Tel: 7676775624 | Mail: info@yellowandred.in

Language: EN KAN

    Follow us :


ಮೀನುಗಾರಿಕೆ ಇಲಾಖೆ ಅಧಿಕಾರಿ ನಕಲಿ ಸಹಿ ಪ್ರಕರಣ; ಹಳ್ಳ ಹಿಡಿದ ತನಿಖೆ

Posted date: 16 Jun, 2021

Powered by:     Yellow and Red

ಮೀನುಗಾರಿಕೆ ಇಲಾಖೆ ಅಧಿಕಾರಿ ನಕಲಿ ಸಹಿ ಪ್ರಕರಣ; ಹಳ್ಳ ಹಿಡಿದ ತನಿಖೆ

ಚನ್ನಪಟ್ಟಣ: ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ನಕಲಿ ಸಹಿ ಪ್ರಕರಣದ ತನಿಖೆ ಹಳ್ಳ ಹಿಡಿದಿದ್ದು, ಹಣಕ್ಕಾಗಿ ನಕಲಿ ಸಹಿ ಮಾಡಿದ ವ್ಯಕ್ತಿಗಳು ಖುಷಿಯಿಂದಿದ್ದರೇ, ದೂರು ಕೊಟ್ಟವರು ತಪ್ಪಿತಸ್ಥರಂತಾಗಿದೆ.


ಹೌದು, ಕೋಡಂಬಳ್ಳಿ ಗ್ರಾ.ಪಂ. ವತಿಯಿಂದ ನರೇಗಾ ಯೋಜನೆಯಡಿ ಮೀನುಕೊಳ ನಿರ್ಮಿಸಲು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಿಂದ ಫಲಾನುಭವಿ ದೃಢೀಕರಣ ಅಥವಾ ಶಿಫಾರಸ್ಸು ಪತ್ರ ನೀಡಬೇಕು. ಆದರೆ, ಇಲಾಖೆ ಮೊಹರಿನೊಂದಿಗೆ ಶಿಫಾರಸು ಅಥವಾ ದೃಢೀಕರಣ ಪತ್ರವನ್ನು ಇಲಾಖೆಯಲ್ಲಿ ಕಂಪ್ಯೂಟರ್ ಅಪರೇಟರ್ ನೀಡುತ್ತಿದ್ದು, ಈ ದೃಢೀಕರಣ ಪತ್ರಕ್ಕೆ ಫಲಾನುಭವಿ ಕಡೆಯ ಚಾಲಾಕಿ ವ್ಯಕ್ತಿ ನಕಲಿ ಸಹಿಗಳನ್ನು ಮಾಡಿ ಕೋಡಂಬಳ್ಳಿ ಗ್ರಾ.ಪಂ.ಗೆ ಸಲ್ಲಿಕೆ ಮಾಡಿದ್ದಾನೆ. ಇದನ್ನು ಪತ್ತೆ ಹಚ್ಚಿದ ಸಾಮಾಜಿಕ ಕಾರ್ಯಕರ್ತ ಸಚಿನ್ ಕುಮಾರ್ ಎಂಬುವರು ಇದನ್ನು ಮೀನುಗಾರಿಕೆ ಇಲಾಖೆ ಅಧಿಕಾರಿ ಮಹಂತೇಶ್ ಅವರ ಗಮನಕ್ಕೆ ತಂದಿದ್ದರು, 


ಕೋಡಂಬಳ್ಳಿ ಗ್ರಾಮದ ಬಿ. ಸಿದ್ದಯ್ಯ ಮತ್ತು ಸ್ವಾಮಿ ಕೆ.ಎಸ್ ಎಂಬುವರು ನೀಡಿರುವ ಶಿಫಾರಸು ಪತ್ರದಲ್ಲಿ ಒಬ್ಬನೇ ಅಧಿಕಾರಿಯ ಸಹಿ ಬೇರೆ ಬೇರೆಯಾಗಿವೆ. ಮೀನುಕೊಳ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ.ಗಳನ್ನು ಯೋಜನೆಯಡಿ ನೀಡಲಾಗುತ್ತದೆ. ಈ ಹಣ ಲಪಟಾಯಿಸಲು ನಕಲಿ ಸಹಿ ಮಾಡಿರುವುದು ಈ ಇಬ್ಬರು ಫಲಾನುಭವಿಗಳ ದೃಢೀಕರಣ ಪತ್ರದಲ್ಲಿ ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಇಬ್ಬರು ಅರ್ಜಿದಾರರು ಕೋಡಂಬಳ್ಳಿ ಪಂಚಾಯಿತಿಗೆ ನೀಡಿರುವ ಎರಡು ಪತ್ರಗಳಲ್ಲಿ ಸಹಿ ಒಂದಕ್ಕೊಂದು ಸಾಮ್ಯತೆ ಇರುವುದಿಲ್ಲ. ಇನ್ನು ಇದು ನನ್ನ ಸಹಿಯೇ ಅಥವಾ ಇಲ್ಲವೇ ಎನ್ನುವುದನ್ನು ಮೀನುಗಾರಿಕೆ ಇಲಾಖೆ ಅಧಿಕಾರಿ ಮಹಂತೇಶ್ ಹೇಳದೆ ನುಣಚಿಕೊಳ್ಳುತ್ತಾ, ಪ್ರಕರಣವನ್ನು ಬಯಲಿಗೆ ತಂದ ವ್ಯಕ್ತಿಯನ್ನು ರಾಜಿ ಪಂಚಾಯಿತಿಗೆ ಕರೆಯುತ್ತಿರುವುದು ಅನುಮಾನ ಮೂಡಿಸುತ್ತಿದೆ ಎಂದು ಆರೋಪಿಸಿದ್ದರು.


ಈ ವಿಷಯ ಮಾಧ್ಯಮಗಳಲ್ಲಿ ಬೆಳಕು ಕಾಣುತ್ತಿದ್ದಂತೆ ಜಿ.ಪಂ. ಸಿಇಒ ಇಕ್ರಂ ಅವರ ಸೂಚನೆ ಮೇರೆಗೆ ಜಿ.ಪಂ. ಸಹಾಯಕ ಕಾರ್ಯದರ್ಶಿ ರಾಮಕೃಷ್ಣಪ್ಪ ಕೋಡಂಬಳ್ಳಿ ಗ್ರಾ.ಪಂ.ಗೆ ಬಂದು ಈ ಬಗ್ಗೆ ಪರಿಶೀಲನೆ ನಡೆಸಿದ್ದರು. ಈ ವೇಳೆ ಆರೋಪಿತರೆನ್ನಲಾದ ಸಿದ್ದಯ್ಯ ಮತ್ತು ಸ್ವಾಮಿ ಸಹಾಯಕ ಕಾರ್ಯದರ್ಶಿಗಳಿಗೆ ಹೇಳಿಕೆ ಪತ್ರ ಬರೆದುಕೊಟ್ಟಿದ್ದರು. ಜೊತೆಗೆ ದೂರುದಾರ ಸಚಿನ್ ಕುಮಾರ್ ನಿಂದಲೂ ಹೇಳಿಕೆ ಪಡೆದುಕೊಂಡಿದ್ದ ರಾಮಕೃಷ್ಣಪ್ಪ ಇದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದರು.


ತದನಂತರ ಕೋಡಂಬಳ್ಳಿ ಗ್ರಾ.ಪಂ.ನಲ್ಲಿ ನಡೆದ ಸಭೆಯಲ್ಲಿ ಜಿ.ಪಂ. ಸಿಇಓ ಇಕ್ರಂ ಅವರಿಗೆ ಪಂಚಾಯಿತಿ ಸದಸ್ಯರು ಸೇರಿ ಇತರರು ಈ ಬಗ್ಗೆ ದೂರು ನೀಡಿದ್ದರು. ಅಲ್ಲದೇ ಸ್ವತಃ ತಪ್ಪಿತಸ್ಥರೇ ಜಿ.ಪಂ. ಸಹಾಯಕ ಕಾರ್ಯದರ್ಶಿಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದರೂ ಸಹ ಇದುವರೆಗೂ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಅಲ್ಲದೇ, ಬೇರೆಯವರು ಇಂತಹ ಕೃತ್ಯ ಮಾಡಲು ಇದು ಉತ್ತೇಜನ ನೀಡಿದಂತಾಗುತ್ತದೆ ಎನ್ನುತ್ತಾರೆ ದೂರುದಾರ ಸಚಿನ್ ಕುಮಾರ್.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑