Tel: 7676775624 | Mail: info@yellowandred.in

Language: EN KAN

    Follow us :


ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ

Posted date: 28 Sep, 2020

Powered by:     Yellow and Red

ಯಶಸ್ವಿಯಾದ ಬಂದ್: ಸಂಪೂರ್ಣ ಸ್ತಬ್ದವಾದ ನಗರ

ಚನ್ನಪಟ್ಟಣ:ಸೆ/28/20/ಸೋಮವಾರ. ರೈತಸಂಘ ಸೇರಿದಂತೆ ಅನೇಕ ಸಂಘಟನೆಗಳು ಇಂದು ಬಂದ್ ಗೆ ಕರೆನೀಡಿದ್ದು ನಗರದಲ್ಲಿ ಯಶಸ್ವಿಗೊಂಡಿತು.

ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ, ಕಾರ್ಮಿಕ ಸಂಘಟನೆ ಹಾಗೂ ದಲಿತ ಪರ ಸಂಘಟನೆ ಸೇರಿದಂತೆ ಇನ್ನಿತರ ಸಂಘಟನೆಗಳು ಎಪಿಎಂಸಿ ಕಾಯ್ದೆ ಮತ್ತು ಭೂ ಮಸೂದೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದರು. ಕಳೆದ ವಾರದಿಂದಲೇ ಬಂದ್ ಬಗ್ಗೆ ಮಾಹಿತಿ ಇದ್ದು, ನಿನ್ನೆ ದಿನ ಆಟೋದಲ್ಲಿ ಪ್ರಚಾರ ಮಾಡಿದ್ದರೂ ಸಹ ಕೆಲ ಅಂಗಡಿಗಳು ಬಾಗಿಲು ತೆಗೆದಿದ್ದನ್ನು ಗಮನಿಸಿದ ರೈತ ಸಂಘದವರು ಬಾಗಿಲು ಮುಚ್ಚಿಸುವ ಮೂಲಕ ನಗರವನ್ನು ಸಂಪೂರ್ಣ ಸ್ತಬ್ದಗೊಳಿಸಿದರು.


*ಬೈಕ್ ಸವಾರಿ ಮೂಲಕ ತೆರಳಿ ಬಂದ್*

ಮೊದಲಿಗೆ ಗಾಂಧಿಭವನದ ಬಳಿ ಜಮಾವಣೆಗೊಂಡ ರೈತರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ನಿರ್ಧಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ನಂತರ ಬೈಕ್ ಮೂಲಕ ರೈತರು ಎಂ ಜಿ ರಸ್ತೆ, ಡಿ ಟಿ ರಾಮು ವೃತ್ತ, ಎಂಜಿ ಮತ್ತು ಜೆಸಿ ರಸ್ತೆ ಕೂಡುವ ದಾರಿ ಪಂಚದೀಪ (ಡೂಂಲೈಟ್) ವೃತ್ತ, ಮದಿನಾ ಚೌಕ, ಸಾತನೂರು ವೃತ್ತ, ಸಾತನೂರು ರಸ್ತೆಯ ಗಣೇಶನ ದೇವಾಲಯ, ತರಕಾರಿ ಮಾರುಕಟ್ಟೆ, ಜೆಸಿ ರಸ್ತೆಯ ಪೇಟೆ ಬೀದಿ, ಎಪಿಎಂಸಿ ಮಾರುಕಟ್ಟೆ ಸೇರಿದಂತೆ ಅನೇಕ ಬೀದಿಗಳಲ್ಲಿ ಅಂಗಡಿಮುಂಗಟ್ಟುಗಳನ್ನು ಮುಚ್ಚಿಸಿದರು.


*ಭಾಗಿಯಾಗದ ಸಂಘಟನೆಗಳು*

ತಾಲ್ಲೂಕಿನಲ್ಲಿ ನಾಡುನುಡಿ ಪರ, ಕನ್ನಡ ಪರ, ದಲಿತ ಮತ್ತು ಕಾರ್ಮಿಕರು, ರೈತಸಂಘ ದ ಬಣಗಳು ಹಾಗೂ ಇನ್ನಿತರ ಸಂಘಟನೆಗಳು ಭಾಗಿಯಾಗುತ್ತಾರೆ ಎಂಬುದನ್ನು ಈ ಮೊದಲು ರೈತಸಂಘದ ಪದಾಧಿಕಾರಿಗಳು ತಿಳಿಸಿದ್ದರಾದರೂ, ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸಾಗರ್ ಮತ್ತು ನಾಲ್ಕೈದು ಮಂದಿ ಹೊರತುಪಡಿಸಿ ಮಿಕ್ಕ ಸಂಘಸಂಸ್ಥೆಗಳು ಭಾಗಿಯಾಗಿದ್ದು ಕಂಡುಬರಲಿಲ್ಲ.


*ಕೃಷ್ಣಪ್ರಸಾದ್ ಹೋಟೆಲ್ ಮಾಲೀಕರಿಗೆ ತರಾಟೆ*

ಡಿ ಟಿ ರಾಮು ವೃತ್ತದಲ್ಲಿರುವ ಕೃಷ್ಣಪ್ರಸಾದ್ ಹೋಟೆಲ್‌ ತೆಗೆದಿದ್ದನ್ನು ಗಮನಿಸಿದ ರೈತರು ಅದರ ಮಾಲೀಕರಿಗೆ ತರಾಟೆ ತೆಗೆದುಕೊಂಡರು. ಹೆಗಲ ಮೇಲೆ ಹಸಿರು ಟವೆಲ್ ಹಾಕಿಕೊಳ್ಳುವ ನೀವು ಹೋಟೆಲ್ ಬಂದ್ ಮಾಡದೆ ತೆಗೆದಿರುವುದು ಟವೆಲ್ ಗೆ ಮಾಡಿದ ಅಪಮಾನ. ಎಂದು ತರಾಟೆಗೆ ತೆಗೆದುಕೊಂಡ ನಂತರ ಬಾಗಿಲು ಮುಚ್ಚಿದರು.


*ಕೆಲಸ ನಿರ್ವಹಿಸಿದ ಸರ್ಕಾರಿ ಕಛೇರಿಗಳು*

ತಾಲ್ಲೂಕು ಆಡಳಿತದ ಎಲ್ಲಾ ಕಛೇರಿಗಳು, ರೇಷ್ಮೆ ಗೂಡಿನ ಮಾರುಕಟ್ಟೆ ಸೇರಿದಂತೆ ಇನ್ನಿತರ ಸರ್ಕಾರದ ಎಲ್ಲಾ ಕಛೇರಿಗಳು ಬಾಗಿಲು ತೆಗೆದು ಎಂದಿನಂತೆ ಕಾರ್ಯನಿರ್ವಹಿಸಿದವು. ಪತ್ರಿಕೆಯ ಜೊತೆ ಮಾತನಾಡಿದ ದಂಡಾಧಿಕಾರಿ ನಾಗೇಶ್ ರವರು ನಮಗೆ ಸರ್ಕಾರದಿಂದ ಯಾವುದೇ ಸಂದೇಶ ಬಂದಿಲ್ಲ. ಎಂದಿನಂತೆ ಎಲ್ಲಾ ಕಛೇರಿಗಳು ಕೆಲಸ ನಿರ್ವಹಿಸುತ್ತಿವೆ ಎಂದರು.


*ಅಬ್ಬರವಿಲ್ಲದ ವಾಹನಗಳು*

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಭರಾಟೆ ಬಹಳ ಕಡಿಮೆ ಸಂಖ್ಯೆಯಲ್ಲಿ ಇತ್ತು. ಬಸ್ ಮತ್ತು ಲಾರಿಗಳ ಸಂಖ್ಯೆ ತೀರಾ ವಿರಳವಾಗಿದ್ದು, ಕಾರುಗಳ ಸಂಖ್ಯೆ ಹೆಚ್ಚಾಗಿದ್ದು, ದಿನನಿತ್ಯದಂತೆ ದ್ವಿಚಕ್ರ ವಾಹನಗಳು ಭರದಿಂದ ಸಾಗುತ್ತಿರುವುದು ನೋಡಿದರೆ ಇವರಿಗೆ ಬಂದ್ ನ ಬಿಸಿ ತಟ್ಟಿಲ್ಲ ಎಂಬುದು ವೇದ್ಯವಾಗುತ್ತದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑