ಕೋಡಂಬಳ್ಳಿ ಗ್ರಾಮದಲ್ಲಿ ನಾಯಿಗಳಿಗೆ ಬಲಿಯಾದ ಕುರಿಗಳ ಹಿಂಡು. ಕುರಿಗಾಯಿಯ ಅಳಲು, ಗ್ರಾಮ ಪಂಚಾಯತಿ ಅಧಿಕಾರಗಳ ಮೇಲೆ ಗ್ರಾಮಸ್ಥರು ಗರಂ
ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಬಸವರಾಜು ಎಂಬುವವರು, ತೋಟದಲ್ಲಿ ಮೇಯಲು ಬಿಟ್ಟಿದ್ದ ಕುರಿಗಳ ಮೇಲೆ, ಏಕಾಏಕಿ ಹದಿನೆಂಟು ನಾಯಿಗಳ ಹಿಂಡು ಎರಗಿ ದಾಳಿ ನಡೆಸಿವೆ. ಹತ್ತು ಕುರಿಗಳ ಮೇಲೆ ದಾಳಿ ಮಾಡಿರುವ ನಾಯಿಗಳಿಂದ ಮೂರು ಕುರಿಗಳು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟಿದ್ದು, ಏಳು ಕುರಿಗಳು ತೀವ್ರವಾಗಿ ಗಾಯಗೊಂಡಿವೆ.
ಈ ಭಾಗದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಗ್ರಾಮ ಪಂಚಾಯತಿ ನೇರ ಹೊಣೆಯಾಗಿದೆ. ಕೋಡಂಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿರುವ ಕೋಳಿ ಅಂಗಡಿಗಳ ಮಾಲೀಕರು ವೈಜ್ಞಾನಿಕವಾಗಿ ಕೋಳಿ ಗಲೀಜನ್ನು ವಿಲೇವಾರಿ ಮಾಡುತ್ತಿಲ್ಲ. ಗ್ರಾಮ ಪಂಚಾಯತಿಯವರು ಅಂಗಡಿಯ ಗಲೀಜನ್ನು ತೆಗೆದುಕೊಂಡು ವಿಲೇವಾರಿ ಮಾಡುತ್ತಿಲ್ಲ. ಕೋಳಿ ಅಂಗಡಿಯವರು ಕೆರೆಯ ಏರಿಗಳು, ರಸ್ತೆಯ ಇಕ್ಕೆಲಗಳಲ್ಲಿ ಮತ್ತು ಚರಂಡಿಗಳಲ್ಲಿ ಸುರಿದು ಹೋಗುತ್ತಿರುವುದರಿಂದ, ಅದರ ರುಚಿಯನ್ನು ನೋಡಿದ ನಾಯಿಗಳು ಪ್ರಾಣಿಗಳ ಮೇಲೆ ಎರಗುತ್ತಿವೆ. ಮುಂದಿನ ದಿನಗಳಲ್ಲಿ ಮಕ್ಕಳ ಮೇಲೆ ದಾಳಿ ಮಾಡುವ ಸಂಭವವಿದ್ದು, ನಾಯಿಗಳ ಸಂತಾನಹರಣ ಅಥವಾ ಕೊಲ್ಲಲು ಅವಕಾಶವಿದ್ದರೆ ಕೊಲ್ಲುವ ಮೂಲಕ ಜನಜಾನುವಾರುಗಳನ್ನು ರಕ್ಷಿಸಬೇಕೆಂದು ಮುಖಂಡ ಕೆ ಎಸ್ ನಾಗರಾಜು ಆಗ್ರಹಿಸಿದ್ದಾರೆ.
ಕುರಿಗಳ ಮಾಲೀಕ ಬಸವರಾಜು ಮಾತನಾಡಿ, ನಾವು ಜೀವನ ನಡೆಸುತ್ತಿರುವುದೇ ಕುರಿಗಳ ಸಾಕಾಣಿಕೆಯಿಂದ, ಹತ್ತು ಕುರಿಗಳಲ್ಲಿ ಮೂರು ಕುರಿಗಳು ಮೃತಪಟ್ಟು, ಏಳು ಕುರಿಗಳು ಪ್ರಾಣಾಪಾಯದಲ್ಲಿವೆ. ನಾಯಿಗಳಿಂದ ಕುರಿಗಳನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಸೇರಿದಂತೆ ಅನೇಕ ಅಧಿಕಾರಿಗಳು, ಮುಖಂಡರುಗಳಿಗೆ ಮನವಿ ಮಾಡಿದರು ಪ್ರಯೋಜನ ಆಗಿಲ್ಲ. ನಮಗೆ ಸರ್ಕಾರದಿಂದ ಪರಿಹಾರ ಕೊಡಬೇಕು, ನಾಯಿಗಳ ದಾಳಿ ತಪ್ಪಿಸಬೇಕೆಂದು ಅಳಲು ತೋಡಿಕೊಂಡಿದ್ದಾರೆ.
ಕೋಳಿ ತ್ಯಾಜ್ಯದಿಂದಲೇ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕೋಳಿ ಅಂಗಡಿಗಳ ಮಾಲೀಕರಿಗೆ ನೋಟೀಸ್ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇತ್ತೀಚೆಗೆ ಜಮೀನು ಮಂಜೂರಾಗಿದ್ದು, ಅಲ್ಲಿ ವಿಲೇವಾರಿ ಮಾಡಲಾಗುವುದು. ಗ್ರಾಮ ಪಂಚಾಯತಿ ಸದಸ್ಯರ ಜೊತೆ ಚರ್ಚಿಸಿ, ಅನುದಾನ ವರ್ಗ 1 ರಲ್ಲಿ ಪರಿಹಾರ ನೀಡಲು ಪ್ರಯತ್ನಿಸುತ್ತೇವೆ.
ಭಾಗ್ಯಲಕ್ಷ್ಮಿ. ಪಿಡಿಓ. ಕೋಡಂಬಳ್ಳಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು