Tel: 7676775624 | Mail: info@yellowandred.in

Language: EN KAN

    Follow us :


ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ

Posted date: 22 Oct, 2019

Powered by:     Yellow and Red

ಬಂಪರ್ ಬೆಳೆಯತ್ತ ರಾಗಿ ರೈತನ ಮೊಗದಲ್ಲಿ ಮಂದಹಾಸ

ಚನ್ನಪಟ್ಟಣ: ಈ ಬಾರಿ ಕಾಲಕಾಲಕ್ಕೆ ಸರಿಯಾಗಿ ಬಿದ್ದ ಮಳೆಯಿಂದಾಗಿ ಜಿಲ್ಲಾದ್ಯಂತ ಬಿತ್ತಿರುವ ರಾಗಿ ಚನ್ನಾಗಿ ಬೆಳೆದಿದ್ದು ರೈತರ ಮೊಗದಲ್ಲಿ ಸಂತಸ ಎದ್ದು ಕಾಣುತ್ತಿದೆ.

ಕೆಲ ರೈತರು ನೇರವಾಗಿ ರಾಗಿ ಬಿತ್ತಿದ್ದು ಕೆಲವರು ಪೈರು ಬೆಳೆದು ನಾಟಿ ಮಾಡಿದ್ದರು, ಎರಡು ಬೆಳೆಯೂ ಚನ್ನಾಗಿ ಬಂದಿದ್ದು ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ.


ಕಳೆದ ಸಾಲುಗಳಲ್ಲಿ ಸರಿಯಾದ ಸಮಯಕ್ಕೆ ಮಳೆ ಬಾರದೆ ಮೊಳಕೆಯಲ್ಲೇ ಒಣಗಿದರೇ ಕೆಲ ವರ್ಷಗಳು ತೆನೆಗಟ್ಟುವ ಸಮಯದಲ್ಲಿ ಮಳೆ ಬಾರದೆ ಒಣಗಿ ಹೋಗಿದ್ದವು. ಈ ಸಾಲಿನಲ್ಲಿ ಇನ್ನುಮುಂದೆ ಶೇಕಡಾ ೯೦ ರಷ್ಟು ಬೆಳೆಯೂ ಮಳೆ ಬಾರದಿದ್ದರೂ ಬೆಳೆ ಕೈಗೆ ಬರುತ್ತದೆ ಎಂಬುದು ಸದಾ ಕಷ್ಟದಲ್ಲೇ ಇರುವ ರೈತನ ಮೊಗದಲ್ಲಿ‌ ಮಂದಹಾಸ ಮೂಡಲು ಕಾರಣವಾಗಿದೆ.


ಈ ಬಾರಿ ರಾಗಿ ಬೆಳೆಗೆ‌ ಮಳೆ ಕೊಂಚ ಹೆಚ್ಚಾದ್ದರಿಂದ ಪೈರು ಬಿಳುಚಿಕೊಂಡಂತಾಗಿದ್ದು ಆ ಸಮಯದಲ್ಲಿ ರಸಗೊಬ್ಬರದ ಅವಶ್ಯಕತೆ ಇತ್ತು, ಆದರೆ ಕೃಷಿ ಇಲಾಖೆ ಸರಿಯಾದ ಸಮಯಕ್ಕೆ ಎಲ್ಲಾ ರೈತರಿಗೂ ಯೂರಿಯಾ ನೀಡದ ಕಾರಣ ರೈತರು ಸಂಕಷ್ಟಕ್ಕೀಡಾಗಿದ್ದರು. ತದನಂತರ ಎಚ್ಚೆತ್ತ ಇಲಾಖೆಯ ಅಧಿಕಾರಿಗಳು ಸರಿತೂಗಿಸಿದರ ಫಲವಾಗಿ ರಸಗೊಬ್ಬರದ ಕೊರತೆ ಹೆಚ್ಚಾಗಿ ಕಾಡಲಿಲ್ಲ.


ಈ ಸಾಲಿನಲ್ಲಿ ಹೆಚ್ಚು ರಾಗಿ ಬೆಳೆ ಬಂದಿರುವ ಕಾರಣ ಹತ್ತಾರು ರೈತ ಕುಟುಂಬಗಳು ಸೇರಿ ಕಣ ಮಾಡಿ ಒಕ್ಕಣೆ ಮಾಡಿದರೆ ಉತ್ತಮ, ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ರಾಗಿಯ ಗುಣಮಟ್ಟ ಹಾಳಾಗುವುದಲ್ಲದೆ ಸವಾರರಿಗೂ ತೊಂದರೆಯಾಗುತ್ತದೆ, ಹೀಗಾಗಿ ರೈತರು ವಿನಾಕಾರಣ ರಸ್ತೆಯಲ್ಲಿ ಒಕ್ಕಣೆ ಮಾಡದೆ ಕಣ ಸಿದ್ದಪಡಿಸಿ ಒಕ್ಕಣೆ ಮಾಡಬೇಕೆಂದು ಪತ್ರಿಕೆಯು ಆಶಿಸುತ್ತದೆ.


*ತಾಲ್ಲೂಕಿನಲ್ಲಿ ೮,೪೦೦ ಹೆಕ್ಟೇರ್ ನಲ್ಲಿ ರಾಗಿ ಬೆಳೆ ಬೆಳೆದಿದ್ದು ಬಹುತೇಕ ಕಾಳು ಕಟ್ಟಿವೆ. ಒಂದೂವರೆ ತಿಂಗಳಲ್ಲಿ ಸಂಪೂರ್ಣ ಕಟಾವು ಮುಗಿಯಲಿದ್ದು ರೈತರು ಹರ್ಷದಲ್ಲಿದ್ದಾರೆ.*

*ಅಪರ್ಣಾ ಸಹಾಯಕ ನಿರ್ದೇಶಕಿ ಕೃಷಿ ಇಲಾಖೆ.*


*ಈ ಸಾಲಿನಲ್ಲಿ ರಾಗಿ ಬೆಳೆ ಚನ್ನಾಗಿ ಬಂದಿದ್ದು ಕೇಂದ್ರ ಸರ್ಕಾರವು ೩,೧೫೦ ರೂಪಾಯಿ ಬೆಂಬಲ ಬೆಲೆ ಘೋಷಿಸಿದ್ದು ರಾಜ್ಯ ಸರ್ಕಾರವು ಘೋಷಿಸುವ ಸಾಧ್ಯತೆ ಇದೆ.*

*ಬೊಮ್ಮೇಶ್ ತಾಂತ್ರಿಕ ಅಧಿಕಾರಿ ಕೃಷಿ ಇಲಾಖೆ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑