ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

ಚನ್ನಪಟ್ಟಣ:ಜೂ/೦೭/೨೦/ಭಾನುವಾರ ತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿದ ನಂತರ ಆತನ ಮನೆಯಿಂದ ೫೦ ಮೀಟರ್ ಅಂತರವನ್ನು ಕಂಟೋನ್ಮೆಂಟ್ ಝೋನ್ ಎಂದು ಸಂಪೂರ್ಣ ಗ್ರಾಮವನ್ನು ಬಫರ್ ಝೋನ್ ಎಂದು ಜಿಲ್ಲಾಡಳಿತವು ಸೀಲ್ಡೌನ್ ಮಾಡಿದ್ದು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಗ್ರಾಮದ ಬಹುತೇಕ ಮಂದಿಗೆ ಆಘಾತವಾಗಿದ್ದು, ಸಂಬಂಧಿಸಿದವರು ಶೀಘ್ರವಾಗಿ ತಿಳುವಳಿಕೆ ನೀಡುವ ಮೂಲಕ ಸ್ಪಂದಿಸಬೇಕಿದೆ.
ಶಾನುಭೋಗನಹಳ್ಳಿ ಗ್ರಾಮದಲ್ಲಿ ಸದ್ಯ ೧೧೦ ಮಂದಿ ಡೈರಿಗೆ ಹಾಲು ಹಾಕುತ್ತಿದ್ದು ಬೆಳಿಗ್ಗೆ ಸಮಯದಲ್ಲಿ ೧,೩೫೦ ಲೀಟರ್ ಹಾಗೂ ಸಂಜೆ ಸಮಯದಲ್ಲಿ ೧,೨೫೦ ಲೀಟರ್ ಹಾಲನ್ನು ಡೈರಿಗೆ ಸರಬರಾಜು ಮಾಡಲಾಗುತ್ತಿದ್ದು, ಈಗ ಯಾವುದೇ ವ್ಯಕ್ತಿಯಿಂದ ಸಂಘವು ಹಾಲನ್ನು ಖರೀದಿಸದಿರುವುದರಿಂದ ಭೂಮಿಗೆ ಸುರಿಯುತ್ತಿರುವುದು ಸಂಬಂಧಿಸಿದವರ ಅಜ್ಞಾನ ಎಂದರೆ ತಪ್ಪಾಗಲಾರದು.
ಅಗತ್ಯ ವಸ್ತುಗಳ ಪೂರೈಕೆಯ (SOP) ಕೈಪಿಡಿಯಲ್ಲಿ ಬಫರ್ ಝೋನ್ ನಲ್ಲಿ ಕೃಷಿ ಚಟುವಟಿಕೆಗೆ ಆದ್ಯತೆ ನೀಡಿದ್ದು, ಹೈನುಗಾರಿಕೆಯೂ ಸಹ ಕೃಷಿಗೆ ಬರುವುದರಿಂದ ಕಂಟೋನ್ಮೆಂಟ್ ಝೋನ್ ಹೊರತುಪಡಿಸಿ ಬಫರ್ ಝೋನ್ ನಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡು ಹಾಲು ಖರೀದಿಸಬಹುದಾಗಿದೆ. ಖರೀದಿಸಲಾಗುವುದಿಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳು ಕಾಯಿಸಿ ತುಪ್ಪ ಮಾಡಲು ಅಥವಾ ವೈಜ್ಞಾನಿಕವಾಗಿ ಬೇರೆ ಏನು ಮಾಡಬಹುದು ಎಂಬುದನ್ನು ತಿಳಿ ಹೇಳಿದರೆ ಹೈನುಗಾರರ ಬದುಕನ್ನು ಹಸನು ಮಾಡಬಹುದಾಗಿದೆ.
ಕಂಟೋನ್ಮೆಂಟ್ ಝೋನ್ ಹೊರತುಪಡಿಸಿ ಬಫರ್ ಝೋನ್ ನಲ್ಲಿರುವ ಹೈನೋತ್ಪಾದಕರಿಂದ ಹಾಲು ಖರೀದಿಸಲು ಬಮೂಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಹಲವಾರು ಕಾರಣ ನೀಡಿ ತಿರಸ್ಕರಿಸಿದ್ದು, ರೈತರಿಗೆ ನೆರವಾಗುವ ದೃಷ್ಟಿಯಿಂದ ಬೇರೆ ರೀತಿಯಲ್ಲಿ ಸಹಾಯ ಹಸ್ತ ನೀಡುತ್ತೇವೆ ಎಂದಿದ್ದಾರೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳುತ್ತೇನೆ.
ಬಿ ಕೆ ಸುದರ್ಶನ್. ದಂಡಾಧಿಕಾರಿಗಳು. ಚನ್ನಪಟ್ಟಣ.
ತಾಲ್ಲೂಕಿನಲ್ಲಿ ಇದು ಪ್ರಥಮ ಪ್ರಕರಣವಾಗಿದ್ದು, ಸೋಂಕು ಮತ್ತೊಬ್ಬರಿಗೆ ತಗುಲದಿರಲಿ ಎಂದು ಹಾಲನ್ನು ಖರೀದಿಸುತ್ತಿಲ್ಲ. ರೈತರಿಗೆ ತೊಂದರೆಯಾಗದಿರಲಿ ಎಂಬ ಕಾರಣದಿಂದ ಬಮೂಲ್ ವತಿಯಿಂದ ಶೇ ೫೦ ಹಾಗೂ ಗ್ರಾಮದ ಹಾಲು ಉತ್ಪಾದಕರ ಸಂಘದಿಂದ ಶೇ ೨೫ ರಷ್ಟು ಹಣವನ್ನು ತುಂಬಿಕೊಡಲಾಗುವುದು.
ಜಯಮುತ್ತು ನಿರ್ದೇಶಕರು ಬಮೂಲ್
ಹಾಲನ್ನು ಕರೆಯದೆ ಬಿಟ್ಟರೆ ಕೆಚ್ಚಲು ಬಾವು ಬರುತ್ತದೆ. ಹಾಲು ಉಪಯೋಗವಿಲ್ಲವೆಂದು ಆಹಾರ ಕಡಿಮೆ ನೀಡಿದರೆ ಕೀಟೋಸಿಸ್ (ketosis) ರೋಗ ಬರುತ್ತದೆ. ಕಂಟೋನ್ಮೆಂಟ್ ಝೋನ್ ನವರು ತುಪ್ಪ ಮಾಡಿಕೊಂಡು ಉಪಯೋಗಿಸಬಹುದು. ಬಫರ್ ಝೋನ್ ನವರ ಹಾಲನ್ನು ಉತ್ಪಾದಕ ಸಂಘದವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೆಗೆದುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಸೂಚಿಸಬೇಕು.
ಡಾ ಜಯರಾಮು. ಅಧ್ಯಕ್ಷರು. ಕರ್ನಾಟಕ ಪಶು ವೈದ್ಯಕೀಯ ಸಂಘ ರಾಮನಗರ
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾ

ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್
ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸ

ಮಹಾ ಮಳೆಗೆ ಮಕಾಡೆ ಮಲಗಿದ ರಾಗಿ ಬೆಳೆ
ಚನ್ನಪಟ್ಟಣ:ಅ/23/20/ಶುಕ್ರವಾರ. ಕಳೆದ ಮೂರು ತಿಂಗಳಿನಿಂದ ಕಷ್ಟಪಟ್ಟು ಬೆಳೆದ ರಾಗಿ ಬೆಳೆಯು ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ರಭ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತ

ರೈತ ಯುವಕರಿಗೆ ಮಾದರಿಯಾದ ಮಾಗಡಿಯ ಜೈನ ಸಮುದಾಯದ ಯುವಕ ಭರತ್ ಜೈನ್
ಮಾಗಡಿ:ಅ/05/20/ಸೋಮವಾರ. ಶೇಟು ಅಥವಾ ಮಾರ್ವಾಡಿ ಅಂದ್ರೆ ಅವರೊಬ್ಬ ಲಾಭ ಮಾಡುವ ವ್ಯಾಪಾರಸ್ಥ ಎಂದೇ ಎಲ್ಲರೂ ಬಣ್ಣಿಸುತ್ತಾರೆ. ಇದನ್ನೂ ಅಲ್ಲಗಳೆಯ

ಎಪಿಎಂಸಿ ಮತ್ತು ಭೂಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ. ರಾಮನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ರಾಮನಗರ:ಸೆ/28/20/ಸೋಮವಾರ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆಗಳಿಗೆ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ
ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.

ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ

ರೈತರ ಕೂಗಿಗೆ ಸರ್ಕಾರ ಸ್ಪಂದಿಸದಿದ್ದರೆ, ಪರ್ಯಾಯ ಅಧಿವೇಶನ ಮಾಡಿ. ವಿಧಾನಸೌಧ ಮುಚ್ಚುತ್ತೇವೆ. ಬಡಗಲಪುರ ನಾಗೇಂದ್ರ

ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ
ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತ
ಪ್ರತಿಕ್ರಿಯೆಗಳು