ರೈತರ ಏಳ್ಗೇಗಾಗಿ ಕೃಷಿ ಅಭಿಯಾನ ಕೆವಿಕೆ ಯ ಪ್ರೀತು
ಚನ್ನಪಟ್ಟಣ: ರೈತ ಬೆಳೆಯುವ ಎಲ್ಲಾ ಬೆಳೆಗೂ ಕೃಷಿ ಇಲಾಖೆಯ ಸಹಾಯ ಮತ್ತು ಮಾಹಿತಿ ಪಡೆದು ವ್ಯವಸಾಯ ಮಾಡಿದರೆ ರೈತನ ಬದುಕು ಉಜ್ವಲವಾಗುತ್ತದೆ, ರೈತರಿಗಾಗಿ ಹಲವಾರು ಸಂಶೋಧನೆಗಳು ನಡೆದು ಹೊಸ ಮಾದರಿ ತಳಿಯ ಬೀಜೋತ್ಪನ್ನಗಳಿದ್ದು ಯಾವ ಸಮಯದಲ್ಲಿ ಎಷ್ಟು ? ಹೇಗೆ ಬಿತ್ತನೆ ಮಾಡಬೇಕೆಂದು ತಿಳಿದು ಕೃಷಿ ಮಾಡಿದರೆ ಎಲ್ಲಾ ಉದ್ಯೋಗಿಗಳಂತೆ ರೈತರು ಮುಂಚೂಣಿಗೆ ಬರಬಹುದು ಎಂದು ಮಾಗಡಿ ಕೆವಿಕೆ ಯ ಸಹಾಯಕ ಪ್ರಾಧ್ಯಾಪಕಿ ಪ್ರೀತು ರವರು ತಿಳಿಸಿದರು.
ಅವರು ದೊಡ್ಡ ಮಳೂರು ಗ್ರಾಮದ ಸಾಯಿ ಮಂದಿರದಲ್ಲಿ ಇಂದು ಇಲಾಖೆಯ ವತಿಯಿಂದ ಆಯೋಜಿಸಿದ ಕೃಷಿ ಅಭಿಯಾನ ೨೦೧೯ ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಗೆ ಮಾಹಿತಿ ನೀಡಿದರು.
ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ಇಲಾಖೆಯಲ್ಲಿ ಉನ್ನತ ಮಾಹಿತಿ ಇದ್ದು ರೇಷ್ಮೆ ಕೃಷಿಕರು ಪಡೆದುಕೊಳ್ಳಬೇಕು, ಸೋಲಾರ್ ದೀಪ ಸೇರಿದಂತೆ ಅನೇಕ ಸಲಕರಣೆಗಳಿದ್ದು ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಿ ಎಂದರು.
ಮೀನುಗಾರಿಕೆ ಇಲಾಖೆಯ ಯೋಗಾನಂದ ಮಾತನಾಡಿ ಮೀನುಗಾರರಿಗೆ ದೋಣಿ, ಬಲೆ, ಹೊಂಡ ಇತ್ಯಾದಿಗಳಿಗೆ ಸಹಾಯಧನ ದೊರೆಯಲಿದ್ದು ಮೀನುಗಾರಿಕೆ ನಡೆಸುವವರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಕೃಷಿ ಸಮಾಜದ ಅಧ್ಯಕ್ಷ ಬಸವೇಗೌಡ ಮಾತನಾಡಿ ಕೃಷಿ ಇಲಾಖೆಯಲ್ಲಿ ಹಲವು ಸವಲತ್ತುಗಳಿದ್ದು ರೈತರು ನೇರವಾಗಿ ಬಂದು ಉಪಯೋಗಿಸಿಕೊಳ್ಳಬೇಕು. ಈ ರೀತಿಯ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡರೆ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
ರೈತರಿಗೆ ಅನುಕೂಲವಾಗುವಂತೆ ಅನೇಕ ಕಂಪೆನಿಗಳು ಮತ್ತು ಏಜೆನ್ಸಿಗಳು ರೈತೋಪಯೋಗಿ ಬೀಜಗಳು ಮತ್ತು ಸಲಕರಣೆಗಳ ಅಂಗಡಿಗಳನ್ನು ತೆರೆದು ಮಾಹಿತಿ ನೀಡಿದರು.
*ಪರ್ಯಾಯ ಬೆಳೆ ಪದ್ದತಿ, ಬರ ಪರಿಸ್ಥಿತಿಗನುಗುಣವಾಗಿ ಬೇಸಾಯ, ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ, ಮಳೆಯಾಶ್ರಿತ ರೈತರ ಅಭಿವೃದ್ಧಿಗೆ ಕೃಷಿ ಭಾಗ್ಯ, ಆಹಾರ ಮತ್ತು ಪೌಷ್ಟಿಕಾಂಶದ ಸುಭದ್ರತೆಗಾಗಿ ಸಿರಿಧಾನ್ಯಗಳು, ರೈತ ಸಿರಿ ಯೋಜನೆ, ರಾಗಿಯಲ್ಲಿ ಯಾಂತ್ರಿಕೃತ ಬೇಸಾಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ರೈತಮಿತ್ರ, ತಾಲ್ಲೂಕು, ಜಿಲ್ಲಾ ಪಂಚಾಯತಿ ಮತ್ತು ರಾಜ್ಯ ವಲಯಗಳ ಯೋಜನೆ, ಕೇಂದ್ರ ಪುರಸ್ಕೃತ ಯೋಜನೆ ಹಾಗೂ Fruits ಮತ್ತು K-Kisan ತಂತ್ರಾಂಶಗಳ ಬಗ್ಗೆ ಅಧಿಕಾರಿಗಳು ಮತ್ತು ರೈತರು ಸಂವಾದ ನಡೆಸಿದರು*
ಕಾರ್ಯಕ್ರಮದಲ್ಲಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕಿ ಅಪರ್ಣಾ, ಅರಣ್ಯ ಇಲಾಖೆಯ ಶ್ರೀಧರ್ ಮಳೂರು, ಮಾಕಳಿ ಚಕ್ಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು, ತಾಲ್ಲೂಕು ಪಂಚಾಯತಿ ಸದಸ್ಯ ಪ್ರಭು, ಎಪಿಎಂಸಿ ನಿರ್ದೇಶಕ ಎಂ ಡಿ ಕುಮಾರ್, ಜಂಟಿ ಕೃಷಿ ನಿರ್ದೇಶಕ ರವಿ, ಕೆವಿಕೆ ಯ ಸಹಾಯಕ ಪ್ರಾಧ್ಯಾಪಕಿ ಪ್ರೀತು ಸೇರಿದಂತೆ ಅನೇಕ ರೈತರು ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು