Tel: 7676775624 | Mail: info@yellowandred.in

Language: EN KAN

    Follow us :


ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ

Posted date: 20 Jun, 2020

Powered by:     Yellow and Red

ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ

ಚನ್ನಪಟ್ಟಣ:ಜೂ/೨೦/೨೦/ಶನಿವಾರ. ರೈತರ ಪರವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿ ತಾಲ್ಲೂಕಿನ ಎಪಿಎಂಸಿ ಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷ ವೆಂಕಟಸ್ವಾಮಿ ಹೇಳಿದರು.

ಅವರು ಇಂದು ನಡೆದ ಎಪಿಎಂಸಿ ಅಧ್ಯಕ್ಷೀಯ ಚುನಾವಣೆ ಯಲ್ಲಿ ಗೆದ್ದ ನಂತರ ಪತ್ರಕರ್ತರ ಜೊತೆ ಮಾತನಾಡಿ ಈ ವಿಷಯ ತಿಳಿಸಿದರು.


ಕಾಂಗ್ರೆಸ್ ಮತ್ತು ಬಿಜೆಪಿ ಯ ಆಂತರಿಕ ಒಪ್ಪಂದದ ಮೇರೆಗೆ ಕಾಂಗ್ರೆಸ್ ನ ಪೂರ್ಣಿಮಾ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಕಂ ಬಿಜೆಪಿ ಪಕ್ಷದ ನಿರ್ದೇಶಕರ ಒಳ ಒಪ್ಪಂದದಂತೆ ಅಧ್ಯಕ್ಷ ಸ್ಥಾನಕ್ಕೆ ವೆಂಕಟಸ್ವಾಮಿ ಉಪಾಧ್ಯಕ್ಷ ಸ್ಥಾನಕ್ಕೆ ಕೋಡಂಬಳ್ಳಿ ಕ್ಷೇತ್ರದ ಕೆ ಬಿ ಬೀರಯ್ಯ (ಬಿಳಿ ತಲೆ ಬೀರಯ್ಯ) ನವರು ನಾಮಪತ್ರ ಸಲ್ಲಿಸಿದ್ದರು. ನಾಮಿನಿ ಯ ಮೂವರು ಸದಸ್ಯರು ಸೇರಿ ಹದಿನಾರು ಸದಸ್ಯರ ಪೈಕಿ ವೆಂಕಟಸ್ವಾಮಿ ಒಂಭತ್ತು ಮತಗಳನ್ನು ಪಡೆದು ಜಯಶೀಲರಾದರೇ ಏಳು ಮತಗಳನ್ನು ಪಡೆದ ಪೂರ್ಣಿಮಾ ರವರು ಪರಾಭವಗೊಂಡರು.


ಅಚ್ಚರಿಯ ಬೆಳವಣಿಗೆಯಲ್ಲಿ ಸೋಗಾಲ ಕ್ಷೇತ್ರದ ನಾಗರಾಜು ಬಿಜೆಪಿ ಪಕ್ಷದಿಂದ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡಿದ್ದರಿಂದ ಜೆಡಿಎಸ್ ಪಕ್ಷವು ಅಧ್ಯಕ್ಷ ಸ್ಥಾನ ಹಿಡಿಯಲು ಸುಲಭ ಸಾಧ್ಯವಾಗಿದ್ದು, ಇದು ಮಾಜಿ ಮಂತ್ರಿ ಸಿ ಪಿ ಯೋಗೇಶ್ವರ್ ರವರಿಗೆ ಮುಖಭಂಗ ಎಂದೇ ಭಾವಿಸಬಹುದು.


ಈ ಬಗ್ಗೆ ನಾಗರಾಜು ರವರನ್ನು ಪ್ರಶ್ನಿಸಲಾಗಿ ನಾನು ಯೋಗೇಶ್ವರ್ ಮತ್ತು ಬಿಜೆಪಿ ಪಕ್ಷವನ್ನು ನಂಬಿ ‌ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೆ. ಆದರೆ ಯೋಗೇಶ್ವರ್ ರವರು ಪ್ರತಿ ಭೇಟಿಯಲ್ಲೂ ನೀವು ದಳದ ಫಾಲೋವರ್ ಎಂದೇ ಸಂಭೋದಿಸುತ್ತಿದ್ದುದರಿಂದ ಹಾಗೂ ಅವರ ಮನಸ್ಸಿನಲ್ಲಿ ಅದೇ ಭಾವನೆ ಮೂಡಿದ್ದು ಮುಂದೆಯೂ ಇದು ಪುನಾರವರ್ತನೆ ಆಗುವುದು ಬೇಡ ಎಂದು ನಿನ್ನೆ ದಿನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಮರಳಿ ಮಾತೃ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಿಗೆ ಮತ ಚಲಾಯಿಸುವ ಮೂಲಕ ಪಕ್ಷದ ಗೆಲುವಿಗೆ ಸ್ಪಂದಿಸಿರುವುದಾಗಿ ತಿಳಿಸಿದರು.


ಕಟ್ಟಾ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ನವರ ಅಭಿಮಾನಿಯಾದ ಉಪಾಧ್ಯಕ್ಷ ಕೆ ಬಿ ಬೀರಯ್ಯನವರು ಮಾತನಾಡಿ ನಾನು ಈಗಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದ ವರೆಗೂ ಕಾಂಗ್ರೆಸ್ ನನ್ನನ್ನು ಕಡೆಗಣಿಸಿದೆ. ಈ ಬಾರಿ ತಾಲ್ಲೂಕಿನ ಜೆಡಿಎಸ್ ಪಕ್ಷದ ನಾಯಕರು ನನ್ನನ್ನು ಗುರುತಿಸಿ ಉಪಾಧ್ಯಕ್ಷ ಸ್ಥಾನವನ್ನು ಗೆಲ್ಲಲು ಸಹಕಾರ ನೀಡಿದ್ದಾರೆ. ಅವರಿಗೆ ನಾನು ಚಿರ ಋಣಿ ಆಗಿರುತ್ತೇನೆ. ಈ ವಿಚಾರದಲ್ಲಿ ಯಾರನ್ನೂ ದೂರುವುದಿಲ್ಲ. ತಟಸ್ಥವಾಗಿರುತ್ತೇನೆ ಎಂದರು.


ಜನತಾ ದಳ ಪಕ್ಷದ ನಾಯಕರೇನಕರು ಒಗ್ಗೂಡಿದರೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ನಮಗೂ ಇದಕ್ಕೂ ಸಂಬಂಧವೇ ಇಲ್ಲಾ ಎಂಬಂತೆ ಬಂದು ಹೋಗುವ ಕೆಲಸವನ್ನಷ್ಟೇ ಮಾಡಿದರು. ಬಿಜೆಪಿ ಪಕ್ಷದ ನಾಯಕರ ಗೈರು ಹಾಜರಿ ಎದ್ದು ಕಾಣುತ್ತಿತ್ತು.

ಚುನಾವಣಾಧಿಕಾರಿಯಾಗಿ ತಾಲ್ಲೂಕಿನ ದಂಡಾಧಿಕಾರಿ ಬಿ ಕೆ ಸುದರ್ಶನ್ ರವರು ಕರ್ತವ್ಯ ನಿರ್ವಹಿಸಿದರು. ಪೂರ್ವ ಪೋಲಿಸ್ ಠಾಣೆಯ ಪಿಎಸ್ಐ ಪ್ರಕಾಶ್ ಮತ್ತು ಸಿಬ್ಬಂದಿಗಳು ಬಂದೋಬಸ್ತ್ ಕೈಗೊಂಡಿದ್ದರು.


ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಜೆಡಿಎಸ್ ನ ತಾಲ್ಲೂಕು ಅಧ್ಯಕ್ಷ ಜಯಮುತ್ತು, ನಾಯಕರಾದ ಸಿಂಲಿಂ ನಾಗರಾಜು, ಕರಿಯಪ್ಪ, ಹಾಪ್ ಕಾಮ್ಸ್ ದೇವರಾಜು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜು, ಹಿಂದಿನ ನಿಕಟಪೂರ್ವ ಅಧ್ಯಕ್ಷ ಯಾಲಕ್ಕಿಗೌಡ ರಂಗಸ್ವಾಮಿ, ಕುಕ್ಕೂರುದೊಡ್ಡಿ ಜಯರಾಮು, ಮಳೂರುಪಟ್ಟಣ ರವಿ ಸೇರಿದಂತೆ ಅನೇಕ ನಾಯಕರು ಅಭಿನಂದಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑