Tel: 7676775624 | Mail: info@yellowandred.in

Language: EN KAN

    Follow us :


ಇಂದಿನಿಂದ ವಹಿವಾಟು ಪುನಾರಾರಂಭಿಸಿದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆ

Posted date: 02 Apr, 2020

Powered by:     Yellow and Red

ಇಂದಿನಿಂದ ವಹಿವಾಟು ಪುನಾರಾರಂಭಿಸಿದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆ

ರಾಮನಗರ:ಏ/೦೨/೨೦/ಗುರುವಾರ. ಕೊರೊನಾ ವೈರಸ್ ನಿಂದ ಇಡೀ ಕರ್ನಾಟಕವೇ ಲಾಕ್ ಡೌನ್ ಆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸದುದ್ದೇಶದಿಂದ ಏಷ್ಯಾದ ಬಹುದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಮುಚ್ಚಿದ್ದು, ಮೊನ್ನೆ ನಡೆದ ಸಭೆಯಲ್ಲಿ, ಮುಖ್ಯಮಂತ್ರಿಗಳ ಆದೇಶದಂತೆ ಜಿಲ್ಲಾಡಳಿತವು ತೀರ್ಮಾನವನ್ನು ತೆಗೆದುಕೊಂಡು  ಗೂಡಿನ ಮಾರುಕಟ್ಟೆಯನ್ನು ತೆರೆಯಲು ಅನುವು ಮಾಡಿಕೊಡಲಾಗಿತ್ತು. ಅದರಂತೆ ಇಂದು ವಿದ್ಯುಕ್ತವಾಗಿ ಗೂಡಿನ ಮಾರುಕಟ್ಟೆಯು ತನ್ನ ವಹಿವಾಟನ್ನು ಪ್ರಾರಂಭಿಸಿದೆ.


ಸಾಗಾಣಿಕೆಯ ಸಮಸ್ಯೆ, ಮಾರುಕಟ್ಟೆಗೆ ಬಂದರೆ ಬೆಲೆ ಸಿಗುವುದಿಲ್ಲ ಎಂಬ ಅಪ ನಂಬಿಕೆ, ಅಲ್ಲಿಗೆ ಹೋದಮೇಲೆ ಯಾವ ಯಾವ ರೀತಿಯ ಸಮಸ್ಯೆ ಗಳು ಹುಟ್ಟುತ್ತವೋ ಎಂಬ ಆತಂಕದಿಂದ ಇಂದು ನಿರೀಕ್ಷಿತ ರೀತಿಯಲ್ಲಿ ಗೂಡು ಮಾರುಕಟ್ಟೆಗೆ ಬಂದಿರಲಿಲ್ಲ. ಆದರೆ ಬಂದಿರುವ ಗೂಡಿಗೆ ನಿರೀಕ್ಷಿತ ರೀತಿಯಲ್ಲಿ ಉತ್ತಮ ಬೆಲೆ ಬಂದಿದೆ. ಈಗ ತಾನೇ ಹರಾಜು ಪ್ರಾರಂಭವಾಗಿದ್ದು ಬೈವೋಲ್ಟನ್ ಗೂಡು ಬೆಲೆ ೩೮೦ ರೂ ರವರೆಗೂ ಕೂಗಲಾಗಿದೆ. ದೇಶೀಯ ತಳಿಯೂ ಸಹ ಉತ್ತಮ ಬೆಲೆಗೆ  ಹರಾಜು ಆಗುತ್ತಿದೆ ಎಂದು ತಿಳಿದು ಬಂದಿದೆ.


ಈ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗದೆ ನೆಮ್ಮದಿಯಾಗಿದ್ದ ರೇಷ್ಮೆನಗರಿಗೆ ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆಯೇ ಕಂಟಕವಾಗಲಿದೆಯೇ ಎಂಬ ಆತಂಕ ಜಿಲ್ಲಾಡಳಿತಕ್ಕೆ ಇದೀಗ ಎದುರಾಗಿದೆ.

ಸಾವಿರಾರು ಜನರು ಒಟ್ಟಿಗೆ ಸೇರುವ ಮಾರು ಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬ ಚಿಂತೆ ಜಿಲ್ಲಾಡಳಿತವನ್ನು ಕಾಡುತ್ತಿದೆ. ಇತ್ತ ಮಾರುಕಟ್ಟೆ ಸ್ಥಗಿತಗೊಂಡಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.


ಈ ರೇಷ್ಮೆ ಮಾರುಕಟ್ಟೆಯ ಒಂದು ದಿನದ ಆದಾಯ ಸರಾಸರಿ ೨ ಕೋಟಿ ರೂ.ಗಳಷ್ಟಿದೆ. ಆದರೆ ಇಲ್ಲಿ ರೈತರು, ಮಾರುಕಟ್ಟೆ ಅಧಿಕಾರಿಗಳು, ರೀಲರ್ಸ್ ಸೇರಿ ಕನಿಷ್ಟ ಮೂರು ಸಾವಿರ ಮಂದಿ ಏಕಕಾಲದಲ್ಲಿ ಜಮಾವಣೆ ಆಗುತ್ತಾರೆ. ತೀರಾ ಕಿಷ್ಕಿಂದೆಯಾದ ಈ ಮಾರುಕಟ್ಟೆಯಲ್ಲಿ ಉಸಿರಾಟಕ್ಕೂ ಕಷ್ಟವಾಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ರೇಷ್ಮೆ ಮಾರುಕಟ್ಟೆ ತೆರೆದರೆ, ಮಾರುಕಟ್ಟೆಗೆ ಬರುವ ವಾಹನಗಳಿಗೆ ಮುಕ್ತ ಪ್ರವೇಶ ನೀಡಬೇಕಾಗುತ್ತದೆ. ದೂರದ ಜಿಲ್ಲೆಗಳಿಂದ ಬರುವವರು ಸಹ ಇದೇ ಕಾರಣ ಕೊಟ್ಟು ಗಡಿ ದಾಟಬಹುದು. ಮಾತ್ರವಲ್ಲದೆ ಚಾಲಕರಿಗೆ, ಬೆಳೆಗಾರರಿಗೆ ಊಟ, ವಿಶ್ರಾಂತಿ, ಟೀ-ಕಾಫಿ ಎಲ್ಲ ವ್ಯವಸ್ಥೆಗಳಿಗಾಗಿ ಹೋಟೆಲ್‌ಗಳನ್ನು ಸಹ ತೆರೆಯ ಬೇಕಾಗುತ್ತದೆ.


ದಿಗ್ಬಂಧನ ಆಗಿರುವ ಹಿನ್ನೆಲೆಯಲ್ಲಿ ನಗದು ಕೊರತೆ ನೆಪದಿಂದಾಗಿ ಚೆಕ್ ವ್ಯವಹಾರ ಮತ್ತೆ ಶುರುವಾದರೂ ಅಚ್ಚರಿ ಪಡಬೇಕಿಲ್ಲ. ಸುರಕ್ಷತೆ, ಸ್ವಚ್ಛತೆ, ಮುಂಜಾಗೃತಾ ಕ್ರಮವಾಗಿ ಹ್ಯಾಂಡ್ ವಾಶ್, ಸ್ಯಾನಿಟೈಸರ್, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಿಲ್ಲಾಡಳಿತ ಸೂಚಿಸಿದೆ. ಅಲ್ಲದೆ ಥರ್ಮಲ್ ಸ್ಕ್ಯಾನರ್ ನೀಡುವಂತೆ ಸರ್ಕಾರಕ್ಕೆ ಬೇಡಿಕೆಯಿಟ್ಟಿದ್ದು, ಥರ್ಮಲ್ ಸ್ಕ್ಯಾನರ್ ಬಂದ ಬಳಿಕ ರೈತರು, ಅಧಿಕಾರಿಗಳನ್ನೆಲ್ಲ ತಪಾಸಣೆ ನಡೆಸಿ ಒಳಗೆ ಬಿಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಮಾರುಕಟ್ಟೆ ತೆರೆಯದಿದ್ದರೆ, ರೈತರ ಸ್ಥಿತಿ ಚಿಂತಾನಜನಕವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರು ಮುಖ್ಯಮಂತ್ರಿಯವರಿಗೆ ಮನವಿ ಯೊಂದನ್ನು ಸಲ್ಲಿಸಿ, ಮಾರುಕಟ್ಟೆಯನ್ನು ತೆರೆಯುವಂತೆ ಆಗ್ರಹಪಡಿಸಿದ್ದರು. ಅವರ ಕೋರಿಕೆಯನ್ನು ಮನ್ನಿಸಿ ಗೂಡಿನ ಮಾರುಕಟ್ಟೆ ತೆರೆಯಲು ಸರ್ಕಾರ ತೀರ್ಮಾನ ತೆಗೆದುಕೊಂಡಿತ್ತು.


ಸರ್ಕಾರ ಇದನ್ನು ಸವಾಲಾಗಿ ತೆಗೆದುಕೊಂಡು ಮಾರುಕಟ್ಟೆಯನ್ನು ಪ್ರಾರಂಭ ಮಾಡಿದೆ. ಮುಂದೆ ಬರುವ ಸಮಸ್ಯೆಗಳನ್ನು ಸಮಚಿತ್ತದಿಂದ ಸರಿದೂಗಿಸಬೇಕಾಗಿದೆ.

ಅಂತೂ ಈಗ ರೇಷ್ಮೆ ಮಾರುಕಟ್ಟೆ ಪ್ರಾರಂಭ ವಾಗಿದೆ. ಇದು ಸುಲಲಿತವಾಗಿ ಸುರಕ್ಷಿತವಾಗಿ ನಡೆಯುವಂತೆ ಆಗಲಿ ಎಂದು ಸಮಾಜದ ಎಲ್ಲಾ ಜನರು ಆಶಿಸಬೇಕಾಗಿದೆ. ಇಲ್ಲದಿದ್ದರೆ ರೇಷ್ಮೆ ಗೂಡು ಬೆಳೆಯುವ ರೈತರ ಗೋಳು ಹೇಳತೀರದಾಗುತ್ತದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑