ರೈತ ಸಂಘಟನೆಗಳು ಒಗ್ಗೂಡಬೇಕು, ಯುವಕರು ಮುಂದಾಳತ್ವ ವಹಿಸಬೇಕು ಸುನೀತಾ ಪುಟ್ಟಣ್ಣಯ್ಯ
ಚನ್ನಪಟ್ಟಣ.ಫೆ.೧೩:
ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯದಲ್ಲಿ ಒಂದೇ ಇರಬೇಕು, ಈಗಿರುವ ಹಲವು ಬಣಗಳು ಒಗ್ಗೂಡಬೇಕು. ವಿಚಾರ ವಿನಿಮಯವಾಗಬೇಕು, ಮೂಲ ಉದ್ದೇಶ ಗಳನ್ನು ಅರಿತು ಯುವಕ ರನ್ನು ಸಂಘಟಿಸಿ ರೈತ ಸಂಘಟನೆಯನ್ನು ಬಲಪಡಿ ಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಅಧ್ಯಕ್ಷ, ಮಾಜಿ ಶಾಸಕ ದಿವಂಗತ ಕೆ ಎಸ್ ಪುಟ್ಟಣ್ಣಯ್ಯರವರ ಧರ್ಮ ಪತ್ನಿ ಸುನೀತಾ ಪುಟ್ಟಣ್ಣಯ್ಯ ಹೇಳಿದರು.
ಅವರು ಇಂದು ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ಪ್ರೊ. ಎಂ.ಡಿ ನಂಜುಂಡಸ್ವಾಮಿ ರವರ ೮೪ ನೇ ಜನ್ಮ ದಿನಾಚರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರೊ ನಂಜುಂಡಸ್ವಾಮಿ, ಪುಟ್ಟಣ್ಣಯ್ಯ, ಎಚ್.ಎಸ್ ರುದ್ರಪ್ಪ, ಎನ್.ಡಿ ಸುಂದರೇಶ್ ಮತ್ತು ಸೋಮಲಿಂಗಯ್ಯನವರಂತಹ ಅನೇಕ ಧುರೀಣರು ಇಂದು ನಮ್ಮನ್ನಗಲಿದ್ದಾರೆ. ಇವರು ಮತ್ತೆ ಹುಟ್ಟಿ ಬರುತ್ತಾರೆ ಎಂಬ ಕನಸಿಗಿಂತ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ, ನಡೆದ ದಾರಿಯಲ್ಲಿ ಸಂಘಟನೆಯನ್ನು ಬಲಪಡಿಸಿ ರೈತರಿಗಾಗುತ್ತಿರುವ ಸಂಕಷ್ಟಗಳನ್ನು ಅಳಿಸಿ, ಸರ್ಕಾರದ ಕಣ್ತೆರೆಸಬೇಕು ಎಂದು ಕರೆ ನೀಡಿದರು.
ಸಂಘದ ಗೌರವ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಮಾತನಾಡಿ ಎಂಬತ್ತರ ದಶಕಕ್ಕೂ ಮುಂಚೆ ನರಗುಂದ, ನವಲಗುಂದ ನಗರದಲ್ಲಿ ಉಪಯೋಗಿಸದ ನೀರಿಗಾಗಿ ಅಂದಿನ ಗುಂಡೂರಾಯರ ಸರ್ಕಾರ ನೀರಿನ ಕರ ವಿಧಿಸಿತ್ತು. ಅದನ್ನು ವಿರೋಧಿಸಿ ಏಕಾ ಏಕಿ ರೈತರೇ ಸಂಘಟಿತರಾಗಿ ಹೋರಾಟ ನಡೆಸಿದರು. ಇದರ ಫಲಾಫಲದಿಂದ ಇಬ್ಬರು ರೈತರು ಮೃತರಾದರು. ಮತ್ತು ಒಬ್ಬ ಪೊಲೀಸ್ ಅಧಿಕಾರಿ ಯನ್ನು ಬಲಿಕೊಡಲಾಯಿತು. ಇದನ್ನು ಮನಗಂಡ ಪ್ರೊ ನಂಜುಂಡಸ್ವಾಮಿ ಯವರು ಸ್ಥಳಕ್ಕೆ ಭೇಟಿ ನೀಡಿ ರೈತರನ್ನು ಎಚ್ಚರ ಗೊಳಿಸಿ ಸಂಘಟನೆಯನ್ನು ಹುಟ್ಟು ಹಾಕಿ ಮುನ್ನಡೆ ಸಿದರು ಎಂದರು.
ಇಂತಹ ನಂಜುಂಡಸ್ವಾಮಿ ಯವರ ಮಾರ್ಗದರ್ಶನದಲ್ಲಿ ರೈತರ ಮನೆ ಜಪ್ತಿ ನಿಂತಿತ್ತು. ರೈತನಿಗೆ ಎಲ್ಲಾ ಅಧಿಕಾರಿಗಳು, ರಾಜಕಾರಣಿಗಳು ಗೌರವ ನೀಡುವುದನ್ನು ಕಲಿಸಿದರು ಎಂದು ನೆನಪಿಸಿಕೊಂಡರು.
ಕುಮಾರಸ್ವಾಮಿಯವರು ಘೋಷಿಸಿದ ರೈತರ ಸಾಲ ಮನ್ನಾ ಹೇಳಿದ ಮಟ್ಟಿಗೆ ಆಗಲಿಲ್ಲ, ಋಣಮುಕ್ತ ಕಾಯಿದೆ ಹಾಗೆಯೇ ಮಲಗಿದೆ. ಯಡಿಯೂರಪ್ಪ ಸರ್ಕಾರ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಶೀಘ್ರವಾಗಿ ಜಾರಿಗೆ ತರಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಉಗ್ರ ಹೋರಾಟವನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು
ಎಚ್ಚರಿಕೆ ನೀಡಿದರು.
ರೈತರಿಗಾಗಿ ಬದುಕಿದ ವಿಶ್ವಚೇತನ ಪ್ರೊ ನಂಜುಂಡಸ್ವಾಮಿ ಯವರ ಮಕ್ಕಳು ಇಂದು ತಮ್ಮ ವೈಯುಕ್ತಿಕ ಬೆಳವಣಿಗೆಗಾಗಿ ಸಂಘಟನೆಯನ್ನು ವಿಘಟನೆ ಮಾಡಿದರು. ಇವರು ತಂದೆಗೆ ತಕ್ಕ ಮಕ್ಕಳಾಗದೆ ದಾರಿ ತಪ್ಪಿದ ಮಕ್ಕಳಾದರು ಎಂದು ಆಕ್ಷೇಪಿಸಿದರು.
ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಮುಂದಿನ ಮಾಚ್೯ ತಿಂಗಳೊಳಗೆ ರೈತ ಸಂವಿಧಾನವನ್ನು ಪ್ರಸ್ತುತ ಪಡಿಸಲು ತೀರ್ಮಾನಿಸಿದ್ದೇವೆ. ವಿಘಟನೆಯಾಗಿರುವ ಸಂಘಟನೆಯನ್ನು ಒಗ್ಗೂಡಿಸುವ ಕೆಲಸ, ಜಿಲ್ಲಾ ಮತ್ತು ರಾಜ್ಯ ಮಟ್ಟದ ರೈತ ಸಂಘದ ಪದಾಧಿಕಾರಿಗಳು ಪ್ರತಿ ವರ್ಷವೂ ಆಸ್ತಿ ಘೋಷಿಸಿ ಕೊಳ್ಳಬೇಕು, ಹದಿನೆಂಟ ರಿಂದ ಮೂವತೈದು ವರ್ಷಗಳ ಯುವಕ ಯುವ ತಿಯರನ್ನು ಸಂಘಟಿಸು ವಂತಹ ಕೆಲಸವನ್ನು ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಇದಕ್ಕೂ ಮೊದಲು ಮಂಗಳವಾರಪೇಟೆ ಯಿಂದ ರೈತ ನಾಯಕ ಪ್ರೊ ನಂಜುಂಡಸ್ವಾಮಿ ಯವರ ಭಾವಚಿತ್ರವನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ತರಲಾಯಿತು.
ಮೆರವಣಿಗೆಯ ಸಂದರ್ಭದಲ್ಲಿ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಪೊಲೀಸ್ ಠಾಣೆಯ ಬಳಿ ಮಾನವ ಸರಪಳಿ ರಚಿಸಲು ಮುಂದಾದರು. ಆ ಸಂದರ್ಭದಲ್ಲಿ ಪೊಲೀಸರು ಮತ್ತು ರೈತ ಕಾರ್ಯಕರ್ತರ ಮಧ್ಯೆ ವಾಗ್ವಾದಗಳು ನಡೆದವು ಆದರೆ ಪೊಲೀಸರು ಅದನ್ನು ತಡೆದರು. ಇದರಿಂದ ಸಂಚಾರ ಸಮಸ್ಯೆ ಉಂಟಾಗುತ್ತದೆ ಬೇಡ ಎಂದು ರೈತ ಸಂಘದ ಕಾರ್ಯಕರ್ತರನ್ನು ಒಪ್ಪಿಸಿ ದರು. ಆ ನಂತರ ಮೆರ ವಣಿಗೆಯು ಸರಾಗವಾಗಿ ಸಾಗಿತು.
ರಾಜ್ಯದ ಹಲವಾರು ಜಿಲ್ಲೆಗಳ ರೈತ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಹಿರಿಯ ರೈತ ಮುಖಂಡರಾದ ಸು.ತ ರಾಮೇಗೌಡ, ತೊರೆಹೊಸೂರು ಕುಮಾರಸ್ವಾಮಿ, ಖಾಸಿಂ ಆಲಿ ಆಜಾದ್, ಸುನೀತಾ ಪುಟ್ಟಣ್ಣಯ್ಯ, ಅರಸು ಮೈಸೂರು ರವರನ್ನು ಸನ್ಮಾನಿಸಲಾಯಿತು.
ರಾಜ್ಯ ಉಪಾಧ್ಯಕ್ಷ ಎಂ ರಾಮು ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಅಧ್ಯಕ್ಷ ಕೆ. ಮಲ್ಲಯ್ಯ ನವರು ಸ್ವಾಗತಿಸಿದರು. ವೇದಿಕೆ ಯಲ್ಲಿ ಟಿ. ಮಲೇನೂರು ಎಂ ಶಂಕರಪ್ಪ, ಸೇರಿದಂತೆ ಅನೇಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪದಾಧಿ ಕಾರಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು