ಮುರಿದ ಮಗುವಿನ ಕೈ ಸ್ಪ್ರಿಂಗ್ ಫೀಲ್ಡ್ ಶಾಲೆ ವಿರುದ್ಧ ದೂರು
ದಿನಾಂಕ ೨೧.೦೨.೨೦೧೯ ರ ಗುರುವಾರ ಮಧ್ಯಾಹ್ನ ಊಟದ ಸಮಯದ ನಂತರ ಕೊಠಡಿಗೆ ತೆರಳುವ ಮುನ್ನ ನಮ್ಮ ಮಗು ಚಂದನ್ ಗೌಡ ಬಿದ್ದು ಎಡಗೈನ ಮೂಳೆ ಮುರಿದಿದ್ದು ಸಂಜೆ ನಾಲ್ಕು ಗಂಟೆ ಹತ್ತು ನಿಮಿಷಗಳ ವರೆಗೂ ಶಾಲಾ ಸಿಬ್ಬಂದಿಯಾಗಲಿ ಶಾಲಾ ಶಿಕ್ಷಕರಾಗಲಿ ಆಡಳಿತ ಮಂಡಳಿಯಾಗಲಿ ನೋಡಿಕೊಳ್ಳದೆ ಪ್ರತಿ ದಿನ ಕಳುಹಿಸುವ ಬಸ್ ನಲ್ಲಿ ಕಳುಹಿಸದೆ ನಾಲ್ಕು ಗಂಟೆ ಹತ್ತು ನಿಮಿಷಗಳ ನಂತರ ನೋಡಿಕೊಂಡು ಪ್ರಥಮ ಚಿಕಿತ್ಸೆಯನ್ನು ಮಾಡದೇ ಏಕಾಏಕಿ ಹಾಗೆಯೇ ಬೇರೊಂದು ಬಸ್ಸಿನಲ್ಲಿ ಮನೆಗೆ ಕಳುಹಿಸುತ್ತಾರೆ .
ನಾಲ್ಕು ಗಂಟೆ ಹತ್ತು ನಿಮಿಷಕ್ಕೆ ಫೋನ್ ಮಾಡಿದ ಶಾಲೆಯವರು ನಿಮ್ಮ ಮಗುವಿಗೆ ಕೈ ಏಟಾಗಿದೆ ನೋಡಿಕೊಳ್ಳಿ ಎಂದಷ್ಟೇ ಹೇಳಿರುತ್ತಾರೆ .
ಮಗು ನೋವಿನಿಂದ ಚೀರಾಟ ಮಾಡುತ್ತಿದ್ದುದನ್ನು ಗಮನಿಸಿದ ನಾವು ವಿಚಾರಿಸಿದಾಗ ಕೈ ತೋರಿಸಿ ಜೋರಾಗಿ ಅಳಲಾರಂಭಿಸಿತು, ಕೈ ಬಾಳೆ ಕಂಬದಂತೆ ದಪ್ಪವಾಗಿ ಊದಿಕೊಂಡಿದ್ದು ನಂತರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ವೈದ್ಯರು ಲಭ್ಯವಿಲ್ಲದ ಕಾರಣ ಬಿ ಜೆ ಲಿಂಗೇಗೌಡ ಆಸ್ಪತ್ರೆಗೆ ತೆರಳಿ ಎಕ್ಸರೇ ಮಾಡಿಸಿದಾಗ ಎಡಗೈ ಮುಂಗೈ ಮೂಳೆ ಮುರಿದಿರುವುದಾಗಿ ತಿಳಿದು ಬಂತು..
ಈ ಎಲ್ಲಾ ಪ್ರಕ್ರಿಯೆಗಳನ್ನು ಗಮನಿಸಿದ ನಾವು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದಿದ್ದು ಅದೇ ಸಮಯದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮ್ಯಾನೇಜರರನ್ನು ಕರೆಸಿ ಇನ್ನು ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜೊತೆಗೆ ಇಂದು ಆಗುವ ಖರ್ಚುಗಳನ್ನು ನೋಡಿಕೊಳ್ಳಬೇಕೆಂದು ಸೂಚಿಸಿದರು.
ನಮ್ಮ ಮಗುವಿಗೆ ಈ ಶಾಲೆಯಲ್ಲಿ ಆದ ಅವಘಡವು ಮತ್ತೊಂದು ಮಗುವಿಗೆ ಆಗಬಾರದೆಂಬ ದೃಷ್ಟಿಯಿಂದ ಹಾಗೂ ಬೇರೆ ಶಾಲೆಯಲ್ಲೂ ಸಹ ಆಗಬಾರದೆಂಬ ಉದ್ದೇಶದಿಂದ ನಾನು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ರಾಮನಗರದ ಉಪ ನಿರ್ದೇಶಕರಿಗೆ ಹಾಗೂ ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದೇನೆ ಎಂದು ಪೋಷಕರಾದ ಸುಷ್ಮಾ ಮತ್ತು ನಾಗೇಂದ್ರ ತಿಳಿಸಿದರು.
ನನ್ನ ಮಗ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬಂದಿದ್ದು ಆರ್ ಟಿ ಇ ಮಗುವೆಂಬ ಕಾರಣಕ್ಕಾಗಿ ಅವನನ್ನು ಪರಿಗಣಿಸದೇ ಅವನ ಹಿಂದೆ ಬಂದ ಮಗುವಿಗೆ ಪ್ರಥಮ ಸ್ಥಾನವನ್ನು ನೀಡಿರುವುದನ್ನು ಖಂಡಿಸಿದ ಅವರು ಈ ಶಾಲೆಯಲ್ಲಿ ಆರ್ ಟಿ ಇ ಅಡಿಯಲ್ಲಿ ಬಂದ ಮಕ್ಕಳಿಗೆ ಒಂದು ಪಾಠ ಬೇರೆ ಮಕ್ಕಳಿಗೆ ಒಂದು ಪಾಠ ಹಾಗೂ ಸೌಲಭ್ಯಗಳಲ್ಲೂ ತಾರತಮ್ಯ ಮಾಡುತ್ತಿರುವುದು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದರು.
ಖಾಸಗಿ ಶಾಲೆಗಳಲ್ಲಿ ಆರ್ ಟಿ ಇ ಮತ್ತು ಬೇರೆ ಮಕ್ಕಳಿಗೆ ತಾರತಮ್ಯ ಮಾಡುತ್ತಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಬೇಕು ಹಾಗೂ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕೆಂದು ಪೋಷಕರು ಅಧಿಕಾರಿಗಳಿಗೆ ದೂರು ನೀಡುವ ಮೂಲಕ ಮನವಿ ಮಾಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು