ಕಿಸಾನ್ ಯೋಜನೆಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ತಹಶಿಲ್ದಾರ್ ನಾಗೇಶ್ ಕರೆ.
ಚನ್ನಪಟ್ಟಣ:ಡಿ/28/20/ಸೋಮವಾರ. ಕಿಸಾನ್ ವತಿಯಿಂದ ಬಹಳಷ್ಟು ಯೋಜನೆಗಳಿದ್ದು ರೈತರು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಾಲ್ಲೂಕಿನ ದಂಡಾಧಿಕಾರಿ ನಾಗೇಶ್ ರವರು ರೈತರಿಗೆ ಕರೆ ನೀಡಿದರು. ಅವರು ಇಂದು ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು ಸಾಫ್ಟವೇರ್ ಇಂಜಿನಿಯರ್ ಗಳು ಸಹ ತಮ್ಮ ಲಕ್ಷಾಂತರ ರೂಪಾಯಿಗಳ ಸಂಬಳ ಬಿಟ್ಟು ಕೃಷಿ ಮಾಡುತ್ತಿದ್ದಾರೆ. ಅವರು ತಂತ್ರಜ್ಞಾನವನ್ನು ಬಳಸಿಕೊಂಡು ಸಂಬಳದಷ್ಟೇ ಲಾಭವನ್ನು ಕೃಷಿಯಿಂದ ಪಡೆಯುತ್ತಿದ್ದಾರೆ. ನೀವು ಸಹ ಕೃಷಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಸಹಾಯ ಪಡೆದು ಲಾಭದ ಕೃಷಿಯಲ್ಲಿ ತೊಡಗಬೇಕು ಎಂದರು.
ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿಕರಿಗೆ ಅನೇಕ ಯೋಜನೆಗಳನ್ನು ತಂದಿದೆ. ರೈತರಿಗೆ ಮತ್ತು ಬೆಳೆ ಎರಡಕ್ಕೂ ವಿಮೆಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಬಹುತೇಕ ರೈತರು ಕಿಸಾನ್ ಗೆ ಸಂಬಂಧಿಸಿದ ಯೋಜನೆಗಳನ್ನು ಪಡೆದುಕೊಳ್ಳಲಾಗಿಲ್ಲ. ಕಾರಣ ರೈತರು ಇನ್ನೂ ಪೌತಿಖಾತೆ ಮಾಡಿಸಿಕೊಳ್ಳದಿರುವುದು ಯೋಜನೆ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಕೆಲಸಗಳು ಮುಗಿದ ತಕ್ಷಣ ರೈತರು ಪೌತಿಖಾತೆ ಮಾಡಿಸಿಕೊಂಡು ಕೃಷಿ ಇಲಾಖೆಯ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
*ರೈತಗೀತೆ ಮತ್ತು ನಾಡಗೀತೆ ಅವಮಾನ*
ರೈತ ದಿನಾಚರಣೆಯಲ್ಲಿ ಹಾಗೂ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮವಿರಲಿ ಅಲ್ಲಿ ಕಾರ್ಯಕ್ರಮಕ್ಕೆ ನಾಡಗೀತೆ ಮತ್ತು ರೈತಗೀತೆ ಕಡ್ಡಾಯ. ಆದರೆ ರೈತ ದಿನಾಚರಣೆ ಏರ್ಪಡಿಸಿದ್ದ ಕೃಷಿ ಇಲಾಖೆಯು ಕೀರಲು ಧ್ವನಿಯ ಕ್ಯಾಸೆಟ್ ನಲ್ಲಿ ಗೀತೆಗಳನ್ನು ಪ್ರಸ್ತುತ ಪಡಿಸಿತ್ತಾದರೂ ಹಲವಾರು ಬಾರಿ ಕೇಳಿಸದೇ, ಬಿಡಿಬಿಡಿಯಾಗಿ ಬಂತು. ಇನ್ನೂ ರೈತ ಗೀತೆಯಂತೂ ಮೊದಲು ಸ್ವಲ್ಪ ಬಂದು ಆಮೇಲೆ ನಿಂತೇ ಹೋಯಿತು. ನಾಡಗೀತೆಯ ನಂತರ ಮತ್ತೊಮ್ಮೆ ಹಾಕಿದರೂ ಸಹ ಸರಿಯಾಗಿ ಧ್ವನಿ ಬಾರದ್ದರಿಂದ ವೇದಿಕೆಯ ಮೇಲಿದ್ದ ಅಧಿಕಾರಿಗಳು ಮತ್ತು ನೆರೆದಿದ್ದ ರೈತರು ಮುಜುಗರಕ್ಕೊಳಪಟ್ಟರು.
ತಾಲೂಕಿನಲ್ಲಿ ಅನೇಕ ಹಾಡುಗಾರರಿದ್ದೂ ಸಹ ಯಾರನ್ನೂ ಕರೆಯದೇ ಕ್ಯಾಸೆಟ್ ಗೆ ಮೊರೆ ಹೋಗಿದ್ದು. ಕಳೆದ ವರ್ಷವೂ ಸಹ ಇದೇ ರೀತಿಯಾಗಿದ್ದರೂ, ಅಧಿಕಾರಿಗಳು ಸರಿಪಡಿಸಿಕೊಳ್ಳದಿರುವುದು ರೈತರಿಗೆ ಮತ್ತು ನಾಡಿಗೆ ಅವಮಾನ ಮಾಡಿದಂತಾಗಿದೆ.
ಕೃಷಿಕ ಸಮಾಜದ ಅಧ್ಯಕ್ಷ ಬಸವೇಗೌಡ, ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ ರಾಮು ಮತ್ತು ಕೃಷಿ ಇಲಾಖೆಯ ಅಧಿಕಾರಿ ಅಪರ್ಣಾ ರವರು ಮಾತನಾಡಿದರು. ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ಒದಗಿಸಲಾಯಿತು. ಜಿಕೆವಿಕೆ ಯ ಅಧಿಕಾರಿ ಶ್ರೀನಿವಾಸರೆಡ್ಡಿ ಯವರು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಪಶು ಇಲಾಖೆಯ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆಯ ಅಧಿಕಾರಿ ವಿವೇಕ್ ಉಪಸ್ಥಿತರಿದ್ದರು.
ರೈತ ಮುಖಂಡರಾದ ಕೃಷ್ಣೇಗೌಡ, ತಾಲ್ಲೂಕು ಅಧ್ಯಕ್ಷ ರಾಮೇಗೌಡ ಸೇರಿದಂತೆ ನೂರಾರು ಮಂದಿ ರೈತರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು