ತಂತ್ರಜ್ಞಾನವು ಕೇವಲ ವ್ಯಾಪಾರೀಕರಣವಾಗದೇ ಅನ್ನದಾತನ ಪರವಾಗಿರಬೇಕು. ಬಿ ಟಿ ಜಯಮುದ್ದಪ್ಪ
ಚನ್ನಪಟ್ಟಣ: ನೂತನ ತಂತ್ರಜ್ಞಾನ ಎನ್ನುವುದು ಉಳ್ಳವರ, ವಿದೇಶಿಗರ ಪಾಲಾಗದೇ ದೇಶಕ್ಕೆ ಅನ್ನ ನೀಡುವ ದೇಶದ ಬೆನ್ನೆಲುಬು ಎಂದೆನಿಸಿಕೊಂಡ ರೈತಾಪಿ ವರ್ಗಕ್ಕೆ ಅನುಕೂಲಕರವಾಗಿರಬೇಕೆಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ ಟಿ ಜಯಮುದ್ದಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ನಗರದ ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಐಟಿಐ ಕಾಲೇಜಿನ ಮಕ್ಕಳು ತಯಾರಿಸಿದ ಉಪಕರಣಗಳನ್ನು ವೀಕ್ಷಿಸಿ ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ಕೇವಲ ಮೊಬೈಲ್ ಮತ್ತು ಟಿವಿ ಗೆ ಅಂಟಿಕೊಳ್ಳದೆ ತಾವು ಕಲಿತ ವಿದ್ಯೆಯನ್ನು ಸದುಪಯೋಗ ಪಡಿಸಿಕೊಂಡು ಮುನ್ನಡೆಯಬೇಕು, ಐಟಿಐ, ಡಿಪ್ಲೊಮಾ ಮತ್ತು ಇಂಜಿನಿಯರ್ ವಿದ್ಯಾರ್ಥಿಗಳು ಸಾಪ್ಟ್ ವೇರ್ ಗೆ ಸೀಮಿತವಾಗದೆ ರೈತ ಮತ್ತು ಸೈನಿಕರಿಗೆ ಬೇಕಾದ ಸರಳ ಉಪಕರಣಗಳನ್ನು ಸಂಶೋಧಿಸಿ ನೀಡಿದರೆ ಅದು ದೇಶ ಸೇವೆಯಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದರು.
ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಂ ಮಲ್ಲಯ್ಯ ನವರು ಮಾತನಾಡಿ ಐಟಿಐ ಕಾಲೇಜಿನ ಮಕ್ಕಳು ಇಂದು ರೈತನಿಗೆ ಬೇಕಾದ ಕೆಲ ಉಪಕರಣಗಳನ್ನು ಸಂಶೋಧಿಸಿರುವುದು ಒಳ್ಳೆಯ ಬೆಳವಣಿಗೆ ಇನ್ನೂ ಉನ್ನತ ಮಟ್ಟದ ಉಪಕರಣವನ್ನು ಕಡಿಮೆ ದರ ಹಾಗೂ ಸರಳವಾಗಿ ಉಪಯೋಗಿಸುವಂತಹ ಉಪಕರಣಗಳನ್ನು ಸಂಶೋಧಿಸಲು ಕಾಲೇಜಿನ ಶಿಕ್ಷಕರು ತರಬೇತಿ ನೀಡಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂ ಲಿಂ ನಾಗರಾಜು ಮಾತನಾಡಿ ಮಕ್ಕಳು ತಯಾರಿಸಿರುವ ಉಪಕರಣಗಳನ್ನು ನೋಡುತ್ತಿದ್ದರೆ ತುಂಬಾ ಸಂತೋಷವಾಗುತ್ತದೆ. ನಮ್ಮ ಕಾಲೇಜಿನ ಮಕ್ಕಳು ಇತರ ಕಾಲೇಜಿನ ಮಕ್ಕಳಿಗೆ ಮಾದರಿಯಾಗಿ ಬೆಳೆಯಬೇಕು. ಇವರಿಗೆ ಅನುಕೂಲವಾಗುವಂತ ಮತ್ತು ಪೂರಕವಾದ ವಾತಾವರಣವನ್ನು ಶಾಲೆಯ ಆಡಳಿತ ಮಂಡಳಿ ನೀಡಿದರೆ ರಾಜ್ಯ ಮಟ್ಟದಲ್ಲಿ ಹಲವಾರು ಸಂಶೋಧನೆಗಳನ್ನು ಮಾಡಿ ನಮ್ಮ ಕಾಲೇಜಿಗೆ ಕೀರ್ತಿ ತರಬಲ್ಲರು ಎಂದರು.
ಕಾಲೇಜಿನ ಮಕ್ಕಳು ರೈತರಿಗೆ ಅನುಕೂಲವಾಗುವಂತ ಮತ್ತು ಇನ್ನಿತರ ಬಹುಪಯೋಗಿ ಉಪಕರಣಗಳನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದರು. ಮಾರ್ಕಿಂಗ್ ಶೀಟ್ ಕಟ್ಟರ್, ಪೊಟಾಟೋ ರಿಮೂವರ್, ಸಿಂಪಲ್ ಕಲ್ಟಿವೇಟರ್, ಪ್ಯಾಡಿ ಕಟ್ಟರ್, ಗ್ರಾಸ್ ಕ್ಲೀನರ್, ಆಟೋಮ್ಯಾಟಿಕ್ ರೈಲ್ವೇ ಗೇಟ್, ವಾಹನಗಳಿಗೆ ಅಡ್ಡಬಂದಾಗ ಅಪಘಾತಕ್ಕೆ ಮುಂಚೆಯೇ ನಿಲ್ಲುವ ಸಾಧನ ಸೇರಿದಂತೆ ಮೂವತ್ತೆಂಟಕ್ಕೂ ಹೆಚ್ಚು ಸಾಧನಗಳನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಅಯೂಬ್ ಖಾನ್, ಕಾಲೇಜಿನ ಆಡಳಿತ ಮಂಡಳಿಯ ಎಸ್ ರಾಜಣ್ಣ, ಅನಂತಮೂರ್ತಿ, ವಿಜಯ್ ರಾಂಪುರ, ಕೆಲಗೆರೆ ಪಟೇಲ್ ರಾಜು, ರಾಜು ಕನ್ನಸಂದ್ರ, ರೈತ ಮುಖಂಡ ರಾಜು, ಶಂಭೂಗೌಡ, ಕಾಲೇಜಿನ ಪ್ರಾಧ್ಯಾಪಕರಾದ ಮರಿದೇವರು, ಮಹದೇವ, ಸಿ ಬಿ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು