ರಾಮನಗರ ಮಾವು ಸಂಸ್ಕರಣಾ ಘಟಕ, ಹೈಟೆಕ್ ರೇಷ್ಮೆ ಮಾರುಕಟ್ಟೆ ಯೋಜನೆಗೆ ಡಿಸೆಂಬರ್ನಲ್ಲಿ ಕಾರ್ಯಾದೇಶ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್ನಲ್ಲಿ ಸಮಗ್ರ ಯೋಜನಾ ವರದಿ (DPR) ಅಂತಿಮಗೊಳಿಸಿ ಡಿಸೆಂಬರ್ನಲ್ಲಿ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಈ ಎರಡೂ ಯೋಜನೆಗಳಿಗೆ ಸಂಬಂಧಿಸಿದಂತೆ ರೇಷ್ಮೆ ಖಾತೆ ಸಚಿವ ಆರ್.ಶಂಕರ್, ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಗಡಿ ಶಾಸಕ ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ನಂತರ ಮಾಧ್ಯಮಗಳ ಜತೆ ಡಿಸಿಎಂ ಮಾತನಾಡಿದರು.
ರಾಮನಗರ ಜಿಲ್ಲೆಗೆ ಇವೆರಡೂ ಯೋಜನೆಗಳು ಬಹಳ ಉಪಯುಕ್ತವಾಗುತ್ತವೆ. ರೈತರಿಗೆ ಒಳ್ಳೆಯದಾಗಲಿದೆ ಎಂದ ಅವರು, ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಮುಗಿಸಲಾಗುವುದು ಎಂದರು.
*ಮಾವು ಸಂಸ್ಕರಣಾ ಘಟಕ:*
ಬೈರಾಪಟ್ಟಣದಲ್ಲಿ ಗುರುತಿಸಲಾಗಿರುವ ಒಟ್ಟು 40 ಎಕರೆ ಪ್ರದೇಶವಿದ್ದು, ಮೊದಲ ಹಂತದಲ್ಲಿ 15 ಎಕರೆಯ 4 ಎಕರೆ ಪ್ರದೇಶದಲ್ಲಿ ಸಾಮಾನ್ಯ ಸೌಲಭ್ಯಗಳನ್ನು ಕಲ್ಪಿಸಿ ಉಳಿದ ಜಾಗದಲ್ಲಿ ಆಹಾರ ಸಂಸ್ಕರಣಾ ಕ್ಲಸ್ಟರ್ ಮಾಡಲಾಗುವುದು. ಇದರಲ್ಲಿಯೇ ಮಾವು ಸಂಸ್ಕರಣಾ ಘಟಕ ಕೂಡ ಬರುತ್ತದೆ. ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಐದು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ರಫ್ತಾರ್ ಯೋಜನೆ ಅಡಿಯಲ್ಲಿ 10 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೇಂದ್ರವನ್ನು ಕೋರಲಾಗಿದೆ. ಈಗಾಗಲೇ ಯೋಜನೆಗೆ ಪ್ರಾಥಮಿಕ ಒಪ್ಪಿಗೆ ಪಡೆಯಲಾಗಿದೆ. ಅಂತಿಮ ಒಪ್ಪಿಗೆಯ ಪ್ರಕ್ರಿಯೆಗಳಷ್ಟೇ ಬಾಕಿ. ಈ ಯೋಜನೆಗೆ ಖಾಸಗಿ ಕ್ಷೇತ್ರದಿಂದ 500 ಕೋಟಿ ರೂ. ಹೂಡಿಕೆ ಅಗತ್ಯವಿದ್ದು, ಹೂಡಿಕೆ ಮಾಡಿದವರಿಗೆ ಶೇ.40 ರಷ್ಟು ಸಬ್ಸಿಡಿ ದೊರೆಯುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
*20 ಎಕರೆಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ:*
ಚನ್ನಪಟ್ಟಣ ಸಮೀಪದ ರೇಷ್ಮೆ ತರಬೇತಿ ಕೇಂದ್ರದಲ್ಲಿರುವ 20 ಎಕರೆ ಜಾಗದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ. ನಬಾರ್ಡ್ನಿಂದ 75 ಕೋಟಿ ರೂ. ಆರ್ಥಿಕ ನೆರವು ಸಿಗುತ್ತಿದೆ. ಮುಂಗಡ ಪತ್ರದಲ್ಲಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಇವತ್ತಿನ ಸಭೆಯಲ್ಲಿ ನಾಲ್ವರು ಆರ್ಕಿಟೆಕ್ಟ್ಗಳು ಯೋಜನೆಯ ಪ್ರಾತ್ಯಕ್ಷಿಕೆ ನೀಡಿದ್ದಾರೆ ಎಂದು ಡಿಸಿಎಂ ಹೇಳಿದರು.
ಈ ಸಭೆಯಲ್ಲಿ ಶಾಸಕ ಸಾ.ರಾ.ಮಹೇಶ್, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮೂಲಸೌಕರ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಡಿಸಿಎಂ ಅವರ ಕಾರ್ಯದರ್ಶಿ ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ರಾಕೇಶ್ಕುಮಾರ, ಸಿಇಓ ಇಕ್ರಂ ಮುಂತಾದವರು ಭಾಗಿಯಾಗಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು