Tel: 7676775624 | Mail: info@yellowandred.in

Language: EN KAN

    Follow us :


ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

Posted date: 07 Jun, 2020

Powered by:     Yellow and Red

ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

ಚನ್ನಪಟ್ಟಣ:ಜೂ/೦೭/೨೦/ಭಾನುವಾರ ತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿದ ನಂತರ ಆತನ ಮನೆಯಿಂದ ೫೦ ಮೀಟರ್ ಅಂತರವನ್ನು ಕಂಟೋನ್ಮೆಂಟ್ ಝೋನ್ ಎಂದು ಸಂಪೂರ್ಣ ಗ್ರಾಮವನ್ನು ಬಫರ್ ಝೋನ್ ಎಂದು ಜಿಲ್ಲಾಡಳಿತವು ಸೀಲ್ಡೌನ್  ಮಾಡಿದ್ದು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ಗ್ರಾಮದ ಬಹುತೇಕ ಮಂದಿಗೆ ಆಘಾತವಾಗಿದ್ದು, ಸಂಬಂಧಿಸಿದವರು ಶೀಘ್ರವಾಗಿ ತಿಳುವಳಿಕೆ ನೀಡುವ ಮೂಲಕ ಸ್ಪಂದಿಸಬೇಕಿದೆ.


ಶಾನುಭೋಗನಹಳ್ಳಿ ಗ್ರಾಮದಲ್ಲಿ ಸದ್ಯ ೧೧೦ ಮಂದಿ ಡೈರಿಗೆ ಹಾಲು ಹಾಕುತ್ತಿದ್ದು ಬೆಳಿಗ್ಗೆ ಸಮಯದಲ್ಲಿ ೧,೩೫೦ ಲೀಟರ್ ಹಾಗೂ ಸಂಜೆ ಸಮಯದಲ್ಲಿ ೧,೨೫೦ ಲೀಟರ್ ಹಾಲನ್ನು ಡೈರಿಗೆ ಸರಬರಾಜು ಮಾಡಲಾಗುತ್ತಿದ್ದು, ಈಗ ಯಾವುದೇ ವ್ಯಕ್ತಿಯಿಂದ ಸಂಘವು ಹಾಲನ್ನು ಖರೀದಿಸದಿರುವುದರಿಂದ ಭೂಮಿಗೆ ಸುರಿಯುತ್ತಿರುವುದು ಸಂಬಂಧಿಸಿದವರ ಅಜ್ಞಾನ ಎಂದರೆ‌ ತಪ್ಪಾಗಲಾರದು.


ಅಗತ್ಯ ವಸ್ತುಗಳ ಪೂರೈಕೆಯ (SOP) ಕೈಪಿಡಿಯಲ್ಲಿ ಬಫರ್ ಝೋನ್ ನಲ್ಲಿ ಕೃಷಿ ಚಟುವಟಿಕೆಗೆ ಆದ್ಯತೆ ನೀಡಿದ್ದು, ಹೈನುಗಾರಿಕೆಯೂ ಸಹ ಕೃಷಿಗೆ ಬರುವುದರಿಂದ ಕಂಟೋನ್ಮೆಂಟ್ ಝೋನ್ ಹೊರತುಪಡಿಸಿ ಬಫರ್ ಝೋನ್ ನಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡು ಹಾಲು ಖರೀದಿಸಬಹುದಾಗಿದೆ. ಖರೀದಿಸಲಾಗುವುದಿಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳು ಕಾಯಿಸಿ ತುಪ್ಪ ಮಾಡಲು ಅಥವಾ ವೈಜ್ಞಾನಿಕವಾಗಿ ಬೇರೆ ಏನು ಮಾಡಬಹುದು ಎಂಬುದನ್ನು ತಿಳಿ ಹೇಳಿದರೆ ಹೈನುಗಾರರ ಬದುಕನ್ನು ಹಸನು ಮಾಡಬಹುದಾಗಿದೆ.


ಕಂಟೋನ್ಮೆಂಟ್ ಝೋನ್ ಹೊರತುಪಡಿಸಿ ಬಫರ್ ಝೋನ್ ನಲ್ಲಿರುವ ಹೈನೋತ್ಪಾದಕರಿಂದ ಹಾಲು ಖರೀದಿಸಲು ಬಮೂಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಹಲವಾರು ಕಾರಣ ನೀಡಿ ತಿರಸ್ಕರಿಸಿದ್ದು, ರೈತರಿಗೆ ನೆರವಾಗುವ ದೃಷ್ಟಿಯಿಂದ ಬೇರೆ ರೀತಿಯಲ್ಲಿ ಸಹಾಯ ಹಸ್ತ ನೀಡುತ್ತೇವೆ ಎಂದಿದ್ದಾರೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಕ್ರಮ ಕೈಗೊಳ್ಳುತ್ತೇನೆ.
ಬಿ ಕೆ ಸುದರ್ಶನ್. ದಂಡಾಧಿಕಾರಿಗಳು. ಚನ್ನಪಟ್ಟಣ.


ತಾಲ್ಲೂಕಿನಲ್ಲಿ ಇದು ಪ್ರಥಮ ಪ್ರಕರಣವಾಗಿದ್ದು, ಸೋಂಕು ಮತ್ತೊಬ್ಬರಿಗೆ ತಗುಲದಿರಲಿ ಎಂದು ಹಾಲನ್ನು ಖರೀದಿಸುತ್ತಿಲ್ಲ. ರೈತರಿಗೆ ತೊಂದರೆಯಾಗದಿರಲಿ ಎಂಬ ಕಾರಣದಿಂದ ಬಮೂಲ್ ವತಿಯಿಂದ ಶೇ ೫೦ ಹಾಗೂ ಗ್ರಾಮದ ಹಾಲು ಉತ್ಪಾದಕರ ಸಂಘದಿಂದ ಶೇ ೨೫ ರಷ್ಟು ಹಣವನ್ನು ತುಂಬಿಕೊಡಲಾಗುವುದು.


ಜಯಮುತ್ತು ನಿರ್ದೇಶಕರು ಬಮೂಲ್

ಹಾಲನ್ನು ಕರೆಯದೆ ಬಿಟ್ಟರೆ ಕೆಚ್ಚಲು ಬಾವು ಬರುತ್ತದೆ. ಹಾಲು ಉಪಯೋಗವಿಲ್ಲವೆಂದು ಆಹಾರ ಕಡಿಮೆ ನೀಡಿದರೆ ಕೀಟೋಸಿಸ್ (ketosis) ರೋಗ ಬರುತ್ತದೆ. ಕಂಟೋನ್ಮೆಂಟ್ ಝೋನ್ ನವರು ತುಪ್ಪ ಮಾಡಿಕೊಂಡು ಉಪಯೋಗಿಸಬಹುದು. ಬಫರ್ ಝೋನ್ ನವರ ಹಾಲನ್ನು ಉತ್ಪಾದಕ ಸಂಘದವರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ತೆಗೆದುಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಸೂಚಿಸಬೇಕು.
ಡಾ ಜಯರಾಮು. ಅಧ್ಯಕ್ಷರು. ಕರ್ನಾಟಕ ಪಶು ವೈದ್ಯಕೀಯ ಸಂಘ ರಾಮನಗರ


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑