Tel: 7676775624 | Mail: info@yellowandred.in

Language: EN KAN

    Follow us :


ಅರಳಾಳುಸಂದ್ರ ಗ್ರಾಮದ ಜಮೀನುಗಳಿಗೆ ಕಾಡಾನೆಗಳ ದಾಳಿ. ಲಕ್ಷಾಂತರ ರೂಪಾಯಿ ಲುಕ್ಸಾನು. ಅರಣ್ಯಾಧಿಕಾರಿ ಭೇಟಿ

Posted date: 07 Jun, 2021

Powered by:     Yellow and Red

ಅರಳಾಳುಸಂದ್ರ ಗ್ರಾಮದ ಜಮೀನುಗಳಿಗೆ ಕಾಡಾನೆಗಳ ದಾಳಿ. ಲಕ್ಷಾಂತರ ರೂಪಾಯಿ ಲುಕ್ಸಾನು. ಅರಣ್ಯಾಧಿಕಾರಿ ಭೇಟಿ

ತಾಲ್ಲೂಕಿನಾದ್ಯಂತ ಇತ್ತೀಚೆಗೆ ಕಾಡಾನೆಗಳು ಫಸಲು ಬೆಳೆದಿರುವ ಭೂಮಿಗೆ ಲಗ್ಗೆ ಇಡುತ್ತಿದ್ದು, ಫಸಲನ್ನು ತಿಂದಿದ್ದಲ್ಲದೆ, ತುಳಿದು ಹಾಳು ಮಾಡುತ್ತಿವೆ. ಕೃಷಿ ಪರಿಕರಗಳನ್ನು ದ್ವೇಷಿ ಎಂಬ ಭಾವನೆಯಿಂದ ಮುರಿದು, ತುಳಿದು ಹೊಸಕಿ ಹಾಕುತ್ತಿವೆ. ಸಾಲಸೋಲ ಮಾಡಿ, ಜೀವಭಯದಲ್ಲೂ ರಾತ್ರಿ ಸಮಯದಲ್ಲಿ ನೀರು ಹಾಯಿಸಿ ದೇಹ ದಂಡಿಸಿ ಫಸಲು ಬೆಳೆದ ರೈತ ಮಾತ್ರ, ಜನಪ್ರತಿನಿಧಿಗಳನ್ನು, ಅಧಿಕಾರಿಗಳನ್ನು ಶಪಿಸುತ್ತಾ, ತಲೆಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ಪರಿಸ್ಥಿತಿಗೆ ತಲುಪಿದ್ದಾರೆ.


ತಾಲ್ಲೂಕಿನ ತೆಂಗಿನಕಲ್ಲು ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ಹೊಸದೊಡ್ಡಿ, ನಂಜಾಪುರ, ಅರಳಾಳುಸಂದ್ರ, ಮೆಣಸಿಗನಹಳ್ಳಿ, ವಿಠಲೇನಹಳ್ಳಿ, ಬಿ ವಿ ಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಜಮೀನುಗಳಿಗೆ ನುಗ್ಗುವ ಆನೆಗಳು, ತಮ್ಮ ಮನಸೋ ಇಚ್ಚೆ ಮುರಿದು ತಿನ್ನುವುದಲ್ಲದೆ, ತುಳಿದು ನಾಶಪಡಿಸಿವೆ. ನಿನ್ನೆ ತಡರಾತ್ರಿ ಅರಳಾಳುಸಂದ್ರ ಗ್ರಾಮದ ವ್ಯಾಪ್ತಿಯಲ್ಲಿನ ಜಮೀನಿಗಳಿಗೆ ನುಗ್ಗಿರುವ ಆರು ಆನೆಗಳು, ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ರವರು ತನ್ನ ಇಳಿ ವಯಸ್ಸಿನಲ್ಲೂ ಮೂರು ಎಕರೆಯಲ್ಲಿ ಕಷ್ಟಪಟ್ಟು ಬೆಳೆದ ಸೀಬೆ, ಮಾವು, ತೆಂಗು, ಶುಂಠಿ, ರಾಗಿ ಮತ್ತು ಸೀಮೆ ಹುಲ್ಲನ್ನು ತಿಂದು ತೇಗಿವೆ. ನೀರಿಗಾಗಿ ಜೋಡಿಸಿದ ಹನಿ ನೀರಾವರಿ ಪೈಪುಗಳನ್ನು ಕಿತ್ತೆಸೆದಿವೆ.


ಇದೇ ಗ್ರಾಮದ ನಾಗರಾಜು, ಗಿರೀಶ್, ಹುಚ್ಚಪ್ಪ, ಅಪ್ಪಾಜಿ, ಸದಾಶಿವ ಸೇರಿದಂತೆ ಅನೇಕರ ಜಮೀನುಗಳಲ್ಲಿ ಬೆಳೆದಿದ್ದ, ವಿವಿಧ ಬೆಳೆಗಳನ್ನು ತಿಂದು, ತುಳಿದು ಹಾಕಿವೆ. ನೀರಿನ ಪೈಪುಗಳು ಸೇರಿದಂತೆ ಕೃಷಿ ಪರಿಕರಗಳನ್ನು ಸೊಂಡಿಲ ಮೂಲಕ ಕಿತ್ತೆಸೆದಿರುವುದಲ್ಲದೆ, ತುಳಿದು ನಾಶ ಪಡಿಸಿವೆ. ನಿನ್ನೆ ಜಿಲ್ಲಾ ಉಪ ಅರಣ್ಯ ಅಧಿಕಾರಿ ಮಧು ಭೇಟಿ ನೀಡಿ, ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದರೂ ಸಹ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದಿರುವುದರಿಂದ ತಡರಾತ್ರಿಯೂ ಸಹ ಆನೆಗಳು ದಿನಂಪ್ರತಿ ಲಗ್ಗೆ ಇಡುತ್ತಿವೆ.


ತಾಲ್ಲೂಕು ಮತ್ತು ಜಿಲ್ಲಾ ಅರಣ್ಯಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ, ಧರಣಿ ಮಾಡಿದ್ದೇವೆ. ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಿದ್ದೇವೆ. ಆ ಸಮಯದಲ್ಲಿ ಭರವಸೆ ನೀಡಿ ಸಾಗಹಾಕುತ್ತಾರೆ. ಪಟಾಕಿ ಸಿಡಿಸಿ ಒಂದಷ್ಟು ದೂರ ಅಟ್ಟುತ್ತಾರೆಯೇ ವಿನಹ ಶಾಶ್ವತವಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅರಣ್ಯದ ಸುತ್ತಲೂ ಕಂದಕ ತೋಡುತ್ತಿಲ್ಲ. ಸೋಲಾರ್ ತಂತಿ ಬೇಲಿ ಅಳವಡಿಸುತ್ತಿಲ್ಲ. ಶಾಶ್ವತವಾಗಿ ಬೃಹದಾರಣ್ಯಗಳಿಗೆ ಆನೆಗಳನ್ನು ಓಡಿಸುತ್ತಿಲ್ಲ. ಇದು ಹೀಗೆ ಮುಂದುವರೆದರೆ ಅರಣ್ಯ ಇಲಾಖೆ ಮತ್ತು ತಾಲ್ಲೂಕು, ಜಿಲ್ಲಾಡಳಿತ ಕಛೇರಿಗಳ ಮುಂದೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ ಪುಟ್ಟಸ್ವಾಮಿ ಎಚ್ಚರಿಕೆ ನೀಡಿದ್ದಾರೆ.


ವಲಯ ಅರಣ್ಯಾಧಿಕಾರಿ ದಿನೇಶ್ ರವರನ್ನು ಪತ್ರಿಕೆಯ ವರದಿಗಾರರು ಈ ಬಗ್ಗೆ ಪ್ರಶ್ನಿಸಿದಾಗ, ಈಗಾಗಲೇ ಕಂದಕಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಸೋಲಾರ್ ತಂತಿಬೇಲಿಯನ್ಗು ಇದೇ ತಿಂಗಳ 15 ನೇ ತಾರೀಖಿನಿಂದ ಅಳವಡಿಸಲಾಗುತ್ತದೆ. ಶಾಶ್ವತವಾಗಿ ಆನೆಗಳನ್ನು ಬೃಹದಾರಣ್ಯಕ್ಕೆ ಓಡಿಸಲು ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತೇನೆ. ನಾಶವಾಗಿರುವ, ಫಸಲು ಮತ್ತು ಕೃಷಿ ಪರಿಕರಗಳಿಗೆ ಪರಿಹಾರ ನೀಡುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑