ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು !?
(ಸಾಮಾನ್ಯ ಜನರ ನಾಡಿಮಿಡಿತ)
ಹಲವಾರು ಸಮೀಕ್ಷೆಗಳು ಸಾಮಾನ್ಯ ಮತದಾರರನ್ನು ಸಂಪೂರ್ಣ ಗಣನೆಗೆ ತೆಗೆದುಕೊಳ್ಳದೆ ನಾಮಕಾವಸ್ಥೆಗಷ್ಟೇ ಸೀಮಿತಗೊಳಿಸಿದ್ದು ಕೇವಲ ಒಂದು, ಎರಡು, ಮೂರನೇ ದರ್ಜೆಯ ಆಯಾಯ ಪಕ್ಷದ ನಾಯಕರು ಮತ್ತು ಹಿಂಬಾಲಕರನ್ನಷ್ಟೇ ಸಂದರ್ಶಿಸಿ ಇಂತಹವರೇ ಗೆಲ್ಲುತ್ತಾರೆ ಎಂದು ಘೋಷಿಸಿದ್ದಾರೆ.
ನಮ್ಮ ಪತ್ರಿಕೆಯ ವರದಿಗಾರರು ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಹುತೇಕ ಎಲ್ಲಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಿರುಗಾಡಿ ಸಾಮಾನ್ಯರಲ್ಲಿ ಸಾಮಾನ್ಯರು ಎನಿಸಿಕೊಂಡ ಕಟ್ಟ ಕಡೆಯ ಮತದಾರರನ್ನು ಸಂದರ್ಶಿಸಿದಾಗ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಶ್ವಥ್ ನಾರಾಯಣ ರವರು ಗೆಲ್ಲುವ ಸಾಧ್ಯತೆ ಇದೆ ಎಂಬ ವರದಿಯನ್ನು ಅಲ್ಲಗಳೆಯುವಂತಿಲ್ಲ.
ಮಂಡ್ಯ ಕ್ಷೇತ್ರದಲ್ಲಿ ಶೇ ೮೦ ರಷ್ಟು ಅಂಬಿ ಅಭಿಮಾನಿಗಳು, ಹದಿನೆಂಟರಿಂದ ಮೂವತ್ತು ವರ್ಷದೊಳಗಿನ ದರ್ಶನ್ ಮತ್ತು ಯಶ್ ಅಭಿಮಾನಿಗಳು, ಶೇ ೬೦ ರೈತ ಸಂಘದ ಸದಸ್ಯರು, ಸಂಪೂರ್ಣ ಬಿಜೆಪಿ ಮತದಾರರು, ಹಿಂದೂ ಮತ್ತು ಹಿಂದೂ ದೇಶ ಭಕ್ತರು, ಬಹುತೇಕ ಸ್ತ್ರೀಯರು ಸೇರಿದಂತೆ ಎಲ್ಲರೂ ಪಕ್ಷೇತರ ಅಭ್ಯರ್ಥಿ ಸುಮಲತಾ ರವರಿಗೆ ಮತ ಚಲಾಯಿಸುರುವುದಾಗಿ ಆಣೆ ಭಾಷೆಯೊಂದಿಗೆ ಕರಾರುವಾಕ್ಕಾಗಿ ಹೇಳುತ್ತಾರೆ.
ಬಹಳ ಮುಖ್ಯವಾಗಿ ಕಾಂಗ್ರೆಸ್ ಪಕ್ಷದ ಮೂಲ ಮತದಾರರು ಮತ್ತು ಸ್ಥಳೀಯ ಮುಖಂಡರು ಕಾಂಗ್ರೆಸ್ ನ ಹಿರಿಯ ನಾಯಕರ ಮಾತಿಗೆ ಕಿಂಚಿತ್ತೂ ಬೆಲೆ ಕೊಡದೆ ಸುಮಲತಾ ರವರಿಗೆ ಬೆಂಬಲ ಕೊಟ್ಟಿದ್ದು ಒಂದೆಡೆಯಾದರೇ, ಜೆಡಿಎಸ್ ಪಕ್ಷದ ಒಂದು ಮತ್ತು ಎರಡನೇ ದರ್ಜೆಯ ನಾಯಕರು ಒಳ ಏಟು ನೀಡಿದ್ದಾರೆ ಎಂಬ ಗುಸುಗುಸು ಎದ್ದಿದೆ, ಇದಕ್ಕೆ ಸ್ಪಷ್ಟ ಕಾರಣ ಹುಡುಕುತ್ತಾ ಹೋದಾಗ ಇದು ಸತ್ಯ ಎಂಬುದು ಗೊತ್ತಾಯಿತು.
ಮಾಜಿ, ಹಾಲಿ ಮತ್ತು ಭವಿಷ್ಯದ ಜೆಡಿಎಸ್ ನಾಯಕರುಗಳು ಮೇಲ್ನೋಟಕ್ಕೆ ಜೆಡಿಎಸ್ ಪರವಾಗಿದ್ದು ಒಳಗೊಳಗೆ ಪಕ್ಷೇತರ ಅಭ್ಯರ್ಥಿ ಗೆ ಬೆಂಬಲ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತವೆ, ಕಾರಣ ನಿಖಿಲ್ ಕುಮಾರಸ್ವಾಮಿ ಯನ್ನು ಗೆಲ್ಲಿಸಿದರೇ ನಮಗಿನ್ನೂ ಉಳಿಗಾಲವಿಲ್ಲ, ಪ್ರತಿಯೊಂದಕ್ಕೂ ಆ ಹುಡುಗನ ಮುಂದೆ ಕೈ ಕಟ್ಟಿ ನಿಲ್ಲುವ ಪರಿಸ್ಥಿತಿ ಬರುತ್ತದೆ ಎಂಬ ದೂರಾಲೋಚನೆ ಇದೆಯಂತೆ.
ಇನ್ನೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ ಕೆ ಸುರೇಶ್ ಗೆಲುವು ಶತಸಿದ್ದ ಎಂದು ಎಲ್ಲರೂ ಉದ್ಗರಿಸಿದ್ದಾರೆ, ಅವರು ಎಂದು ಸಣ್ಣತನದ ರಾಜಕೀಯ ಮಾಡಿದವರಲ್ಲ, ನರೇಗಾ ಯೋಜನೆಗೆ ಸಂಬಂಧಿಸಿದಂತೆ ಅನೇಕ ಕೆಲಸಗಳನ್ನು ಮಾಡಿಸಿ ಸೈ ಎನಿಸಿಕೊಂಡಿದ್ದಾರೆ, ಯಾವ ಕೆಲಸಕ್ಕೆ ಕೈ ಹಾಕಿದರೂ ಪಟ್ಟು ಬಿಡದೆ ಮಾಡಿಸುವ ಛಲ ಅವರಲ್ಲಿದೆ, ಈ ಬಾರಿ ಮೇಕೆದಾಟು ಸೇರಿದಂತೆ ಅನೇಕ ಕೆಲಸಗಳ ರೂಪುರೇಷೆಯಲ್ಲಿ ಅವರು ತೊಡಗಿದ್ದಾರೆ ಹಾಗಾಗಿ ಅವರು ಗೆಲ್ಲಬೇಕು, ಗೆಲ್ಲುತ್ತಾರೆ ಎಂದೇ ಭಾವಿಸಬಹುದು.
ಆದರೆ ರಾಷ್ಟ್ರಭಕ್ತಿ, ಮೋದಿ, ಹಿಂದೂ, (ಅತಿ ಬುದ್ದೀಜೀವಿಗಳನ್ನು ಹೊರತುಪಡಿಸಿ) ವಿದ್ಯಾವಂತರು, ಬುದ್ದಿಜೀವಿಗಳು, ಬಹಳ ಮುಖ್ಯವಾಗಿ ಯುವ ಜನತೆ ಯಾವ ಆಮಿಷಕ್ಕೂ ಒಳಗಾಗದೇ ಬಿಜೆಪಿ ಪರ ಮತ ಚಲಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಅಶ್ವಥ್ ನಾರಾಯಣ ರವರು ಅಂತಹ ಪರಿಚಿತರೇನಲ್ಲ, ಬಿಜೆಪಿ ಪಕ್ಷದಲ್ಲಿ ಸಿ ಪಿ ಯೋಗೇಶ್ವರ್ ಇದ್ದರೂ ಸಹ ಅವರು ಸಕ್ರಿಯವಾಗಿ ತೊಡಗಿಸಿಕೊಂಡವರಲ್ಲ, ಅಶ್ವಥ್ ನಾರಾಯಣ ಮತ್ತು ಮುಖಂಡರು ಬಂದಾಗ ಮತ್ತು ಪತ್ರಿಕಾಗೋಷ್ಠಿಗೆ ಮಾತ್ರ ಸೀಮಿತವಾಗಿದ್ದರು, ನಾಯಕರನ್ನು ಹೊರತುಪಡಿಸಿ (ಕನಕಪುರ ಬಿಟ್ಟು) ಚಲಾವಣೆಗೊಂಡ ಮತಗಳಲ್ಲಿ ಶೇಕಡಾ ೫೫ ರಿಂದ ೬೦ ರಷ್ಟು ಮತಗಳು ಬಿಜೆಪಿ ಪಕ್ಷದ ಗುರುತಿಗೆ ಚಲಾವಣೆಗೊಂಡಿರುವುದಾಗಿ ಆಂತರಿಕ ವರದಿಗಳು ತಿಳಿಸುತ್ತವೆ.
*ಜನಸಾಮಾನ್ಯರ ನಾಡಿಮಿಡಿತದ ಉಲ್ಟಾ ಆದರೆ ಕೊನೆಯ ದಿನದ ಕರಾಮತ್ತು ಕೆಲಸ ಮಾಡಿದೆ ಎಂದು ಸಾಬೀತಾಗುತ್ತದೆ ಎಂದು ಹಲವರ ಅಂಬೋಣ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು