Tel: 7676775624 | Mail: info@yellowandred.in

Language: EN KAN

    Follow us :


ಅರಣ್ಯ ಇಲಾಖೆಯ ಪಕ್ಕದ ಜಮೀನಿಗೆ ನುಗ್ಗಿದ ಒಂಟಿ ಸಲಗ. ಲಕ್ಷಾಂತರ ರೂ ಬೆಳೆ ನಾಶ. ಪ್ರಾಣಕ್ಕೆ ಎರವಾದರೆ ಇಲಾಖೆಯೇ ಹೊಣೆ ರುದ್ರಪ್ಪ

Posted date: 21 Jun, 2021

Powered by:     Yellow and Red

ಅರಣ್ಯ ಇಲಾಖೆಯ ಪಕ್ಕದ ಜಮೀನಿಗೆ ನುಗ್ಗಿದ ಒಂಟಿ ಸಲಗ. ಲಕ್ಷಾಂತರ ರೂ ಬೆಳೆ ನಾಶ. ಪ್ರಾಣಕ್ಕೆ ಎರವಾದರೆ ಇಲಾಖೆಯೇ ಹೊಣೆ ರುದ್ರಪ್ಪ

ತಾಲ್ಲೂಕಿನಾದ್ಯಂತ ಆನೆಗಳ ಉಪಟಳ ಹೆಚ್ಚಾಗುತ್ತಲೆ ಇದೆ. ಶಾಶ್ವತವಾಗಿ ಆನೆಗಳನ್ನು ಅಟ್ಟದ ಕಾರಣ ಹಾಗೂ ಅರಣ್ಯದಂಚಿನಲ್ಲಿ ಸೂಕ್ತ ಭದ್ರತೆ ಇಲ್ಲದ ಕಾರಣ ಹೋದ ಪುಟ್ಟಾ, ಬಂದಾ ಪುಟ್ಟ ಎಂಬಂತಾಗಿದೆ. ಭಾನುವಾರ ತಡರಾತ್ರಿ ಸಹ ಒಂಟಿ ಸಲಗವೊಂದು ತಾಲ್ಲೂಕಿನ ಕೆಂಗಲ್ ಗ್ರಾಮದ ಬಳಿ ಇರುವ ನಿವೃತ್ತ ಅಧಿಕಾರಿಗಳಾದ ರುದ್ರಪ್ಪ ನವರ ತೋಟಕ್ಕೆ ನುಗ್ಗಿದ ಒಂಟಿ‌ ಸಲಗವೊಂದು ಲಕ್ಷಾಂತರ ರೂಪಾಯಿಳ ಬೆಳೆಯನ್ನು ನಾಶ ಪಡಿಸಿದೆ.


ಈ ತಿಂಗಳಲ್ಲೇ ಹಲವಾರು ಬಾರಿ ಒಂಟಿ ಸಲಗವೊಂದು ನುಗ್ಗಿ ಬಾಳೆ, ಹಲಸು, ಕಾಫಿ, ಮೆಣಸು, ಅಡಿಕೆ ಮತ್ತು ತೆಂಗಿನ ಸಸಿ ಸೇರಿದಂತೆ ಎಲ್ಲಾ ಬೆಳೆಗಳನ್ನು ತಿಂದು ತೇಗಿದ್ದಲ್ಲದೆ, ತುಳಿದು ನಾಶಪಡಿಸಿದೆ. ನೀರಿಗಾಗಿ ಇರುವ ಪೈಪುಗಳನ್ನು ಒಡೆದು ಹಾಕಿದೆ. ಕೈಗೆ ಬಂದ ತುತ್ತು ಬಾಯಿಗಿಲ್ಲಾ ಎಂಬಂತೆ ಬೆಳೆಗಳ ನಷ್ಟದ ಜೊತೆಗೆ ಕೃಷಿ ಪರಿಕರಗಳು ಹಾಳಾಗಿವೆ ಎಂದು ಅವರು ದೂರಿದ್ದಾರೆ.


ಅರಣ್ಯ ಇಲಾಖೆಗೆ ಹಲವಾರು ಬಾರಿ ಲಿಖಿತ ಮನವಿ ಮಾಡಿದ್ದೇನೆ. ನನ್ನ ಜಮೀನಿನ ಸುತ್ತಲೂ ಟ್ರಂಚ್ ತೆಗೆಸಿದ್ದೆ. ಇದನ್ನೂ ಸಹ ಅವರೇ ಮುಚ್ಚಿಸಿದ್ದಾರೆ. ತದನಂತರವೇ ಆನೆಗಳ ಉಪಟಳ ಹೆಚ್ಚಾಗಿದೆ. ಆನೆ ಬಂದಾಗ ಕರೆ ಮಾಡಿದರೆ ಯಾರೂ ಬರುವುದಿಲ್ಲ. ರಸ್ತೆ ಬದಿಯಲ್ಲಿ ನಾಲ್ಕು ಪಟಾಕಿ ಸಿಡಿಸಿ, ಅದನ್ನೇ ಮೇಲಾಧಿಕಾರಿಗಳಿಗೆ ತಲುಪಿಸಿ ಕೈತೊಳೆದುಕೊಳ್ಳುತ್ತಾರೆ. ಶಾಶ್ವತವಾಗಿ ಆನೆಗಳನ್ನು ಓಡಿಸುವ ಮತ್ತು ಸೂಕ್ತ ಭದ್ರತೆ ನೀಡುವ ಕೆಲಸವಾಗಬೇಕಿದೆ‌. ಪರಿಹಾರವಂತು ದಾಖಲೆಗಳಲ್ಲೇ ಉಳಿದಿದೆ. ಮುಂದಿನ ದಿನಗಳಲ್ಲಿ ನನ್ನ ಪ್ರಾಣಕ್ಕೆ ತೊಂದರೆಯಾದರೆ ಇಲಾಖಾಧಿಕಾರಿಗಳೇ ಹೊಣೆ ಎಂದು ಅವರು ದೂರಿದ್ದಾರೆ.


ಮೊದಲು ದಾಳಿ ಇಡುತ್ತಿದ್ದ ಒಂಟಿ ಸಲಗವನ್ನು ತೆಂಗಿನಕಲ್ಲು ಅರಣ್ಯಕ್ಕೆ ಓಡಿಸಲಾಗಿದೆ. ಇತ್ತೀಚೆಗೆ ತನ್ನ ಮರಿಯೊಂದಿಗೆ ತಾಯಿ ಆನೆಯೊಂದು ಬರುತ್ತಿದೆ. ಇಂದೇ ಅದನ್ನು ಪತ್ತೆಹಚ್ಚಿ ಓಡಿಸಲಾಗುವುದು. ಅರಣ್ಯದ ಸುತ್ತಲೂ ಟ್ರಂಚ್ ತೆಗೆಸಲು ಈಗಾಗಲೇ ಮುಂದಾಗಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ದಿನೇಶ್ ರವರು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑