Tel: 7676775624 | Mail: info@yellowandred.in

Language: EN KAN

    Follow us :


ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್

Posted date: 08 Nov, 2020

Powered by:     Yellow and Red

ಇರುವ ಜಮೀನು ಬಿಟ್ಟು ಪರರ ಬಳಿ ಕೂಲಿ ಮಾಡುವ ಬದಲು ಸಾವಯವ ಕೃಷಿ ಮಾಡಿ ತಿಂಗಳಿಗೆ ಲಕ್ಷ ರೂಪಾಯಿ ಗಳಿಸಿ ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಮಧುಚಂದನ್

ಚನ್ನಪಟ್ಟಣ:ನ/07/20/ಶನಿವಾರ. ವ್ವವಸಾಯ ಮಾಡಲು ದೊಡ್ಡ ಮಟ್ಟದ ಭೂ ಒಡೆಯನೇ ಆಗಬೇಕೆಂದಿಲ್ಲ. ಕನಿಷ್ಠ ಅರ್ಧ ಎಕರೆ ಭೂಮಿ ಇದ್ದು ಪ್ರಾಮಾಣಿಕವಾಗಿ ಸಾವಯವ ಕೃಷಿ ಮಾಡಿದರೆ ಒಂದು ಎಕರೆಗೆ, ಒಂದು ತಿಂಗಳಿಗೆ ಒಂದು ಲಕ್ಷ ರೂಪಾಯಿಯನ್ನು ಗಳಿಸಬಹುದು. ಹಾಗೂ ತಮ್ಮ ಆರೋಗ್ಯದ ಜೊತೆಗೆ ಗ್ರಾಹಕರ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳುವಲ್ಲಿ ನೆರವಾಗಬಹುದು. ಸಾವಯವ ಕೃಷಿ ಮಾಡುವುದರಿಂದ ಭೂತಾಯಿಗೆ ಮತ್ತು ವಾತಾವರಣಕ್ಕೂ ಸಹ ತಮ್ಮದೇ ಕೊಡುಗೆಯನ್ನು ನೀಡಬಹುದು ಎಂದು ಮಂಡ್ಯ ಆರ್ಗಾನಿಕ್ ಸಂಸ್ಥಾಪಕ ಎಸ್ ಸಿ ಮಧುಚಂದನ್ ತಿಳಿಸಿದರು.


ಅವರು ಇಂದು ಬೆಂಗಳೂರು ಮೈಸೂರು ಹೆದ್ದಾರಿಯ ತಾಲೂಕಿನ ಮತ್ತೀಕೆರೆ ಗ್ರಾಮದ ಬಳಿ ಇರುವ ಶಿವಳ್ಳಿ ಎಂಟಿಆರ್ ಆವರಣದಲ್ಲಿ ಮಂಡ್ಯ ಆರ್ಗಾನಿಕ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಾವಯವ ಕೃಷಿಯ ಉಚಿತ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.


ಸಾವಯವ ಎಂಬುದು ನಮ್ಮ ಪೂರ್ವಜರ ಕೊಡುಗೆ, ಇಂದಿನ ಕೆಲವು ಆಧುನಿಕತೆ ಮತ್ತು ರಾಸಾಯನಿಕಗಳ ಬಳಕೆಯಿಂದ ನಮ್ಮ ಆರೋಗ್ಯ ಮತ್ತು ಆಯಸ್ಸು ಎರಡನ್ನೂ ಕಳೆದುಕೊಳ್ಳುತ್ತಿದ್ದೇವೆ. ಇದನ್ನು ಹೋಗಲಾಡಿಸಲೋಸುಗವೇ ನಾನು ಲಕ್ಷ ಲಕ್ಷ ಹಣ ಎಣಿಸುವ ಸಾಪ್ಟ್ ವೇರ್ ಉದ್ಯೋಗ ಬಿಟ್ಟು ಸಾವಯವ ಕೃಷಿಗೆ ಮರಳಿದ್ದೇನೆ. ಅದು ನನ್ನೊಬ್ಬನ ಆರೋಗ್ಯ ಆರ್ಥಿಕ ಉದ್ದಾರಕ್ಕೆ ಸೀಮಿತವಾಗಬಾರದು. ತನ್ನ ಪಿರ್ತಾರ್ಜಿತ ಆಸ್ತಿ ಬಿಟ್ಟು ನಗರಗಳಲ್ಲಿ ಬದುಕು ಕಟ್ಟಿಕೊಳ್ಳಲು ಹಂಬಲಿಸುತ್ತಿರುವವರು ಸಹ ಹಳ್ಳಿಗೆ ಹಿಂದಿರುಗಿ ಸಾವಯವ ಕೃಷಿ ಮೂಲಕವೇ ಆರೋಗ್ಯ ಮತ್ತು ಆರ್ಥಿಕತೆಯನ್ನು ಭದ್ರವಾಗಿಸಿಕೊಳ್ಳಲೆಂದು ಉಚಿತವಾಗಿ, ತಜ್ಞರಿಂದ ತರಬೇತಿಯನ್ನು ಪ್ರತಿ ತಿಂಗಳು ನೀಡುತ್ತಿದ್ದೇವೆ. ಇದನ್ನು ಯುವಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.


ಮಂಡ್ಯ ಆರ್ಗಾನಿಕ್ ಸಂಸ್ಥೆಯ ಸಹಸಂಸ್ಥಾಪಕ ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಮೈಸೂರು ಪ್ರಸನ್ನ ಮಾತನಾಡಿ, ಬದಲಾವಣೆ ಎಂಬುದನ್ನು ಬೇರೆ ಯಾರಲ್ಲೋ ನಿರೀಕ್ಷಿಸುವ ಬದಲು ನಮ್ಮಲ್ಲೇ ಬದಲಾವಣೆ ಮಾಡಿಕೊಳ್ಳಬೇಕು. ಅನೇಕರು ವಾತಾವರಣ ಮತ್ತು ಆರೋಗ್ಯದ ವಿಷಯಗಳಲ್ಲಿ ಬದಲಾವಣೆ ಬಯಸಿದ್ದಾರೆ. ಆದ್ದರಿಂದಲೇ ರಾಜ್ಯದಾದ್ಯಂತ ಇಂದಿನ ತರಬೇತಿಗೆ ಐದುನೂರಕ್ಕೂ ಹೆಚ್ಚು ಮಂದಿ ಸರಿಯಾದ ಸಮಯಕ್ಕೆ ಬಂದು ಸಾವಯವ ಕೃಷಿ ಬಗ್ಗೆ ಆಲಿಸಿತ್ತಿರುವುದೇ ಸಾಕ್ಷಿ ಎಂದರು.


ನಮ್ಮ ಆರೋಗ್ಯ ನಮ್ಮ ಕೈಯ್ಯಲ್ಲಿ ಎಂಬಂತೆ, ಕನಿಷ್ಠ ಭೂಮಿ ಇರುವವರು ಸಹ ಸಾವಯವ ತರಕಾರಿ ಬೆಳೆದು ಉತ್ತಮ ಜೀವನ ರೂಪಿಸಿಕೊಳ್ಳಬಹುದು. ನಗರದಲ್ಲಿರುವವರು ಸಹ ತಮ್ಮ ಮೇಲ್ಚಾವಣಿಯಲ್ಲಿ ಹಾಗೂ ಕುಂಡಗಳಲ್ಲಿಯೂ ಸಹ ಸಾವಯವ ಕೃಷಿ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳಲು ಇಂತಹ ತರಬೇತಿಗಳು ಅನುಕೂಲವಾಗಲಿವೆ ಎಂದರು.


ಮತ್ತೊಬ್ಬ ಕೃಷಿ ತಜ್ಞ ಕೃಷ್ಣ ಮಾತನಾಡಿ, ಯಾವ್ಯಾವ ಬೆಳೆಗಳಿಗೆ ಯಾವ ರೀತಿಯಲ್ಲಿ ಮಣ್ಣನ್ನು ಹದಗೊಳಿಸಬೇಕು, ರಸಗೊಬ್ಬರಗಳಿಲ್ಲದೆ, ಕೊಟ್ಟಿಗೆ ಗೊಬ್ಬರವನ್ನು ಎಷ್ಟರ ಪ್ರಮಾಣದಲ್ಲಿ ಹಾಕಬೇಕು, ಜೀವಾಮೃತವನ್ನು ತಯಾರಿಸುವುದು ಹೇಗೆ, ಕೀಟಬಾಧೆಗೆ ರಾಸಾಯನಿಕ ಮುಕ್ತ ಔಷಧದ ತಯಾರಿಕೆ ಹೇಗೆ. ತರಕಾರಿಗಳನ್ನು ಯಾವ ಸಮಯದಲ್ಲಿ, ಎಷ್ಟು ಪ್ರಮಾಣದಲ್ಲಿ ಯಾವ ರೀತಿ ಬೆಳೆದರೆ ಮಾರುಕಟ್ಟೆ ಸೂಕ್ತ ಎಂಬುದರ ಬಗ್ಗೆ ವಿವರಿಸಿದರು.

ಅನೇಕ ಜಿಲ್ಲೆಗಳಿಂದ ಐದುನೂರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಮೂಲಕ ಸಾವಯವ ಕೃಷಿ ಬಗ್ಗೆ ತಿಳಿದುಕೊಂಡರು. ಆರ್ಗಾನಿಕ್ ಸಂಸ್ಥೆಯಲ್ಲಿನ ಸಾವಯವ ಪದಾರ್ಥಗಳ ಬಗ್ಗೆಯೂ ಸಹ ಸಿಬ್ಬಂದಿಗಳು ತರಬೇತಿದಾರರಿಗೆ ಮಾಹಿತಿ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑