ನಗರದ ಸೌಂದರ್ಯಕ್ಕೆ ಧಕ್ಕೆ ತರುವ ಬೀದಿಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಸೂರಜ್
ಚನ್ನಪಟ್ಟಣ: ನಗರದ ಸೌಂದರ್ಯಕ್ಕೆ ದಕ್ಕೆ ತರುವ ಹಾಗೂ ವಾಹನ ಸಂಚಾರ, ಸಾರ್ವಜನಿಕರ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿರುವ ಪುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದೆಂದು ಯೋಜನಾ ನಿರ್ದೇಶಕ ಸೂರಜ್ ತಮ್ಮ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಿದರು. ಅವರು ನಗರಕ್ಕೆ ಆಗಮಿಸಿ ಪ್ರಮುಖ ರಸ್ತೆಗಳನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಪುಟ್ಪಾತ್ ವ್ಯಾಪಾರಿಗಳ ಜೊತೆ ಮಾತನಾಡಿ, ಹಸಿರು ನ್ಯಾಯಾಧಿಕರಣದ ಆದೇಶ ಹಾಗೂ ಸರ್ಕಾರ ಆದೇಶವು ಕೂಡ ಸಾರ್ವಜನಿಕರಿಗೆ ತೊಂದರೆಯಾಗುವ ಪುಟ್ಪಾತ್ ವ್ಯಾಪಾರವನ್ನು ತೆರವು ಗೊಳಿಸಿ, ಪುಟ್ಪಾತ್ ವ್ಯಾಪಾರಿಗಳ ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆದೇಶ ನೀಡಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಗರದ ಮಹಾತ್ಮಗಾಂಧಿ ರಸ್ತೆ, ಜೆ.ಸಿ.ರಸ್ತೆ, ಅಂಚೆ ಕಛೇರಿ ರಸ್ತೆ, ರೈಲ್ವೆ ನಿಲ್ದಾಣ ರಸ್ತೆ, ಹಳೆಯ ಕೋರ್ಟ್ ರಸ್ತೆ, ಸಾತನೂರು ರಸ್ತೆ, ಮದೀನಾ ಚೌಕ್ ಹಾಗೂ ವಿವಿಧ ರಸ್ತೆಗಳಲ್ಲಿನ ಪುಟ್ಪಾತ್ ತೆರವು ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಮನಗರ ಜಿಲ್ಲಾಧಿಕಾರಿಗಳ ಆದೇಶಕ್ಕನುಗುಣವಾಗಿ ಭೇಟಿ ನೀಡಿರುವುದಾಗಿ ತಿಳಿಸಿದ ಅವರು ಯಾವುದೇ ಕಾರಣಕ್ಕೂ ಯಥಾ ಸ್ಥಿತಿಯಂತೆ ಪುಟ್ಪಾತ್ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಪ್ರಶ್ನೆಯೇ ಇಲ್ಲಾ ಎಂದರು.
ಕೋಟ್ಯಾಂತರ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಕರಬಲ ಮೈದಾನದ ಅಂಗಡಿ ಮಳಿಗೆಗಳನ್ನು ತೆರವುಗೊಳ್ಳುವ ಪುಟ್ಪಾತ್ ವ್ಯಾಪಾರಿಗಳಿಗೆ ಸಂಬಂಧಿಸಿದ ಸ್ಥಳದಲ್ಲಿ ವ್ಯಾಪಾರ ಮಾಡಿಕೊಳ್ಳಲು ಉಚಿತವಾಗಿ ನೀಡಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ನಗರಸಭೆ ಆಡಳಿತದ ಸ್ವಚ್ಚತಾ ಆಂದೋಲನ ಹಾಗೂ ಪ್ರಗತಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದರು.
ಕರಬಲ ಮೈದಾನದಲ್ಲಿ ವ್ಯಾಪಾರ ಮಾಡುವ ಹಾಗೂ ಗ್ರಾಹಕರಿಗೂ ಅವಶ್ಯಕತೆಯಾಗಿರುವ ಶೌಚಾಲಯ, ಕುಡಿಯುವ ನೀರು ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದ್ದು, ಒಂದೇ ಸೂರಿನಡಿ ಎಲ್ಲಾ ವಿಧವಾದ ವ್ಯಾಪಾರ ಮಾಡಿಕೊಳ್ಳಲು ಸೂಕ್ತವಾದ ಸ್ಥಳವಾಗಿರುವ ಕರಬಲ ಮೈದಾನದ ಮಳಿಗೆಗೆಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪುಟ್ಪಾತ್ ವ್ಯಾಪಾರಿಗಳು ಮಾತನಾಡಿ ಕೆಲವು ರಸ್ತೆಗಳಲ್ಲಿ ವ್ಯಾಪಾರ ಮಾಡುವ ಪುಟ್ಪಾತ್ ವ್ಯಾಪಾರಿಗಳನ್ನು ತೆರವು ಗೊಳಿಸಿ ಕೆಲವು ರಸ್ತೆಗಳಲ್ಲಿ ಬಿಟ್ಟಿರುವುದರ ಬಗ್ಗೆ ಯೋಜನಾ ನಿರ್ದೇಶಕರ ಗಮನ ಸೆಳೆದಾಗ ಪ್ರತಿಯೊಂದು ರಸ್ತೆಯಲ್ಲಿಯೂ ಇರುವ ಪುಟ್ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲಾಗುತ್ತಿದೆ, ಇದರ ಬಗ್ಗೆ ಅನುಮಾನ ಬೇಡ ಎಂದು ಸ್ಥಳದಲ್ಲೇ ಇದ್ದ ಪೌರಾಯುಕ್ತ ಸಿ ಪುಟ್ಟಸ್ವಾಮಿ ಯವರಿಗೆ ನಗರದ ಯಾವುದೇ ರಸ್ತೆಯಲ್ಲಿ ವ್ಯಾಪಾರ ಮಾಡುವ ಪುಟ್ಪಾತ್ ವ್ಯಾಪಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.
ಕಾಲ್ನಡಿಗೆಯಲ್ಲೇ ನಗರದ ರಸ್ತೆಗಳನ್ನು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಸಾರ್ವಜನಿಕರು ಪುಟ್ಪಾತ್ ವ್ಯಾಪಾರವನ್ನು ತೆರವು ಗೊಳಿಸಿ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿತ್ತಿರುವುದು ಆರೋಗ್ಯಕರವಾಗಿದೆ, ಅಲ್ಲದೆ ನಗರಸಭೆಯ ನಿಲುವಿನಿಂದ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮುಕ್ತ ರಸ್ತೆಯಾಗಿರುವುದು ಪ್ರಶಂಸನೆಯ ವಿಚಾರ ಎಂದು ಸಾರ್ವಜನಿಕರು ಅಧಿಕಾರಿಗಳನ್ನು ಶ್ಲಾಘಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು