Tel: 7676775624 | Mail: info@yellowandred.in

Language: EN KAN

    Follow us :


ಕಾಡಾನೆ ದಾಳಿ, ವ್ಯಕ್ತಿ ಸಾವು. ರೊಚ್ಚಿಗೆದ್ದ ಗ್ರಾಮಸ್ಥರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

Posted date: 29 Jul, 2021

Powered by:     Yellow and Red

ಕಾಡಾನೆ ದಾಳಿ, ವ್ಯಕ್ತಿ ಸಾವು. ರೊಚ್ಚಿಗೆದ್ದ ಗ್ರಾಮಸ್ಥರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಚನ್ನಪಟ್ಟಣ: ಬೆಳೆಹಾನಿಗಷ್ಟೇ ಸೀಮಿತವಾಗಿದ್ದ ಆನೆಗಳು ಈಗ ಮನುಷ್ಯನ ಪ್ರಾಣ ತೆಗೆಯುವ ಹಂತಕ್ಕೆ ಹೋಗಿದ್ದು,  ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಅನೆಯೊಂದು ದಾಳಿ ನಡೆಸಿ, ಸಾಯಿಸಿರುವ ಘಟನೆ ತಾಲೂಕಿನ ಗಡಿಭಾಗವಾದ ದೊಡ್ಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸತೀಶ್(35) ಮೃತ ದುರ್ಧೈವಿ. ಈತ ಗ್ರಾಮದ ಹೊರವಲಯದಲ್ಲಿರುವ ತನ್ನ ಮಾವಿನತೋಟದಲ್ಲಿ ಬೇಲಿ ಕತ್ತರಿಸುವ ಕೆಲಸದಲ್ಲಿ ಮಗ್ನನಾಗಿದ್ದ ವೇಳೆ ಹಠಾತ್ತನೇ ದಾಳಿ ನಡೆಸಿದ ಆನೆಯೊಂದು ತನ್ನ ಸೊಂಡಿಲಿನಿಂದ ಹೊಡೆದು ಸಾಯಿಸಿದೆ.


ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇತರೆ ರೈತರು ಚೀರಾಟದ ನಂತರ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ಒಟ್ಟು ನಾಲ್ಕು ಆನೆಗಳು ಬಂದಿದ್ದು, ಅದರಲ್ಲಿ ಒಂದು ಪುಂಡಾನೆ ದಾಳಿ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತ ಸತೀಶ್ ಕೃಷಿ ಚಟುವಟಿಕೆ ಮಾಡಿಕೊಂಡು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು.


*ಅಧಿಕಾರಿಗಳ ದೌಡು:*

ಈ ವೇಳೆ ಆಕ್ರೋಶಗೊಂಡ ಮೃತನ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಮೃತನ ಸಾವಿಗೆ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯೇ ಹೊಣೆ. ಈ ಭಾಗದಲ್ಲಿ ನಿತಂತರವಾಗಿ ಅನೆಗಳು ಉಪಟಳ ನೀಡುತ್ತಿವೆ. ಈ ಬಗ್ಗೆ ಅರಿವಿದ್ದರೂ ಅಗತ್ಯಕ್ರಮ ಕೈಗೊಳ್ಳಲು ವಿಫಲವಾಗಿರುವುದೇ ಈ ಘಟನೆಗೆ ಕಾರಣ. ಮೃತ ರೈತನ ಸಾವಿಗೆ ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯೇ ಹೊಣೆ ಹೊರಬೇಕು ಎಂದು ಆಕ್ರೋಶವ್ಯಕ್ತಪಡಿಸಿದರು.


ತಾಲ್ಲೂಕಿನ ರೈತಸಂಘದ ಮುಖಂಡರು ತಮ್ಮ ಆಕ್ರೋಶವನ್ನು ಅಧಿಕಾರಿಗಳ ಮೇಲೆ‌ ತೂರಿದರು. ನೀವು ಕೊಡುವ ಪರಿಹಾರ ನಮಗೆ ಬೇಡ. ಸರ್ಕಾರ ಕೊಡುವ ದುಪ್ಪಟ್ಟು ಪರಿಹಾರ ನಾವುಗಳು ಸೇರಿ ಕೊಡುತ್ತೇವೆ. ಅಧಿಕಾರಿಗಳು ಮತ್ತು ಮಂತ್ರಿಗಳು ಬಂದು ಸಾಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಅವರದೇ ರೀತಿಯಲ್ಲಿ ಎಲ್ಲಾ ಬಂದೋಬಸ್ತ್ ಮಾಡಿಕೊಂಡಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಆದರೂ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಸೇರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


ತೆಂಗಿನಕಲ್ಲು ಅರಣ್ಯಪ್ರದೇಶದಲ್ಲಿ ಹತ್ತಾರು ಅನೆಗಳು ಬೀಡುಬಿಟ್ಟಿವೆ. ರಾತ್ರಿ ಸಮಯದಲ್ಲಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆಯಿಟ್ಟು ರೈತರ ಬೆಳೆನಾಶಪಡಿಸುತ್ತಿವೆ. ಅರಣ್ಯ ಇಲಾಖೆಯವರು ಅನೆಗಳನ್ನು ಓಡಿಸುವ ಕಾರ್ಯಾಚರಣೆಯನ್ನು ನೆಪಮಾತ್ರಕ್ಕೆ ನಡೆಸುತ್ತಾರೆ. ಇಂದು ನಡೆದಿರುವ ರ್ದುಘಟನೆಗೆ ಇಲಾಖೆಯೇ ನೇರಹೊಣೆ ಹೊರಬೇಕು. ಸ್ಥಳಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಗಮಿಸಬೇಕು. ಮೃತನ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಬೇಕು ಎಂದು ನೆರೆದಿದ್ದ ಜನರು ಆಗ್ರಹಿಸಿದರು.


ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಲ್ಲೇ ಅರಣ್ಯ ಇಲಾಖೆ ಸೇರಿದಂತೆ ಇತರೆ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದರು. ತಹಸೀಲ್ದಾರ್ ಎಲ್.ನಾಗೇಶ್, ಡಿಎಫ್‍ಒ ದೇವರಾಜು, ಆರ್‍ಎಫ್‍ಓ ದಿನೇಶ್, ಗ್ರಾಮಾಂತರ ಪಿಎಸ್‍ಐ ಎಚ್.ಎಂ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ಮೃತನ ಕುಟುಂಬಸ್ಥರು ಮೃತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಅಧಿಕಾರಿಗಳನ್ನು ಆಗ್ರಹಿಸಿದರು.


ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಮಾತುಕತೆ ನಡೆಸಿ, ಇಲಾಖೆಯಿಂದ ಸಿಗಬಹುದಾದ ಸಂಪೂರ್ಣ ನೆರವು ನೀಡುವಂತೆ ಸೂಚಿಸಿದರು. ಅದರಂತೆ ಮೃತನ ಕುಟುಂಬಕ್ಕೆ 7.5 ಲಕ್ಷ ಪರಿಹಾರಧನ ಹಾಗೂ 5 ವರ್ಷಗಳ ಕಾಲ ಪ್ರತಿತಿಂಗಳು 2 ಸಾವಿರ ಮಾಶಾಸನವನ್ನು ಘೋಷಿಸಲಾಯಿತು. ಶೀಘ್ರವಾಗಿ 2 ಲಕ್ಷ ಬಿಡುಗಡೆಗೊಳಿಸಲು ಸಹ ತೀರ್ಮಾನ ತೆಗೆದುಕೊಂಡ ನಂತರ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು.


*ಪ್ರಾಣಕ್ಕೂ ಕುತ್ತು ತಂದ ಗಜರಾಯ:*

ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಹಲವಾರು ವರ್ಷಗಳಿಂದ ಅನೆದಾಳಿಯ ಸಮಸ್ಯೆ ಪ್ರಮುಖವಾಗಿ ಕಾಡುತ್ತಿದೆ. ಅದರಲ್ಲೂ ತೆಂಗಿನಕಲ್ಲು ಹಾಗೂ ಕಬ್ಬಾಳು ವಲಯದ ಅರಣ್ಯ ಪ್ರದೇಶದಲ್ಲಿ ಅನೆದಾಳಿ ದಿನನಿತ್ಯದ ಸಮಸ್ಯೆಯಾಗಿ ಹೋಗಿದೆ. ಇಷ್ಟು ದಿನ ಬೆಳೆನಾಶಕ್ಕೆ ಸಿಮೀತವಾಗಿದ್ದ ಈ ದಾಳಿ ಮಾನವನ ಪ್ರಾಣಹಾನಿಗೂ ವಿಸ್ತರಿಸಿದೆ. ಕೆಲವರ್ಷಗಳ ಹಿಂದೆ ತಾಲೂಕಿನ ಹನಿಯೂರು-ರಾಮೇಗೌಡನದೊಡ್ಡಿ ಬಳಿ ದಾರಿಹೋಕರೊಬ್ಬರನ್ನು ಅನೆಯೊಂದು ತುಳಿದು ಸಾಯಿಸಿತ್ತು. ಕಳೆದ ವರ್ಷ ಕನ್ನಿದೊಡ್ಡಿ ಗ್ರಾಮದ ಬಳಿ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆದಿತ್ತು. ಇದೀಗ ದೊಡ್ಡನಹಳ್ಳಿ ಗ್ರಾಮದಲ್ಲಿ ರೈತನೊಬ್ಬನನ್ನು ಬಲಿಪಡೆದುಕೊಂಡಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑