ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ ಪಡಿಸಿ ರೈತರಿಗೆ ಸಂಕಷ್ಟ ತಂದೊಡ್ಡಿರುವ ಘಟನೆ ತಾಲ್ಲೂಕಿನ ತಗಚಗೆರೆ ಮತ್ತು ಸಂತೆಮೊಗಳ್ಳಿ ಗ್ರಾಮಗಳ ತೋಟಗಳಲ್ಲಿ ನಡೆದಿದೆ.
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ಅಕ್ಕೂರು ಪೋಲಿಸ್ ಠಾಣಾ ವ್ಯಾಪ್ತಿಯ, ಬಲ್ಲಾಪಟ್ಟಣ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.ಬಲ್ಲಾಪಟ್ಟಣ ಗ್ರಾಮದ ಚೌಡೇಗೌಡರ ಪುಟ್ಟಸ್ವಾಮಿ ರವರ ಮಗ ಮನು ಎಂಬುವವರಿಗೆ ಸೇರಿದ ಶ್ರವಣಯ್ಯ ತೋಪಿನಲ್ಲಿರುವ ಮನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತ ಮುಖಂಡ ಸಿ ಪುಟ್ಟಸ್ವಾಮಿ ಮುಂದಾಳತ್ವದಲ್ಲಿ ತಾಲೂಕಿನ ಭೈರಾಪಟ್ಟಣ ಗ್ರಾಮದ ಬಳಿ ಇರುವ ಬಮೂಲ್ ಶಿಬಿರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.ಬುಧವಾರ ಬೆಳಿಗ್ಗೆ ಬಮೂಲ್ ಶ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ ರೈತರು ಇಂದು ಕೆಲವರ ಕುಂತತ್ರಕ್ಕೆ ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳುವಂತಾಗಿದೆ ಎಂದು ಮಾಜಿ ಸಚಿವೆ ಹಾಗೂ ಬರಹಗಾರ್ತಿ ಬಿ.ಟಿ.ಲಲಿತಾ ನಾಯಕ್ ಅವರು ವಿಷಾದ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಟ್ಟಣದ ತಿಟ್
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡಬೇಕು, ಅವರು ಸಾಲ ಮರುಪಾವತಿ ಮಾಡುವಲ್ಲಿ ಒಂದೆರಡು ದಿನ ತಡವಾಗಬಹುದೇ ವಿನಹ ಮೋಸ ಮಾಡುವ ಯಾವುದೇ ದುರುದ್ದೇಶಗಳಿರುವುದಿಲ್ಲ ಎಂದು ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ತಿಳಿಸಿದರು. ಅವರು ತ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ ಹೆಚ್ಚು ಹಾಲು ಸರಬರಾಜು ಮಾಡಲು ಸಂಘದ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಸಂಘದ ನಿರ್ದೇಶಕರು ಹಾಗೂ ಪ್ರಗತಿಪರ ರೈತರಾದ ಕೆ. ಚಿಕ್ಕರಾಜು ಅವರ ಕಾರ್ಯ ಶ್ಲಾಘನೀಯ ಎಂದು ಬಮೂಲ್ ನಿರ್ದೇಶಕರಾದ ಹೆಚ್.ಸಿ.ಜಯಮುತ್ತು ಅವರು ಪ್ರ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮತ್ತು ಬುಧವಾರ ಬೆಳಿಗ್ಗೆ ಐದರಿಂದ ಏಳು ಕಾಡಾನೆಗಳ ಹಿಂಡು ದಾಂಧಲೆ ಎಬ್ಬಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಾ ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.ಕಳೆದ ಒಂದು ತಿಂಗಳಿನಿಂದ ನ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.ಸಿದ್ದಯ್ಯ ಕಾಡಾನೆ ದಾಳಿ ವೇಳೆ ಕೊದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ.ಪ್ರತಿದಿನದಂತೆ ಸೋಮವಾರ ಸಹ ಕೆರೆ ಬಳಿಯ ಜಮೀನಿಗೆ ಮೇವು ತರಲು ಸಿದ್ದಯ್ಯ ತೆರಳಿದ್ದ ವೇಳೆ ಕಾಡಾನೆ ಸೊಂಡಲಿನಿಂದ ದಾಳಿ ಮಾಡಿದ್ದು
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡುತ್ತಿವೆ. ಕಳೆದ ಮೂರು ನಾಲ್ಕು ದಿನಗಳಿಂದ ಚನ್ನಪಟ್ಟಣ ತಾಲೂಕಿನ ಹಲವು ಗ್ರಾಮಗಳಲ್ಲಿ ಆನೆಗಳು ದಾಳಿಯನ್ನು ನಡೆಸುತ್ತಿವೆ. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿ, ಪೀಹಳ್ಳಿ ದೊಡ್ಡಿ ಹಾಗೂ ಉಜ್ಜನಹಳ್ಳಿ, ದೊಡ್ಡನಹಳ್ಳಿ ಗ್ರಾಮದಲ್ಲಿ ಆನೆಗಳು ದಾಳಿಯನ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಕೈಗೊಂಡ ಪ್ಲಾನ್ ಸಕ್ಸಸ್ ಆಗಿದೆ. ತೆಂಗಿನ ಕಲ್ಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆಯನ್ನು ನಡೆಸುತ್ತಾ ಎರಡು ಜೀವಗಳನ್ನು ಸಹ ಬಲಿಯನ್ನ ಪಡೆದಿತ್ತು. ಕೊನೆಗೂ ಒಂಟಿ ಸಲಗವನ್ನು ಸ