Tel: 7676775624 | Mail: info@yellowandred.in

Language: EN KAN

    Follow us :


ಜಿದ್ದಾಜಿದ್ದಿ ಇಲ್ಲದೆ ಮಂದಗತಿಯಲ್ಲಿ ಏರಿಕೆಯಾದ ಮತದಾನ

Posted date: 19 Apr, 2019

Powered by:     Yellow and Red

ಜಿದ್ದಾಜಿದ್ದಿ ಇಲ್ಲದೆ ಮಂದಗತಿಯಲ್ಲಿ ಏರಿಕೆಯಾದ ಮತದಾನ

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿಯಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಅಶ್ವಥ್ ನಾರಾಯಣ ರವರ ನೇರ ಸ್ಪರ್ಧೆಯ ಲೋಕಸಭಾ ಚುನಾವಣೆಯು ಇಂದು ಯಾವುದೇ ತಂಟೆ ತಕರಾರು ಇಲ್ಲದೆ ಬಿರುಬೇಸಿಗೆಯಲ್ಲೂ ತಣ್ಣಗೆ ನಡೆಯಿತು.


ಬೆಳಿಗ್ಗೆ ೦೭:೦೦ ಗಂಟೆಗೆ ಆರಂಭಗೊಂಡ  ಮತದಾನವು ೦೯:೦೦ ಗಂಟೆಗೆ ೦೭%, ೧೧:೦೦ ಗಂಟೆಗೆ ೨೨%, ಮಧ್ಯಾಹ್ನ ೦೨:೦೦ ಗಂಟೆಗೆ ೪೦% ಸಂಜೆ ೦೪:೦೦ ಗಂಟೆಗೆ ೬೨% ಹಾಗೂ ಹವಾಮಾನ ತಂಪಾಗುತ್ತಿದ್ದಂತೆ ಮುಕ್ತಾಯದ ಹಂತ ೦೬:೦೦ ಗಂಟೆಗೆ ೭೩:೧೬% ಕ್ಕೆ ಏರಿಕೆಯಾಯಿತು.


ನಗರದ ಷೇರು ಹೋಟೆಲ್ ನ ಉರ್ದು ಶಾಲೆಯ ಸಖಿ (ಪಿಂಕ್), ನಗರಸಭೆ ಆವರಣದ ಮಾದರಿ ಮತಗಟ್ಟೆ, ನೀಲಕಂಠನಹಳ್ಳಿ, ಗೋವಿಂದೇಗೌಡನದೊಡ್ಡಿ, ಹೊಡಿಕೆಹೊಸಹಳ್ಳಿ ಮತ್ತು ಹೊಂಗನೂರು ಗ್ರಾಮಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು, ಎಲ್ಲೆಡೆಯೂ ಬಿಗಿ ಭದ್ರತೆ ಜೊತೆಗೆ ಮತದಾರರಿಗೆ ಹಲವು ಸೌಲಭ್ಯಗಳನ್ನು ಚುನಾವಣಾ ಆಯೋಗ ಕಲ್ಪಿಸಿಕೊಟ್ಟಿತ್ತು.


ಮಾದರಿ ಮತದಾನ ಕೇಂದ್ರಗಳಲ್ಲಿ ಮತದಾರರನ್ನು ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು, ಶುದ್ಧ ಕುಡಿಯುವ ನೀರು, ಮಜ್ಜಿಗೆ ವಿತರಿಸಿ ಮತ ಚಲಾವಣೆ ಮಾಡಿ ಬಂದ ಮತದಾರರಿಗೆ ಉಚಿತವಾಗಿ ಸಸಿಗಳನ್ನು ನೀಡಲಾಯಿತು.

ಸಖಿ (ಪಿಂಕ್) ಮತಗಟ್ಟೆಗಳಲ್ಲಿ ಹಸಿರು ತೋರಣ ಕಟ್ಟಿ, ಕೆಂಪು ಹಾಸು, ಉಸಿರುಬುಂಡೆಗಳಿಂದ ಅಲಂಕರಿಸಲಾಗಿತ್ತು, ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿದ್ದು ಮತದಾರರನ್ನು ಸೆಳೆಯುತ್ತಿತ್ತು.


ವಿಶೇಷ ಚೇತನರಿಗೆ ಹೋಗಿ ಬರುವುದಕ್ಕೆ ಆಟೋ ವ್ಯವಸ್ಥೆ ಮಾಡಲಾಗಿತ್ತು, ಎಲ್ಲಾ ಮತದಾನ ಕೇಂದ್ರಗಳಲ್ಲಿಯೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು, ಆಯಾಯ ಪಕ್ಷದ ಮುಖಂಡರು ಮತ್ತು 'ಬಾಲಕರು' ಸಹ ಮತದಾರರಿಗೆ ಗುರುತು ನೀಡಲು ಹಾಗೂ ಮನವೊಲಿಸಲು ಪೆಂಡಾಲ್ ಹಾಕಿ ಕುಳಿತಿದ್ದದ್ದು ಕಂಡು ಬಂತು.


ತಾಲ್ಲೂಕಿನ ತಿಟ್ಟಮಾರನಹಳ್ಳಿ, ನೀಲಸಂದ್ರ, ಮೊಗೇನಹಳ್ಳಿ, ಸೈಯದ್ ವಾಡಿ ಮತ್ತು ಪೆಟ್ಟಾ ಶಾಲೆಗಳಲ್ಲಿ ವಿದ್ಯುನ್ಮಾನ ಯಂತ್ರಗಳಲ್ಲಿ ದೋಷ ಕಂಡು ಬಂದಿತ್ತಾದರೂ ತಕ್ಷಣ ಎಚ್ಚೆತ್ತ ತಂತ್ರಜ್ಞರು ಸರಿಪಡಿಸಿ ಮತದಾನಕ್ಕೆ ಅನುವು ಮಾಡಿಕೊಟ್ಟರು.


ಲಂಬಾಣಿತಾಂಡ್ಯ, ಗೊಲ್ಲರದೊಡ್ಡಿ ಮತ್ತು ಚೋಳಮಾರನಹಳ್ಳಿ ಗ್ರಾಮಗಳಲ್ಲಿ ಮೂಲ ಸೌಕರ್ಯಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಮತದಾನ ಬಹಿಸ್ಕರಿಸಲಾಗಿತ್ತಾದರೂ ತಹಶಿಲ್ದಾರ್ ರವರು ಮಧ್ಯಸ್ತಿಕೆ ವಹಿಸಿ ಅವರ ಮನವೊಲಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು.


ಗೋವಿಂದೇಗೌಡನದೊಡ್ಡಿ ನಿವೃತ್ತ ಶಿಕ್ಷಕ ವಯೋವೃದ್ದ ಭುಜಗಯ್ಯ ತಮ್ಮ ಅನಾರೋಗ್ಯವನ್ನು ಲೆಕ್ಕಿಸದೆ ಮತದಾನ ಮಾಡಿದರೇ ಹೊಂಗನೂರು ಮತ್ತು ನಗರದ ಪೆಟ್ಟಾ ಶಾಲೆಯಲ್ಲಿ ವೃದ್ದೆಯರು ಗಾಲಿ ಕುರ್ಚಿಯಲ್ಲಿ ಬಂದು ಮತದಾನ ಮಾಡಿದರು, ತಾಲ್ಲೂಕಿನ ಗಣ್ಯರಾದ ಸಿ ಪಿ ಯೋಗೇಶ್ವರ್, ಸಿ ಪಿ ರಾಜೇಶ್, ಸಾದತ್ ಅಲಿಖಾನ್, ರಘುನಂದನ್ ರಾಮಣ್ಣ, ಎಸ್ ಗಂಗಾಧರ, ವೀಣಾಕುಮಾರಿ, ಹರೂರು ರಾಜಣ್ಣ, ಜಯಮುತ್ತು, ಲಿಂಗೇಶಕುಮಾರ್ ಬೋರ್ ವೆಲ್ ರಂಗನಾಥ ಸೇರಿದಂತೆ ಅನೇಕರು ತಮ್ಮ ತಮ್ಮ ಊರಿನ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು.


ನಗರದ ಇತಿಹಾಸ ಪ್ರಸಿದ್ಧ ದೊಡ್ಡಮಳೂರಿನ ಶ್ರೀ ಅಪ್ರಮೇಯ ಸ್ವಾಮಿಯ ಜಾತ್ರೆಯೂ ಸಹ ಇಂದೇ ಇದ್ದಿದ್ದರಿಂದ ಮತದಾನಕ್ಕೆ ಯಾವುದೇ ರೀತಿಯ ಅಡಚಣೆಯಾಗಲಿಲ್ಲ, ಬಹುತೇಕ ಎಲ್ಲಾ ಮತದಾರರು ಜಾತ್ರೆಯ ಜೊತೆಗೆ ಮತದಾನದಲ್ಲಿಯೂ ಮುಂದಿದ್ದರು.

ಜಾತ್ರೆಯಲ್ಲಿ ಪಾನಕ, ಮಜ್ಜಿಗೆ ವಿತರಣೆ ಸಾಮಾನ್ಯವಾಗಿತ್ತು, ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ವಾಹನಗಳು ಹೆಚ್ಚಾಗಿದ್ದುದರಿಂದ ಟ್ರಾಫಿಕ್ ಸಮಸ್ಯೆಯೂ ಸಹ ಹೆಚ್ಚಾಗಿತ್ತು.


ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ಯಿಂದ ಹಣ ಹಂಚಿಕೆಯಾಗಿದೆ, ಬಿಜೆಪಿ ಪಕ್ಷದಿಂದ ಬೂತ್ ನ ಖರ್ಚಿನ ಹಣ ಬಿಟ್ಟರೇ ಮತದಾರರಿಗೆ ಹಣ ಕೊಟ್ಟಿಲ್ಲ, ಕೊಟ್ಟಿದ್ದರೆ ಬಹುತೇಕ ಬಿಜೆಪಿ ಗೆ ಸಾಂಪ್ರದಾಯಿಕ ಮತಗಳ ಜೊತೆಗೆ ಹೊರಗಿನ ಮತಗಳನ್ನು ಸೆಳೆಯಬಹುದಾಗಿತ್ತು ಎಂಬ ಗುಸುಗುಸು ಎಲ್ಲಾ ಹಳ್ಳಿಗಳಲ್ಲೂ ಮತ್ತು ಮತದಾರರಲ್ಲಿ ಕೇಳಿ ಬಂದಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑