ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ
ಚನ್ನಪಟ್ಟಣ:ಜೂ/೨೪/೨೦/ಬುಧವಾರ. ತಾಲ್ಲೂಕಿನ ಭೂಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನ "ಅಧ್ಯಕ್ಷತೆಯಲ್ಲಿ" ಕಾರ್ಯದರ್ಶಿ, ಹಾಲು ಪರೀಕ್ಷಕ ಮತ್ತು ಸಹಾಯಕ ಹಾಲು ಪರೀಕ್ಷಕರು ಸೇರಿ ಪ್ರತಿದಿನವೂ ೩೨ ರಿಂದ ೩೫ ಲೀಟರ್ ಹಾಲು ಕದಿಯುತ್ತಿದ್ದದ್ದು ಇಂದು ಬಹಿರಂಗಗೊಂಡಿದೆ.
ಭೂಹಳ್ಳಿಯ ಹಾಲು ಉತ್ಪಾದಕರ ಸಂಘದಲ್ಲಿ ಶೇಖರಿಸಿದ ಹಾಲಿನ ಡಬ್ಬಗಳನ್ನು ಅರಳಾಳುಸಂದ್ರ ಗ್ರಾಮದಲ್ಲಿರುವ ಶೀಥಲೀಕರಣ ಘಟಕಕ್ಕೆ ಪ್ರತಿದಿನವೂ ಟೆಂಪೋ ಮೂಲಕ ಸಾಗಿಸಲಾಗುತ್ತದೆ. ಈ ಟೆಂಪೋ ಮಾಲೀಕ ಮತ್ತು ಚಾಲಕನೂ ಸಹ ಅಧ್ಯಕ್ಷ ನೇ ಆಗಿದ್ದು ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು ಸಹ ಭಾಗಿಯಾಗಿರುವ ಸಾಧ್ಯತೆ ಇದೆ.
ಹಾಲಿನ ಡಬ್ಬಗಳನ್ನು ತುಂಬಿಕೊಂಡು ದಾರಿ ಮಧ್ಯದಲ್ಲಿ ಒಂದು ಕಡೆ ನಿಲ್ಲಿಸಿ ಎರಡು ಲೀಟರ್ ನೀರಿನ ಎಂಟು ಬಾಟಲ್ ಗಳಲ್ಲಿ ಹಾಲು ತುಂಬಿಸಿಕೊಂಡು ಡಬ್ಬಕ್ಕೆ ನೀರು ತುಂಬಿಸಿ ಶೀಥಲೀಕರಣ ಘಟಕಕ್ಕೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಹಾಲು ಉತ್ಪಾದಕರಿಗೆ ಅನುಮಾನ ಬಂದು ಹಿಂಬಾಲಿಸಿ ಹಾಲನ್ನು ಕದಿಯುತ್ತಿದ್ದುದನ್ನು ಖುದ್ದು ಹಿಡಿದು ಬಮೂಲ್ ನ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಂತರ ಅಧಿಕಾರಿಗಳು ಭೇಟಿ ನೀಡಿ ರಾಜಿ ಸಂಧಾನ ಅಥವಾ ಕ್ರಮ ಕೈಗೊಳ್ಳುವ ಸಲುವಾಗಿಯೋ ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಅರಳಾಳುಸಂದ್ರ ಶೀಥಲೀಕರಣ ಆರಂಭವಾದ ದಿನದಿಂದ ಇಲ್ಲಿಯವರೆಗೂ ಸಂಘಕ್ಕೆ ಆಗಿರುವ ನಷ್ಟ ತುಂಬಿಕೊಡುವಂತೆ ಬಮೂಲ್ ಸೂಪರ್ ವೈಸರ್ ಹೊನ್ನಪ್ಪ ಪೂಜಾರ್ ತಿಳಿಸಿದ್ದಾರೆ ಎಂಬ ಮಾಹಿತಿಯನ್ನು ನಂಬಲರ್ಹ ಮೂಲಗಳು ಖಚಿತಪಡಿಸಿವೆ. ಸಂಬಂಧಿಸಿದವರನ್ನು ಕೆಲಸದಿಂದ ವಜಾಗೊಳಿಸುವ ಕೆಲಸವನ್ನು ಆಡಳಿತ ಮಂಡಳಿ ಮಾಡಬೇಕಾಗಿದೆ. ಅಧಿಕಾರಿ ಹೊನ್ನಪ್ಪಪೂಜಾರ್ ರವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಅಧ್ಯಕ್ಷ ಕಂ ಚಾಲಕ ಹಾಲು ಕದಿಯುತ್ತಿದ್ದುದ್ದನ್ನು ಒಪ್ಪಿಕೊಂಡಿದ್ದಾರೆ. ನಷ್ಟವನ್ನು ತುಂಬಿಕೊಡುವುದಾಗಿಯೂ ಹೇಳಿದ್ದಾರೆ. ಮತ್ತೊಮ್ಮೆ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಬಮೂಲ್ ನಿರ್ದೇಶಕ ಜಯಮುತ್ತು ಮಾತನಾಡಿ ಒಂದೇ ಒಂದು ದಿನದ ಮಾಹಿತಿಯನ್ನು ಬಿಡದೇ ಸಂಗ್ರಹಿಸಿ, ಒಟ್ಟು ಎಷ್ಟು ದಿನದಿಂದ ಎಷ್ಟೆಷ್ಟು ಹಾಲನ್ನು, ಯಾರು ಯಾರು ಹೇಗೆ ಕದಿಯುತ್ತಿದ್ದರು. ಎಷ್ಟು ಕದ್ದಿದ್ದಾರೆ ಎಂಬುದನ್ನು ಕಲೆಹಾಕಿ, ಅಷ್ಟು ಬಾಬ್ತನ್ನು ಜಮಾ ಮಾಡಿಸುವುದಾಗಿ ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು