Recent news in literature »
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್
ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ
ಆರ್. ಕುಮಾರಸ್ವಾಮಿ : ರಾಮನಗರ ಜಿಲ್ಲೆಯಲ್ಲಿ ಶಾಂತಿನಿಕೇತನ ಸಮೂಹ ಶಿಕ್ಷಣ
ಸೂಕ್ತ ಸ್ಥಾನಮಾನ ಸಿಗಲಿಲ್ಲ : ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ದುಡಿದ ಅಕ್ಕೂರು ರಾಮಕೃಷ್ಣಯ್ಯ
dadasdasdas tetsing ರಾಮಕೃಷ್ಣಯ್ಯರಾಮಕೃಷ್ಣಯ್ಯ
Abshvs vshve vsbsbvsbe vsv dbvsbjsjj
Bdhdjhdrbbbebsssbbsbsbss
Ahshdnejsvf
fdg fghfd fgjhndfj fgh
ಅವರ ಪತ್ನಿಗಾದರೂ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು...