ರೈತ ವಿರೋಧಿ ಕಾಯ್ದೆ ಬಗ್ಗೆ ಧ್ವನಿ ಎತ್ತುವಂತೆ ಸಿ ಪಿ ಯೋಗೇಶ್ವರ್ ಮನೆಮುಂದೆ ರೈತಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ.ಜೂ.05: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ರೈತ ಸಂಘದ ಪದಾಧಿಕಾರಿಗಳು, ಪ್ರವಾಸೋದ್ಯಮ ಮತ್ತು ಜೀವಶಾಸ್ತç ಇಲಾಖೆಯ ಸಚಿವರಾದ ಸಿ.ಪಿ ಯೋಗೇಶ್ವರ್ ಅವರ ಚನ್ನಪಟ್ಟಣದ ಮನೆಯ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ವಿಷಯ ತಿಳಿದ ಸಿ.ಪಿ ಯೋಗೇಶ್ವರ್ ಅವರು ಬೆಂಗಳೂರು ನಿವಾಸದಿಂದ ಚನ್ನಪಟ್ಟಣದ ನಿವಾಸಕ್ಕೆ ಬಂದು ಮನವಿ ಸ್ವೀಕರಿಸಿದರು.
ಈ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಎಂ.ರಾಮು, ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ. ಇದರ ವಿರುದ್ಧ ದೆಹಲಿಯ ಗಡಿ ಭಾಗದಲ್ಲಿ ಕಳೆದ ಆರು ತಿಂಗಳಿAದ ಪ್ರತಿ ಭಟನೆ ನಡೆಸಲಾಗುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಈ ಕಡೆ ಕಣ್ಣೆತ್ತಿಯೂ ನೋಡುತ್ತಿಲ್ಲ, ರೈತರ ಕೂಗನ್ನು ಆಲಿಸುತ್ತಿಲ್ಲ ಇದು ರೈತ ವಿರೋಧಿ ಸರ್ಕಾರವೇ ಹೊರತು, ರೈತ ಪರ ಸರ್ಕಾರವಲ್ಲ ಎಂದು ದೂರಿದರು.
ಪ್ರಧಾನಿಯವರನ್ನು ಮನವೊಲಿಸುವ ಕೆಲಸವನ್ನು ಸಚಿವರಾಗಲಿ, ಸಂಸದರಾಗಲಿ ಮಾಡುತ್ತಿಲ್ಲ. ಇವರೆಲ್ಲರೂ ರೈತರ ಮೂಲಕವೇ ಜನಪ್ರತಿನಿಧಿಯಾಗಿದ್ದಾರೆ, ಮೂಲತಃ ಇವರೆಲ್ಲರು ರೈತರ ಮಕ್ಕಳೆ, ಆದರೂ ಸಹ ರೈತರ ಸಂಕಷ್ಟವನ್ನು ಅರಿಯದವರಾಗಿದ್ದಾರೆ, ಆದ್ದರಿಂದ ರಾಜ್ಯದಾದ್ಯಂತ ಇಂದು ರಾಜ್ಯ ಸರ್ಕಾರದ ಸಚಿವರ ಮತ್ತು ಸಂಸದರ ಮನೆಯ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಕೋವಿಡ್ ನಿಯಮ ಮೀರದಂತೆ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿ, ನಾನು ರೈತರ ಪರ ಇದ್ದೇನೆ, ನಾನೂ ಒಬ್ಬ ರೈತನ ಮಗನಾಗಿದ್ದು, ರೈತರ ಕಷ್ಟಗಳು ನನಗೆ ಗೊತ್ತಿದೆ, ಈ ಕೂಡಲೆ ತಮ್ಮ ಮನವಿಯನ್ನು ಸರ್ಕಾರಗಳ ಗಮನಕ್ಕೆ ತರುತ್ತೇನೆ. ಎಲ್ಲರೂ ಒಗ್ಗೂಡಿ ಚರ್ಚಿಸಿ, ಕಾಯ್ದೆಗಳಲ್ಲಿ ರೈತ ವಿರೋಧಿಯ ನಡೆಗಳಿದ್ದರೆ ತೆಗೆದು ಹಾಕುವಂತೆ ಹಾಗೂ ಕಾಯ್ದೆಗಳನ್ನು ರೈತರ ಪರ ರೂಪಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಸಬ್ಇನ್ಸ್ ಪೆಕ್ಟರ್ ವರ್ಗಕ್ಕೆ ಮನವಿ
ಇದೇ ಸಂದರ್ಭದಲ್ಲಿ ರೈತ ಮುಖಂಡರು, ಗೌಡಗೆರೆ ಗ್ರಾಮದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಇದಕ್ಕೆ ಸಂಬAಧಿಸಿದAತೆ ತಾಲ್ಲೂಕು ಮತ್ತು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದ್ದೇವೆ, ಯಾವುದೇ ಇಲಾಖೆಯ ಅಧಿಕಾರಿಗಳೂ ಸಹ ಇತ್ತ ಕಡೆ ಗಮನಹರಿಸಿಲ್ಲ. ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸದಾನಂದ ಅವರು ಕಡು ಭ್ರಷ್ಟರಾಗಿದ್ದಾರೆ. ಗಣಿಗಾರಿಕೆಯ ಪರ ನಿಂತಿದ್ದಾರೆ, ಜೂಜಾಟ ಆಡುವವರನ್ನು ಕರೆ ತಂದು ಕೇಸು ದಾಖಲಿಸದೆ ಲಂಚ ಪಡೆದು ಕಳುಹಿಸುತ್ತಾರೆ. ಇಂತಹವರನ್ನು ಬೇರೆ ಕಡೆ ವರ್ಗಾಯಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.
ಸಚಿವ ಸಿ.ಪಿ ಯೋಗೇಶ್ವರ್ ಇದರ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು