ದಳಪತಿಗೆ ಕಾಂಗ್ರೆಸ್ ಸಂಸದ ಸಾಥ್, ಬೆಳೆ ಕಳೆದುಕೊಂಡವರಿಗೆ ವೈಯುಕ್ತಿಕ ನೆರವು, ಸರ್ಕಾರಕ್ಕೆ ಮನವಿ
ಚನ್ನಪಟ್ಟಣ:ಮೇ/೧೯/೨೦/ಮಂಗಳವಾರ. ತಾಲ್ಲೂಕಿನಾದ್ಯಂತ ಮೊನ್ನೆ ಬೀಸಿದ ಬಿರುಗಾಳಿ ಮತ್ತು ಮಳೆಗೆ, ನಾಶಗೊಂಡ ರೈತನ ತೋಟಕ್ಕೆ ಇಂದು ಸ್ಥಳೀಯ ಶಾಸಕ ಹೆಚ್ ಡಿ ಕುಮಾರಸ್ವಾಮಿ ಮತ್ತು ಸಂಸದ ಡಿ ಕೆ ಸುರೇಶ್ ಜೊತೆಯಲ್ಲಿ ಭೇಟಿ ನೀಡಿ ರೈತರಿಗೆ ಸಮಾಧಾನ ಹೇಳಿದ್ದಲ್ಲದೆ ವೈಯುಕ್ತಿಕವಾಗಿ ಹತ್ತು ಸಾವಿರ ರೂಪಾಯಿ ನೀಡಿ, ಸರ್ಕಾರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡುವುದಾಗಿ ಹೇಳಿದರು.
ತಾಲ್ಲೂಕಿನ ಗೋವಿಂದಳ್ಳಿ ಗ್ರಾಮ, ಸೀಬನಹಳ್ಳಿ, ಮುದಗೆರೆ, ಕೋಲೂರು ಮತ್ತಿತರ ಗ್ರಾಮಗಳಲ್ಲಿ ೧೮೦ ಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಬಾಳೆ, ತೆಂಗು, ವೀಳ್ಯದೆಲೆ ಅಂಬು ಮತ್ತು ಮಾವಿನ ಮರಗಳು ಧರೆಗುರುಳಿ ಒಟ್ಟಾರೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿತ್ತು.
ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಂಸದ ಡಿ ಕೆ ಸುರೇಶ್ ರವರ ಜೊತೆ ಆಗಮಿಸಿದ ಹೆಚ್ಡಿಕೆ ಯವರು ಪ್ರತಿ ಎಕರೆಗೆ ಹತ್ತು ಸಾವಿರ ರೂಪಾಯಿಗಳನ್ನು ವೈಯುಕ್ತಿಕ ಪರಿಹಾರ ನೀಡುವುದಾಗಿ ಘೋಷಿಸಿದರು. ಅಧಿಕಾರಿಗಳನ್ನು ಕರೆದು ಮಾತನಾಡಿದ ಹೆಚ್ಡಿಕೆ ಯವರು ಕೂಡಲೇ ರೈತರ ಬೆಳೆ ನಷ್ಟದ ಸರಿಯಾದ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಯವರು ಇಂತಹ ಘಟನೆ ನನ್ನ ಕ್ಷೇತ್ರದಲ್ಲಿ ನಡೆದಿರುವುದು ಮನಸ್ಸನ್ನು ನೋಯಿಸಿದೆ. ಸರ್ಕಾರದಿಂದ ಒಂದು ಹೆಕ್ಟೇರ್ ಬಾಳೆಗೆ ೬,೫೦೦ ರೂ, ತೆಂಗಿಗೆ ೧೮,೫೦೦ ರೂ, ಹಾಗೂ ನಾಶಗೊಂಡಿರುವ ಇನ್ನಿತರ ಬೆಳೆಗಳಿಗೂ ಸೂಕ್ತ ಪರಿಹಾರ ನೀಡುವ ಮೂಲಕ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
ಸಂಸದ ಸುರೇಶ್ ಮಾತನಾಡಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಕೊಡುವ ನೆರವನ್ನು ಹೆಚ್ಚು ನೀಡಿ, ಇಂತಹ ಕೊರೊನಾ ಸಮಯದಲ್ಲಿ ಅವರಿಗೆ ನೆರವಾಗಬೇಕು. ಜಿಲ್ಲಾಧಿಕಾರಿಗಳಿಗೆ ಖುದ್ದು ಮಾತನಾಡಿದ್ದೇನೆ. ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಿದ್ದು ನಾನು ಸಹ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.
ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜನತಾ ದಳ ಪಕ್ಷದ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು