Tel: 7676775624 | Mail: info@yellowandred.in

Language: EN KAN

    Follow us :


ಮಾದರಿ ಜೀವನ ನಡೆಸಿದ ಹುಣಸನಹಳ್ಳಿ ಸಹೋದರರು

Posted date: 16 Apr, 2018

Powered by:     Yellow and Red

ಮಾದರಿ ಜೀವನ ನಡೆಸಿದ ಹುಣಸನಹಳ್ಳಿ ಸಹೋದರರು

        ಅಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾಗಿದ್ದ ಇಂದಿನ ರಾಮನಗರದಲ್ಲಿ ಜೆಡಿಎಸ್ ಪಕ್ಷ ಗಟ್ಟಿಯಾಗಿ ಬೆರೂರಲು ಕಾರಣರಾದವರು ಕೈಲಾಂಚ ಹೋಬಳಿ ಹುಣಸನಹಳ್ಳಿ ಗ್ರಾಮದ ಮಾರೇಗೌಡ ಕುಟುಂಬದವರು. 

    ಹುಣಸನಹಳ್ಳಿಯ ಮಾರೇಗೌಡರು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪೆರೇಡ್‌ಗೆ ರಾಮನಗರದಿಂದ ಪೂಜಾ ಕುಣಿತ ತಂಡವನ್ನು ಕರೆದುಕೊಂಡು ಹೋಗಿದ್ದರು. ಈ ಭಾಗದ ಸುತ್ತಮುತ್ತಲಿನ ಹಳ್ಳಿಗಳ ಜನರಿಗೆ ನ್ಯಾಯ, ಪಂಚಾಯಿತಿಯ ಮೂಲಕ ನ್ಯಾಯವನ್ನು ಕೊಡಿಸುತ್ತಿದ್ದರು. ಕೈಲಾಂಚ ಹೋಬಳಿಗೆ ಮೊದಲ ಪಂಪ್ ಸೆಟ್‌ ಅನ್ನು ತಂದ ಕೀರ್ತಿ ಇವರದು. ಇದರ ಜೊತೆಗೆ ವಿದ್ಯುತ್‌ ಕಬ್ಬು ಅರೆಯುವ ಗಾಣವನ್ನು ಹಾಕುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. ರಾಮನಗರದಿಂದ ಹುಣಸನಹಳ್ಳಿಗೆ ರಸ್ತೆಯನ್ನು ಮಾಡಿಸಿದ್ದಾರೆ. ಮಾವಿನ ಸಸಿಗಳನ್ನು ಮೊದಲು ನೆಟ್ಟ ಕೀರ್ತಿ ಇವರಿಗೆ ಸಲ್ಲುತ್ತದೆ. 

    ಪೌರಾಣಿಕ ನಾಟಕಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ವೇದಿಕೆಗಳನ್ನು ನೂರಾರು ವೇದಿಕೆಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಉತ್ತಮ ಬೇಟೆಗಾರರು ಆಗಿದ್ದ ಇವರು ಹುಣಸನಹಳ್ಳಿಗೆ 1965ರಲ್ಲೆ ನೂತನ ಅಂಬಾಸಿಡರ್ ಕಾರನ್ನು ತಂದಿದ್ದರು. ರೆಡಿಯೋವನ್ನು ಹುಣಸನಹಳ್ಳಿಗೆ ಪರಿಚಯಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. 

    ಮಾರೇಗೌಡರು ತಮ್ಮ ಜೀವನದ ಪ್ರಾರಂಭದಿಂದಲೂ ಕಾಂಗ್ರೆಸ್ ಪಕ್ಷದ ವಿರೋಧಿಯಾಗಿದ್ದರು. ಇದೇ ಹೋಬಳಿಯ ಲಕ್ಕಪ್ಪನಹಳ್ಳಿಯ ಕೆಂಗಲ್‌ ಹನುಮಂತಯ್ಯ (ಮಾಜಿಮುಖ್ಯಮಂತ್ರಿ) ಇವರಿಗೆ ಪ್ರಬಲ ಪ್ರತಿಸ್ಫರ್ಧೆಯನ್ನು ಒಡ್ಡುತ್ತಿದ್ದರು. ಅಂದು ಅಸ್ತಿತ್ವದಲ್ಲಿದ್ದ ಸಂಸ್ಥಾ ಕಾಂಗ್ರೆಸ್ ಪಕ್ಷದ ಬಿ.ಆರ್. ಧನಂಜಯ ಶಾಸಕರಾಗಲು ಇವರ ಶ್ರಮ ಬಹುಪಾಲು ಇತ್ತು. (ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ). 

    ಇವರಿಗೆ ನಾಲ್ವರು ಗಂಡು ಮಕ್ಕಳು. ಎಚ್.ಎಂ. ನಂಜಪ್ಪ, ಎಚ್.ಎಂ. ಕಪನಯ್ಯ, ಎಚ್.ಎಂ.ಪುಟ್ಟಸ್ವಾಮಯ್ಯ ಹಾಗೂ ಎಚ್.ಎಂ. ರಾಮೇಗೌಡ (ಹುಣಸನಹಳ್ಳಿ ರಾಮಣ್ಣ). 

    ಎಚ್.ಎಂ. ನಂಜಪ್ಪ ಅವರು 87 ವರ್ಷಗಳ ಕಾಲ ಬದುಕಿದ್ದರು. ಇವರು 22 ವರ್ಷಗಳ ಕಾಲ ಹುಣಸನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದರು. ಹುಣಸನಹಳ್ಳಿಯಲ್ಲಿ ಹಾಲಿನ ಡೈರಿಯನ್ನು ಸ್ಥಾಪಿಸಿ. 20 ವರ್ಷಗಳ ಕಾಲ ಇದರ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿ, 8 ಲಕ್ಷ ಹಣವನ್ನು ಉಳಿಸಿದ್ದರು. ಜೊತೆಗೆ ಡೈರಿಗೆ ಸ್ವಂತ ಕಟ್ಟಡವನ್ನು ಕಟ್ಟಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು. 

    ರಾಮನಗರ ತಾಲ್ಲೂಕಿನ ರಾಜಕೀಯದ ಸಂಪೂರ್ಣ ಹಿಡಿತ ಹೊಂದಿದ್ದ ಇವರು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ, ಅಹಂಕಾರದಿಂದ ವರ್ತಿಸಿದವರಲ್ಲ. ಯಾವಾಗಲೂ ಮೌನದಿಂದ ಇರುತ್ತಿದ್ದ ತಾವು ಅಂದುಕೊಂಡ ಕೆಲಸವನ್ನು ಮಾಡಿ ಮುಗಿಸುತ್ತಿದ್ದರು. ಆಡಂಬರದ ಜೀವನಕ್ಕೆ ಮಾರು ಹೋಗದೆ ಸರಳ ಜೀವನವನ್ನು ನಡೆಸುತ್ತಿದ್ದರು.

    1989ರಲ್ಲಿ ಜನತಾ ದಳ ವಿಭಾಗ ವಾದಾಗ ಎಚ್.ಡಿ. ದೇವೇಗೌಡರ ಪರವಾಗಿ ನಿಂತು ಅವರಲ್ಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದರು. ಜೊತೆಗೆ ಸಮಾಜವಾದಿ ಜನತಾ ಪಕ್ಷದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಹುಣಸನಹಳ್ಳಿಯ ಅಭಿವೃದ್ಧಿಗೆ ಕಾರಣರಾದ ನಂಜಪ್ಪ ಅವರ ನಿಧನರಾದಾಗ ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್‌ ಅಂತಿಮ ನಮನ ಸಲ್ಲಿಸಲು ಬಂದಿದ್ದರು. 

    1994ರಲ್ಲಿ ಎಚ್.ಡಿ. ದೇವೇಗೌಡ ಅವರನ್ನು ರಾಮನಗರಕ್ಕೆ ಕರೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದವರು ನಂಜಪ್ಪ ಅವರು. ಈ ವಿಷಯವನ್ನು ಸ್ವತಃ ದೇವೇಗೌಡ ಅವರೆ ಹಲವು ಕಡೆ ತಮ್ಮ ಭಾಷಣಗಳಲ್ಲಿ ಹೇಳಿದ್ದಾರೆ.

    ನಂಜಪ್ಪ ಅವರು ವರದೇಗೌಡ, ಬಿ. ಪುಟ್ಟಸ್ವಾಮಯ್ಯ, ಬಿ.ಆರ್. ಧನಂಜಯ್ಯ, ಬೋರಯ್ಯ ಅವರ ಒಡನಾಟವನ್ನು ಹೊಂದಿದ್ದರು. 

    ಇವರ ಪತ್ನಿ ಮರಿಯಮ್ಮ, ಇವರ ಮಗ ಎಚ್.ಎನ್. ಲಕ್ಷ್ಮೀಕಾಂತ್ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿದ್ದಾರೆ. ಜತೆಗೆ ಹುಣಸನಹಳ್ಳಿ ಗ್ರಾಮದ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ಎಚ್.ಎನ್. ನಾಗರಾಜು ಅವರು ಬೆಂಗಳೂರ ಡೈರಿಯಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಚ್.ಎನ್. ಲಿಂಗಪ್ಪ ಅವರು ವಾಪಾರಸ್ಥರಾಗಿದ್ದಾರೆ.

    ಎಚ್.ಎಂ. ಕಪನಯ್ಯ ಅವರು ರಂಗಭೂಮಿ ಕಲಾವಿದರಾಗಿ ನೂರಾರು ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದರು. ರಾಮನಗರ ತಾಲ್ಲೂಕಿನ ರಂಗಭೂಮಿ ಬೆಳೆಯಲು ಇವರು ಕಾರಣ ಕರ್ತರಾಗಿದ್ದಾರೆ. ಇವರು ಮಾಡುತ್ತಿದ್ದ ಆಂಜನೇಯ ಪಾತ್ರವನ್ನು ಈಗಲೂ ಹಿರಿಯರು ನೆನಪು ಮಾಡಿಕೊಳ್ಳುತ್ತಾರೆ. ಇವರು ಕೃಷಿಕರಾಗಿದ್ದರು. ಇವರು ನಿಧನರಾದಾಗ 80 ವರ್ಷ ವಯಸ್ಸಾಗಿತ್ತು. 

    ಇವರ ಪತ್ನಿ ಜಯಮ್ಮ, ಇವರ ಮಗ ಎಚ್.ಕೆ. ನಂಜಯ್ಯ(ಗೋಪಿ) ಕೃಷಿಕರಾಗಿರುವ ಜೊತೆಗೆ ಮಾವು ಬೆಳೆಗಾರರ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 

    ಎಚ್.ಎಂ. ಪುಟ್ಟಸ್ವಾಮಯ್ಯ ಅವರು ಕೃಷಿ ಚಟುವಟಿಕೆಯಲ್ಲಿ ಪರಿಣತಿಯನ್ನು ಹೊಂದಿದ್ದರು. ರೇಷ್ಮೆ ಗೂಡನ್ನು ಬೆಳೆಯುವಲ್ಲಿ ಈ ಭಾಗದಲ್ಲಿ ಹೆಸರು ವಾಸಿಯಾಗಿದ್ದರು. ಶಿಸ್ತು, ಶ್ರದ್ಧೆಯನ್ನು ವ್ಯವಸಾಯದಲ್ಲಿ ಅಳವಡಿಸಿಕೊಂಡಿದ್ದ ಇವರು ಕೃಷಿಯಲ್ಲಿ ನಿಪುಣತೆಯನ್ನು ಹೊಂದಿದ್ದರು. 

    ಉತ್ತಮ ಮಾವಿನ ಗಿಡಗಳು ಹಾಗೂ ಹಸುಗಳನ್ನು ಕೊಂಡುಕೊಳ್ಳಲು ಇವರನ್ನು ಹಲವು ಊರುಗಳ ಜನರು ಬಂದು ತಮ್ಮ ಜೊತೆ ಕರೆದುಕೊಂಡು ಹೋಗುತ್ತಿದ್ದರು. ರೇಷ್ಮೆ ಮೊಟ್ಟೆ ತಂದು ಚಾಕಿ ಮಾಡಿ ಉತ್ತಮವಾಗಿ ರೇಷ್ಮೆ ಗೂಡನ್ನು ಬೆಳೆಯುತ್ತಿದ್ದರು. ಯಾವುದೇ ರೀತಿಯ ಸೌಕರ್ಯಗಳಿಲ್ಲದ ಸಮಯದಲ್ಲಿ ಕೃಷಿ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿದ್ದರು. ಈಚೆಗೆ ನಿಧನರಾದ ಇವರಿಗೆ 81 ವರ್ಷ ವಯಸ್ಸಾಗಿತ್ತು.

    ಇವರ ಪತ್ನಿ ಜಯಲಕ್ಷ್ಮಮ್ಮ, ಇವರ ಮಗ ಎಚ್.ಪಿ. ನಂಜೇಗೌಡ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷರಾಗಿದ್ದಾರೆ. ಇದರ ಜೊತೆಗೆ ಸ್ನೇಹ ಕೂಟ ಸಂಸ್ಥೆ ಸ್ಥಾಪಿಸಿ ಅದರ ಅಧ್ಯಕ್ಷರಾಗಿ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸುವಲ್ಲಿ ತೊಡಗಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಗುತ್ತಿಗೆದಾರರಾಗಿ, ಪೃವೃತ್ತಿಯಲ್ಲಿ ಸಾಂಸ್ಕೃತಿಕ ಸಂಘಟಕರಾಗಿಯೂ ಕೆಲಸ ಮಾಡುತ್ತಿದ್ದಾರೆ. 

    ಎಚ್.ಎಂ. ರಾಮೇಗೌಡ : ಎಚ್.ಎಂ. ರಾಮೇಗೌಡ ಎಂದರೆ ಯಾರಿಗೂ ಗೊತ್ತಾಗುವುದಿಲ್ಲ. ರಾಮನಗರದಲ್ಲಿ ದಿನಸಿ ವ್ಯಾಪಾರಿಗಳ ಪ್ರಮುಖ ಸಾಲಿನಲ್ಲಿ ಕೇಳಿ ಬರುವ ಮೊದಲು ಹೆಸರು ಹುಣಸನಹಳ್ಳಿ ರಾಮಣ್ಣರ ದಿನಸಿ ಅಂಗಡಿ. ರಾಮಣ್ಣ ಅವರು ಕಳೆದ 51 ವರ್ಷಗಳಿಂದ ದಿನಸಿ ವ್ಯಾಪಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಗುಣಮಟ್ಟದ ಆಹಾರ ಪದಾರ್ಥಗಳನ್ನು ಸೂಕ್ತ ಬೆಲೆಗೆ ನೀಡುವುದು ಇವರ ಹೆಗ್ಗಳಿಕೆಯಾಗಿದೆ. 

    ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳದ ಹುಣಸನಹಳ್ಳಿ ರಾಮಣ್ಣ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಚಟುವಟಿಕೆಯಿಂದ ಇದ್ದಾರೆ. ರಾಮನಗರದಲ್ಲಿ ಬಿಗ್‌ ಬಜಾರ್, ಮಾಲ್‌ಗಳು ಬಂದರೂ ರಾಮಣ್ಣ ಅವರ ಅಂಗಡಿಕೆ ಕುಂದುಂಟಾಗಿಲ್ಲ.

ಲೇಖನ–ಎಸ್. ರುದ್ರೇಶ್ವರ, 
ಸಂಶೋಧನಾ ವಿದ್ಯಾರ್ಥಿ,    
ಬೆಂಗಳೂರು ವಿಶ್ವವಿದ್ಯಾಲಯ

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ
ರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪಠ್ಯಪುಸ್ತಕ ಸಮಿತಿಗೆ ಆಯ್ಕೆ

ರಾಜ್ಯ ಪಠ್ಯಪುಸ್ತಕ ಸಮಿತಿಗೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿ ದೊಡ್ಡಸೋಮನಹಳ್ಳಿ ಲೇಖಕರಾದ ಡಾ. ಡಿ.ಸಿರಾಮಚಂದ್ರ ಬರೆದಿರುವ ಸಂಪ್ರೀತಿ ರಾಮಾಯಣ ಪುಸ್ತಕ ಆಯ್ಕೆಯಾಗಿದೆ.


<

ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ
ಡಾ ಡಿ ಸಿ ರಾಮಚಂದ್ರ ರವರ ಸಂಪ್ರೀತಿ ರಾಮಾಯಣ ಪುಸ್ತಕವು ಶ್ರೀರಾಮನ್ನು ನೆನಪಿಸುತ್ತದೆ. ಪ್ರದೀಪ್ ಕುಮಾರ್ ಹೆಬ್ರಿ

\'ಸಂಪ್ರೀತಿ ರಾಮಾಯಣ\' ಎಂಬ ಕೃತಿಯನ್ನು ಡಾ/ಡಿ.ಸಿ. ರಾಮಚಂದ್ರ ಅವರು ಬಹಳ ಶ್ರದ್ಧೆಯಿಂದ ರಚಿಸಿದ್ದು, 13 ಅಧ್ಯಾಯಗಳಲ್ಲಿ ಆಕರ್ಷಕ ಚಂದದ ಚಿತ್ರಗಳಿಂದ ಕೂಡಿ ಸುಂದರವಾಗಿ ಮುದ್ರಣಗೊಂಡು ಓದುಗರ ಮನ ಸೆಳೆ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರು

ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.
ಸೂಫಿ ಗಾಯಕ ಜನಾಬ್ ಮೊಹಮ್ಮದ್ ಗೆ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ.

ಬೆಂಗಳೂರು.ನ.೨೯: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪರಿಷತ್ತಿನ ಸಂಸ್ಥಾಪಕ, ಜಾನಪದ ಪರಿಷತ್ತಿನ ರೂವಾರಿ ನಾಡೋಜ ಎಚ್.ಎ

ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ
ಪರಿಷತ್ತಿನ ಘನತೆಗೆ ತಕ್ಕುದಾದ ವ್ಯಕ್ತಿ ಪಾರ್ವತೀಶ್ ಬಿಳಿದಾಳೆ

ರಾಮನಗರ.ನ.೧೮: ಈ ಬಾರಿಯ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಹೆಚ್ಚಾಗಬೇಕಾದರೆ ಕನ್ನಡದ ಕಟ್ಟಾಳು, ಲೇಖಕ ಪಾರ್ವತೀಶ್ ಬಿಳಿದಾಳೆ

ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ
ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಬಿ.ಟಿ.ನಾಗೇಶ್ ಬೆಂಬಲಿಸಲು ಸಾಹಿತ್ಯಾಸಕ್ತರ ಮನವಿ

ಚನ್ನಪಟ್ಟಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಸ್ಪರ್ಧಿಗಳ ಪೈಕಿ ಬಿ ಟಿ ನಾಗೇಶ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರಿಗೆ ಜಿಲ್ಲೆಯ ಕಸ

ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
ಎಂ ಎಲ್ ಮಾದಯ್ಯನವರ ಜೀವನ ನಮಗೆಲ್ಲರಿಗೂ ಆದರ್ಶಣೀಯ. ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ

ಚನ್ನಪಟ್ಟಣ.ನ.06/21: ನಗರದ ಶತಮಾನೋತ್ಸವ ಭವನದಲ್ಲಿ ನಿವೃತ್ತ ಮುಖ್ಯ ಇಂಜಿಯರ್ ಎಂ.ಎಲ್ ಮಾದಯ್ಯನವರ ‘ಜೀವನಸೌಧ-ಹಳ್ಳಿಹೈದನ ತಾಂತ್ರಿಕಗಾಥೆ’ ಎಂಬ

ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ
ಶನಿವಾರ ಎಂ ಎಲ್ ಮಾದಯ್ಯನವರ ಜೀವನ ಸೌಧ ಕೃತಿ ಲೋಕಾರ್ಪಣೆ

ಚನ್ನಪಟ್ಟಣ.ನ.೦೨: ಇದೇ ತಿಂಗಳು 6 ನೇ ತಾರೀಖಿನ ಶನಿವಾರ ದಂದು ಬೆಳಿಗ್ಗೆ 10.30 ಕ್ಕೆ ನಗರದ ಬಾಲಕರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಹೊರಾಂಗಣದಲ್ಲಿರುವ ಶತಮಾನೋತ್ಸವ ಭವನದಲ್ಲಿ ‘ತಮ್ಮ ಜೀವನ ಸೌಧ’ ಹಳ್

ಬುದ್ದನ ಸಕಾರತ್ಮಕ ಚಿಂತನೆಗಳು ಮನೋಬಲವನ್ನು ಹೆಚ್ಚಿಸುವುದರ ಮೂಲಕ :ಆತ್ಮಹತ್ಯೆ ಆಲೋಚನೆಯಿಂದ ದೂರವಿಡುತ್ತವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ  ರೋಟರಿ ಸಿಲ್ಕ್ ಸಿಟಿ ಮತ್ತು ರಾಮನಗ

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪ

Top Stories »  


Top ↑