ಹೆಸರು ಬದಲಿಸಿದ ಪತಂಜಲಿಯ \'ಕಿಂಬೋ\' ಆ್ಯಪ್..?
ಯೋಗ ಗುರು ಬಾಬಾ ರಾಮ್ದೇವ್ ಒಡೆತನದ ಪತಂಜಲಿ ಕಂಪನಿ ಮೇ ತಿಂಗಳಲ್ಲಿ 'ಕಿಂಬೋ' ಎನ್ನುವ ಮೆಸೇಜಿಂಗ್ ಆ್ಯಪ್ ಒಂದನ್ನು ಪರಿಚಯಿಸಿತ್ತು. ಆದರೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಆ್ಯಪ್ ಅನ್ನು ಪ್ಲೇ ಸ್ಟೋರ್ನಿಂದ ತೆಗೆದು ಹಾಕಲಾಯಿತು. ಇದಕ್ಕೆ ಮುಖ್ಯ ಕಾರಣ ಈ ಆ್ಯಪ್ ಅಮೆರಿಕ ಮೂಲದ ಫ್ರಿಮೊಂಟ್ ಕಂಪನಿಯ 'ಬೋಲೊ' ಆ್ಯಪ್ನ ನಕಲು ಎಂದು ಮೂಲ ಕಂಪನಿ ವಾದಿಸಿತ್ತು.
ಇದೀಗ 'ಕಿಂಬೋ' ಅಪ್ಲಿಕೇಶನ್ 'Bolo' ಹೆಸರಿನ ಮೆಸೆಂಜರ್ನಿಂದ ಅಧಿಕೃತವಾಗಿ ನವೀಕರಣಗೊಂಡಿದೆ. ಕಿಂಬೋ ಆ್ಯಪ್ ಇದ್ದ ಜಾಗದಲ್ಲಿ ಬೋಲೋ ಅಪ್ಡೇಟ್ ಮಾಡಲಾಗಿದೆ. ಆದರೆ ಕಿಂಬೋ ಆ್ಯಪ್ನ ಲೇಟೆಸ್ಟ್ ಎಡಿಷನ್ ಬೋಲೋ ಎಂಬ ಸುದ್ದಿಯನ್ನು ಪತಂಜಲಿಯ ವಕ್ತಾರ ತಿಜಾರವಾಲ ತಳ್ಳಿ ಹಾಕಿದ್ದಾರೆ. ಅಲ್ಲದೆ ಪತಂಜಲಿಯ ಹೊಸ ಆ್ಯಪ್ನ್ನು ಶೀಘ್ರದಲ್ಲೇ ಆಚಾರ್ಯ ಬಾಲಕೃಷ್ಣ ಮತ್ತು ಬಾಬಾ ರಾಮ್ದೇವ್ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಬೋಲೋ ಆ್ಯಪ್ ತಯಾರಿಸಿದ ಅದಿತಿ ಕಮಲ್ ಕೂಡ ಭಾರತೀಯರಾಗಿದ್ದು, ಸದ್ಯ ಇದನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ಮಾತ್ರ ಡೌನ್ಲೋಡ್ ಮಾಡಬಹುದಾಗಿದೆ. ಅಲ್ಲದೆ ಶೀಘ್ರದಲ್ಲೇ iOS ನಲ್ಲೂ ಲಭ್ಯವಾಗಲಿದ್ದು, ಇದನ್ನು ಭಾರತೀಯರಿಗಾಗಿ ವಿಶೇಷವಾಗಿ ತಯಾರಿಸಲಾಗಿದೆ ಎಂದು ಅದಿತಿ ತಿಳಿಸಿದ್ದಾರೆ.
Bolo ಆ್ಯಪ್ನ ಫೀಚರ್ಸ್ ಕೂಡ ವಾಟ್ಸಪ್ ಅನ್ನು ಹೋಲುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತದಲ್ಲಿ WhatsApp ಗೆ ಪ್ರಮುಖ ಪ್ರತಿಸ್ಪರ್ಧಿಯಾಗುವ ನಿರೀಕ್ಷೆಯಿದೆ. ಈ ಆ್ಯಪನ್ನು ಓಪನ್ ಮಾಡುತ್ತಿದ್ದಂತೆ Chats, Contacts ಮತ್ತು Activity ಎಂಬ ಮೂರು ಆಯ್ಕೆಗಳ ಐಕಾನ್ಗಳನ್ನು ನೀಡಲಾಗಿದೆ.
ವಾಟ್ಸಪ್ನಲ್ಲಿರುವಂತೆ ಈ ಆ್ಯಪ್ನಲ್ಲೂ ಮೆಸೇಜ್, ಫೋಟೋ ಮತ್ತು ಆಡಿಯೋ ಕ್ಲಿಪ್ಗಳನ್ನು ಶೇರ್ ಮಾಡಬಹುದಾಗಿದ್ದು, ವಿಡಿಯೋ ಕರೆ ಮಾಡುವ ಆಯ್ಕೆ ಇದರಲ್ಲಿದೆ. ಈ ಅಪ್ಲಿಕೇಶನ್ ಸಂಪೂರ್ಣ ಸುರಕ್ಷಿತ ಮತ್ತು ಇದರಲ್ಲಿ ಯಾವುದೇ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು Bolo ಆ್ಯಪ್ ತಯಾರಕರು ತಿಳಿಸಿದ್ದಾರೆ.
Recent news in nation »
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು