ಮಾರ್ಚ್ 24ರಂದು ಉದ್ಯೋಗ ಮೇಳ
ಮಂಡ್ಯ :ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮ ಶೀಲತೆ ಮಂತ್ರಾಲಯದ ಸಹಕಾರದಲ್ಲಿ ಮಾರ್ಚ್ 24 ರ ಬೆಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳವನ್ನು ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸಿ.ಎಸ್.ಪುಟ್ಟರಾಜು ಅವರು ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ, ಕೇಂದ್ರÀ ವ್ಯವಸ್ಥಾಪಕರಾದ ದೀಪಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8904517831, 8105666223.
ಪ್ರತಿಕ್ರಿಯೆಗಳು