ರಸಗೊಬ್ಬರಕ್ಕೆ ಹಾತೊರೆಯುತ್ತಿರುವ ರೈತರು. ಸಕಾಲದಲ್ಲಿ ಸ್ಪಂದಿಸದ ಇಲಾಖೆ
ಚನ್ನಪಟ್ಟಣ:ಸೆ/14/20/ಸೋಮವಾರ. ಇತ್ತೀಚೆಗೆ ಒಳ್ಳೆಯ ಮಳೆಯಾಗುತ್ತಿದ್ದು, ತಾಲೂಕಿನಾದ್ಯಂತ ರಾಗಿ ಸೇರಿದಂತೆ ಇನ್ನಿತರ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ರೈತರಿಗೆ ಸಕಾಲದಲ್ಲಿ ಬೇಕಾದ ರಸಗೊಬ್ಬರವನ್ನು ಇಲಾಖೆ ಪೂರೈಸಲಾಗದೆ, ಕೇವಲ ಒಂದು ಚೀಲ ಯೂರಿಯಾ ಗೊಬ್ಬರಕ್ಕಾಗಿ ಕನಿಷ್ಠ ನಾಲ್ಕು ಗಂಟೆಗಳ ಕಾಲ ಕಾಯುವಂತ ಸ್ಥಿತಿಗೆ ರೈತರನ್ನು ಇಲಾಖೆ ದೂಡಿದೆ.
ನಗರದ ಸಾತನೂರು ರಸ್ತೆಯಲ್ಲಿರುವ ಗೋದಾಮುವಿನ ಬಳಿ ಇಂದು 500 ಕ್ಕೂ ಹೆಚ್ಚು ಮಂದಿ ಬೆಳಿಗ್ಗೆ ಆರು ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದ ದೃಶ್ಯ ಕಂಡುಬಂದಿತು.
ತಂತಮ್ಮ ಆಧಾರ್ ಕಾರ್ಡ್ ಹಿಡಿದು ಕಾಫಿ, ತಿಂಡಿಯೂ ಇಲ್ಲದೆ, ತಡವಾಗಿ ಹೋದರೆ ಒಂದು ಚೀಲವು ಸಿಗದೇ ಹೋಗಬಹುದು ಎಂಬ ಆತಂಕದಿಂದ ರೈತರು ಜಮಾಯಿಸಿದರು.
ತಾಲ್ಲೂಕಿಗೆ ಈ ಮಳೆಗಾಲದಲ್ಲಿ 450 ರಿಂದ 500 ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದ್ದು, ಪ್ರತಿ ವರ್ಷವೂ ಇಲಾಖೆಯು ಕೈಚೆಲ್ಲುವುದು, ಸಭೆಗಳಲ್ಲಿ ಎಲ್ಲವೂ ಸರಿಯಾಗಿದೆ. ದಾಸ್ತಾನು ಇದೆ ಎಂದು ಹೇಳುವುದನ್ನು ಮಾಡುತ್ತಾರೆಯೇ ವಿನಹ, ರೈತರಿಗೆ ಬೇಕಾಗುವಷ್ಟು ರಸಗೊಬ್ಬರವನ್ನು ಮಾತ್ರ ಯಾವ ವರ್ಷವೂ ಕೊಡದಿರುವುದು ಇಲಾಖೆಯ ಅಧಿಕಾರಿಗಳು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎನ್ನಬಹುದು.
ನಮ್ಮ ನಗರದ ಗೋದಾಮಿನಲ್ಲಿ 20 ಟನ್ ಯೂರಿಯಾ ಇದೆ. ಪ್ರತಿಯೊಬ್ಬರಿಗೂ ಒಂದೊಂದು ಚೀಲ ನೀಡಲು ಸೂಚಿಸಲಾಗಿದೆ. ನಾಳೆ ಬೆಳಿಗ್ಗೆಯೂ ಸಹ ರಸಗೊಬ್ಬರ ಬರಲಿದೆ. ಈ ಸಾಲಿಗೆ ಬೇಕಾದಷ್ಟು ರಸಗೊಬ್ಬರವನ್ನು ಸಕಾಲದಲ್ಲಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಕೊರತೆಯನ್ನು ಶೀಘ್ರವಾಗಿ ನೀಗಿಸುತ್ತೇವೆ.
*ಅಪರ್ಣಾ. ಕೃಷಿ ಅಧಿಕಾರಿ. ಚನ್ನಪಟ್ಟಣ.*
ನಾವು ವ್ಯವಸಾಯಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಬದಿಗೊತ್ತಿ, ಒಂದು ಚೀಲ ರಸಗೊಬ್ಬರಕ್ಕಾಗಿ ಒಪ್ಪತ್ತು ಕಾಯಬೇಕಾದ ಸ್ಥಿತಿಗೆ ರೈತರನ್ನು ದೂಡಿದ್ದಾರೆ. ಒಂದು ವರ್ಷವೂ ದಾಸ್ತಾನು ಇಡದೆ ಕೊನೆ ಗಳಿಗೆಯಲ್ಲಿ ಕಾಯಿಸುವುದು ಯಾವ ನ್ಯಾಯ. ಹೀಗೆ ಮುಂದುವರೆದರೆ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ.
*ಸ್ವಾಮಿ ರಾಂಪುರ*
ಮಳೆ ಹೆಚ್ಚಾಗಿ ಬೀಳುತ್ತಿರುವುದರಿಂದ ರಾಗಿ ಬಿಳುಚಿಕೊಳ್ಳುತ್ತಿದೆ. ಈ ಸಮಯದಲ್ಲಿ ಯೂರಿಯಾ ದ ಅವಶ್ಯಕತೆ ಇದೆ. ಈಗ ಹಾಕಿದರೆ ಮಾತ್ರ ರಾಗಿ ಪೈರು ಕಪ್ಪು ಬಣ್ಣಕ್ಕೆ ತಿರುಗಿ ಹುಲುಸಾಗಿ ಬೆಳೆಯಲು ಸಾಧ್ಯ. ಮಳೆಗಾಲ ಮುಗಿದ ನಂತರ ಕೊಟ್ಟರೆ ಯಾರಿಗೂ ಉಪಯೋಗವಿಲ್ಲ.
*ಎಂ ಕುಮಾರ. ಜಿಜಿ ದೊಡ್ಡಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು