ಕೃಷಿ ಯಂತ್ರಧಾರಾ ಕೇಂದ್ರಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ
ಚನ್ನಪಟ್ಟಣ:ಜೂ/೦೩/೨೦/ಬುಧವಾರ. ಯಾರನ್ನೂ ನಂಬಿ ರಾಜಕೀಯ ಮಾಡುವುದಿಲ್ಲ. ನಂಬಿದ ಕಾರ್ಯಕರ್ತರನ್ನು ಕೈಬಿಡುವುದೂ ಇಲ್ಲ. ಇನ್ನು ಮುಂದೆ ಯಾರ ಹಂಗಿನಲ್ಲೂ ಸರ್ಕಾರ ರಚಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕ್ಷೇತ್ರದ ಶಾಸಕ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ತಿರುಗೇಟು ನೀಡಿದರು. ಅವರು ತಾಲ್ಲೂಕಿನ ಕೃಷಿ ಇಲಾಖೆಯ ವತಿಯಿಂದ, ತಾಲ್ಲೂಕಿನ ಸುಣ್ಣಘಟ್ಟದಲ್ಲಿ ಕೃಷಿ ಯಂತ್ರೋಪಕರಣ ಗಳನ್ನು ಬಾಡಿಗೆಗೆ ನೀಡುವ ‘ಕೃಷಿಯಂತ್ರಧಾರಾ ಕೇಂದ್ರ’ ವನ್ನು ಉದ್ಘಾಟಿಸಿದ ನಂತರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಮಾತನಾಡಿದರು.
ರೈತರ ಬೆಳೆಯನ್ನು ಉಳಿಸುವ ಜೊತೆಗೆ ಪ್ರಾಣ ರಕ್ಷಣೆ ಮಾಡುವ ಹೊಣೆಯು ಸರ್ಕಾರದ ಹೊಣೆಯಾಗಿದೆ.
ಇತ್ತೀಚಿಗೆ ಜಿಲ್ಲೆಯಲ್ಲಿ ವನ್ಯ ಜೀವಿಗಳ ದಾಳಿಯಿಂದ ಜನರ ಪ್ರಾಣ ಹಾನಿಯಾಗುತ್ತಿದೆ. ಪಟ್ಟಣದಲ್ಲಿ ನಡೆದ ಕರಡಿ ದಾಳಿ ಯಿಂದ ನಗರಸಭೆ ಮಾಜಿ ಸದಸ್ಯೆ ಸಾಕಮ್ಮ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಇದು ನನಗೆ ನೋವು ತಂದಿದೆ. ಅವರನ್ನು ಉಳಿ ಸಲು ನನ್ನ ಕೈಯಲ್ಲಿ ಆದು ದ್ದನ್ನುಮಾಡಿದ್ದೇನೆ ಎಂದರು.
ಮಾಗಡಿ ತಾಲ್ಲೂಕಿನಲ್ಲಿ ಚಿರತೆ ದಾಳಿಯಿಂದ ಇಬ್ಬರ ಪ್ರಾಣ ಹರಣವಾಗಿದೆ. ಈ ಸರ್ಕಾರದ ಅರಣ್ಯ ಅಧಿಕಾರಿಗಳು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂಬುದು ಇದರಿಂದಲೇ ತಿಳಿಯುತ್ತದೆ ಎಂದು ಕುಟುಕಿದರು.
ಸರಕಾರ ಕಾಟಾಚಾರಕ್ಕೆ ರೈತರ ಪರ ಕಾಳಜಿ ಪ್ರದರ್ಶಿಸಬಾರದು, ಬಿರುಗಾಳಿ ಮಳೆಯಿಂದ ಬಾಧಿತರಾದ ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿಕೊಡಬೇಕು. ವನ್ಯಜೀವಿಗಳ ದಾಳಿ ತಪ್ಪಿಸಲು ತಮ್ಮ ಸರ್ಕಾರವಿದ್ದಾಗ ರೂಪಿಸಿದ್ದ ೧೦೦ ಕೋಟಿ ಯೋಜನೆಯನ್ನು ಜಾರಿಗೆ ತಂದು ಅರಣ್ಯ ಪ್ರದೇಶದ ಗಡಿಯಲ್ಲಿ ತಂತಿ ಬೀಲಿ ನಿರ್ಮಿಸಬೇಕು ಎಂದರು.
ಟ್ರಾಕ್ಟರ್ ಚಲಾಯಿಸುವ ಮೂಲಕ ಶಾಸಕ ಕುಮಾರ ಸ್ವಾಮಿಯವರು ಸೇವಾ ಕೇಂದ್ರಕ್ಕೆ ಚಾಲನೆಯನ್ನು ನೀಡಿದರು. ಸಂದರ್ಭದಲ್ಲಿ ನಾನು ರಾಜಕೀಯಕ್ಕೆ ಬರುವ ಮೊದಲು ರೈತ ನಾಗಿ ಟ್ರಾಕ್ಟರ್ನಲ್ಲಿ ಉಳುಮೆ ಮಾಡಿದ್ದೇನೆ, ಇತ್ತೀಚಿಗೆ ಮರೆತಿದ್ದೇನೆ ಎಂದು ನಿಧಾನಕ್ಕೆ ಟ್ರಾಕ್ಟರ್ ಚಾಲನೆ ಮಾಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು