ನಿರ್ಭೀತಿಯಿಂದ ಮತದಾನ ಮಾಡಲು ಸೂಕ್ತ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗ
ಮತದಾರ ನಿರ್ಭೀತಿಯಿಂದ ಮತ ಚಲಾಯಿಸಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಚುನಾವಣಾ ಆಯೋಗವು ಸೂಕ್ತ ವ್ಯವಸ್ಥೆ ಮತ್ತು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದಲ್ಲಿ ೨೦೭, ನಗರ ೫೯ ಸೇರಿದಂತೆ ಒಟ್ಟು ೨೬೬ ಮತಗಟ್ಟೆಗಳಿದ್ದು, ಒಟ್ಟು ಮತದಾರರ ಪೈಕಿ ಗಂಡಸರು ೧,೦೬,೭೧೨, ಹೆಂಗಸರು ೧,೧೧೫೦೬. ಇತರೆ ೦೭, ಸೇವಾ ಮತದಾರರು ೪೯ ಮತದಾರರು ಸೇರಿದಂತೆ ಒಟ್ಟು ೨,೧೮, ೨೭೪ ಮತದಾರರಿದ್ದಾರೆ.
ಪ್ರೆಸಿಡಿಂಗ್ ಅಧಿಕಾರಿಗಳು ೩೦೪, ಸಹಾಯಕ ಪ್ರೆಸಿಡಿಂಗ್ ೨೯೦, ಮತದಾನದ ಅಧಿಕಾರಿಗಳು ೫೬೬ ಸೇರಿದಂತೆ ೧೧೬೦ ಅಧಿಕಾರಿಗಳನ್ನು ತಾಲ್ಲೂಕಿನ ಮತಗಟ್ಟೆಗಳಿಗೆ ನಿಯೋಜಿಸಲಾಗಿದೆ.
ಇನ್ನು ವಿವಿ ಪ್ಯಾಟ್ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕರೆದೊಯ್ಯಲು ಕೆ ಎಸ್ ಆರ್ ಟಿ ಸಿ ೪೧ ಬಸ್ಸುಗಳು, ಮ್ಯಾಕ್ಸಿಕ್ಯಾಬ್, ಮಿನಿಬಸ್, ೧೪, ಮತ್ತು ೧೩ ಜೀಪುಗಳು ಸೇರಿದಂತೆ ಒಟ್ಟು ೬೮ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
೦೨ ಸಖಿ (ಪಿಂಕ್) ಮತಗಟ್ಟೆಗಳು, ೦೧ ವಿಶೇಷ ಚೇತನ ಮತಗಟ್ಟೆ, ೦೧ ಮಾದರಿ ಮತಗಟ್ಟೆ ಗಳನ್ನು ವಿಶೇಷವಾಗಿ ರೂಪಿಸಲಾಗಿದೆ. ತಾಲ್ಲೂಕಿನಾದ್ಯಂತ ೩೩೧೦ ಒಟ್ಟು ವಿಶೇಷ ಚೇತನ ಮತದಾರರಿದ್ದು ಇವರಿಗೆ ೬೫ ವಿಶೇಷ ವಾಹನ ಸೌಲಭ್ಯವನ್ನು ಮಾಡಲಾಗಿದೆ.
೫೩ ಸೂಕ್ಷ್ಮ, ೩೨ ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಿದ್ದು ಒಟ್ಟು ೮೯೮ ವಿದ್ಯುನ್ಮಾನ ಮತಯಂತ್ರಗಳನ್ನು ಪರೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ತರಬೇತಿಯೊಂದಿಗೆ ನೀಡಲಾಗಿದೆ.
ಮತದಾನ ಕೇಂದ್ರಕ್ಕೆ ಮತದಾರರು, ಏಜೆಂಟ್ ಗಳು ಸೇರಿದಂತೆ ಯಾರೂ ಸಹ ಮೊಬೈಲ್ ಕೊಂಡೊಯ್ಯಬಾರದು ಎಂದು ಚುನಾವಣಾ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡಿರುವುದಾಗಿ ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು