Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಹರೂರು ರಾಜಣ್ಣ

Posted date: 03 Aug, 2019

Powered by:     Yellow and Red

ಸರ್ಕಾರದ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಹರೂರು ರಾಜಣ್ಣ

ಚನ್ನಪಟ್ಟಣ: ತಾಲ್ಲೂಕಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಾರದ ಕಾರಣ ಹಲವಾರು ರೈತರು ಬಿತ್ತನೆ ಮಾಡಲಾಗಿಲ್ಲ, ತಡವಾಗಿ ಬಂದ ಅಲ್ಪ ಮಳೆ ನೆಚ್ಚಿಕೊಂಡು ಕೆಲ ರೈತರು ಉಳುಮೆ ಮಾಡಿ ಬಿತ್ತನೆ ಮಾಡಿರುವವರು ಮಳೆ ಕೈಕೊಟ್ಟ ಕಾರಣ ಮಾಡಿದ ಖರ್ಚು ಸಹ ಬಾರದಿರುವ ಕಾರಣ ಕಂಗಾಲಾಗಿದ್ದಾರೆ, ಆದ್ದರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬಿಮಾ ಫಸಲ್ ಯೋಜನೆಯನ್ನು ನೋಂದಣಿ ಮತ್ತು ಸಮಗ್ರ ಕೃಷಿ ಅಭಿಯಾನದ ಮಾಹಿತಿ ಪಡೆದುಕೊಂಡು ಯಶಸ್ವಿ ರೈತರಾಗಬೇಕೆಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ತಿಳಿಸಿದರು.


ಅವರು ತಾಲ್ಲೂಕು ಕಛೇರಿಯ ಆವರಣದಲ್ಲಿ ೨೦೧೯/೨೦ ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ವೇಳಾಪಟ್ಟಿ ಬಿಡುಗಡೆ ಮತ್ತು ಪ್ರಚಾರದ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.


ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ವೀಣಾಕುಮಾರಿಯವರು ಮಾತನಾಡಿ ರೈತನ ಬದುಕು ಇಂದು ಅಧೋಗತಿ ತಲುಪುತ್ತಿದೆ, ರೈತ ಉದ್ದಾರವಾದರೆ ಮಾತ್ರ ದೇಶ ಸುಭಿಕ್ಷವಾಗಲು ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ರೈತನಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಒಗ್ಗೂಡಿ ರೈತರ ಮನೆ ಬಾಗಿಲಿಗೆ ಮಾಹಿತಿ ನೀಡುತ್ತಿರುವುದು ಸಂತಸದ ಸಂಗತಿ ಎಂದು ಅಭಿಪ್ರಾಯ ಪಟ್ಟರು.


ಕಸಬಾ ಹೋಬಳಿಯ ಕಾರ್ಯಕ್ರಮದ ವೇಳಾಪಟ್ಟಿ;

೦೩/೦೮/ ಶನಿವಾರ ನಾಗವಾರ, ಮೈಲನಾಯಕನಹಳ್ಳಿ, ತಿಟ್ಟಮಾರನಹಳ್ಳಿ ಮತ್ತು ರಾಂಪುರ. ೦೪/೦೮/ ರ ಭಾನುವಾರ ವಂದಾರಗುಪ್ಪೆ, ನೀಲಸಂದ್ರ, ತಗಚಗೆರೆ, ಹೊಂಗನೂರು ಮತ್ತು ಕೂಡ್ಲೂರು, ೦೫/೦೮/ ರ ಸೋಮವಾರ ಬೆಳಿಗ್ಗೆ ೧೧:೦೦ ಗಂಟೆಗೆ ಬ್ರಹ್ಮಣಿಪುರ ಗ್ರಾಮದ ಲಕ್ಷ್ಮಿ ದೇವಿ ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ವಿರುಪಾಕ್ಷಿಪುರ ಹೋಬಳಿಯ ವೇಳಾಪಟ್ಟಿ;

೦೫/೦೮ ರ ಸೋಮವಾರ ಕೋಡಂಬಳ್ಳಿ, ಜೆ ಬ್ಯಾಡರಹಳ್ಳಿ, ಎಲೆತೋಟದಹಳ್ಳಿ, ಇಗ್ಗಲೂರು, ಹಾರೋಕೊಪ್ಪ, ಸೋಗಾಲ ಮತ್ತು ಸುಳ್ಳೇರಿ.

೦೬/೦೮ ರ ಮಂಗಳವಾರ ಸಿಂಗರಾಜಪುರ, ಭೂಹಳ್ಳಿ, ಬಿ.ವಿ ಹಳ್ಳಿ, ವಿರುಪಾಕ್ಷಿಪುರ, ಅಕ್ಕೂರು ಮತ್ತು ಬಾಣಗಳ್ಳಿ, ೦೭/೦೮ ರ ಬುಧವಾರ ಗರಕಹಳ್ಳಿ ಗ್ರಾಮದ ಅರಳಿಕಟ್ಟೆ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ.


ಮಳೂರು ಹೋಬಳಿಯ ವೇಳಾಪಟ್ಟಿ;

೦೭/೦೮ ರ ಬುಧವಾರ ಮಳೂರು, ಎಂ ಬಿ ಹಳ್ಳಿ , ಬೇವೂರು, ಮಾಕಳಿ ಮತ್ತು ದಶವಾರ. ೦೮/೦೮ ರ ಗುರುವಾರ ಹೆಚ್ ಬ್ಯಾಡರಹಳ್ಳಿ, ಮುದಗೆರೆ, ಮತ್ತಿಕೆರೆ, ಚಕ್ಕೆರೆ ಮತ್ತು ಮಳೂರುಪಟ್ಟಣ.

೦೯/೦೮ ರ ಶುಕ್ರವಾರ ಬೆಳಿಗ್ಗೆ ೧೧:೦೦ ಗಂಟೆಗೆ ಬೇವೂರು ಗ್ರಾಮದ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಯಾಯ ಪಂಚಾಯತಿ ವ್ಯಾಪ್ತಿಯ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕಿ ಅಪರ್ಣಾ ಮನವಿ ಮಾಡಿದರು.


ಚಾಲನೆ ಸಮಯದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯೆ ಸುಗುಣ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಚೈತ್ರಾ, ಕೃಷಿ ಸಮಾಜದ ಅಧ್ಯಕ್ಷ ಬಸವೇಗೌಡ, ಮೀನು ಕೃಷಿ ಇಲಾಖೆಯ ಅಧಿಕಾರಿ ಯೋಗಾನಂದ, ಲೈನ್ ಇಲಾಖೆಯ ಅಧಿಕಾರಿಗಳು, ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಬೊಮ್ಮೇಶ್ ಸೇರಿದಂತೆ ಹಲವಾರು ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑