ಆನೆ ದಾಳಿಗೆ ನೀಡುವ ಬೆಳೆ ಪರಿಹಾರ ಪರಿಷ್ಕರಣೆಯಾಗಬೇಕು: ಹೆಚ್.ಡಿ.ಕುಮಾರಸ್ವಾಮಿ
ರಾಮನಗರ ಜಿಲ್ಲಾ ಪ್ರದಾನ ಬೆಳೆಗಳಾದ ತೆಂಗು, ರಾಗಿ, ಭತ್ತ ಬೆಳೆಗಳು ಆನೆ ದಾಳಿಯಿಂದ ನಾಶವಾದಾಗ, ರಾಗಿ-1,200 ರೂ, ಭತ್ತ-1,320 ರೂ, ತೆಂಗು(10 ವರ್ಷ ಮೇಲ್ಪಟ್ಟ ಮರಗಳಿಗೆ) 2,000 ರೂ, 5 ವರ್ಷದ ವರೆಗೆ 400 ರೂ, 5 ರಿಂದ 10 ವರ್ಷದವರೆಗೆ 800 ರೂ. ನಿಗದಿಯಾಗಿದ್ದು, ದರವನ್ನು ಪರಿಷ್ಕರಿಸುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಗಟ್ಟುವ ಕುರಿತು ಸಭೆ ನಡೆಸಿ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಆನೆ ದಾಳಿಯಿಂದ 12 ಜನ ಮೃತಪಟ್ಟಿರುತ್ತಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮಾನವ ಆನೆ ಸಂಘರ್ಷವಿರುವ 299 ಕಿ.ಮೀ ಇದ್ದು, ಈಗಾಗಲೇ 110 ಕಿ.ಮೀ ಬ್ಯಾರಿಯರ್ ನಿರ್ಮಾಣವಾಗಿದ್ದು, 179 ಕಿ.ಮೀ ಗಡಿಯಲ್ಲಿ ಬ್ಯಾರಿಯರ್ ನಿರ್ಮಾಣವಾಗಬೇಕಿದೆ. ಇದಕ್ಕೆ 81 ಕೋಟಿ ಹಣ ಅವಶ್ಯಕವಿದೆ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಹಾರೋಹಳ್ಳಿ, ಬಿಡದಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಸಭೆ ಕರೆದು ಸಿ.ಎಸ್.ಆರ್ ಯೋಜನೆಯಡಿ 3 ರಿಂದ 4 ಕೋಟಿ ಹಣ ಸಂಗ್ರಹಿಸಿ ಇದರಿಂದ ರೈತರ ಜಮೀನಿನಲ್ಲಿ ಬೆಳೆ ನಾಶ ಹಾಗೂ ಆನೆ- ಮಾನವ ಸಂಘರ್ಷ ತಡೆಯಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಮನಗರ ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿ ದೇವರಾಜು ಅವರು ಮಾತನಾಡಿ ರಾಮನಗರ ಜಿಲ್ಲೆಯಲ್ಲಿ ರಾಮನಗರ ಪ್ರಾದೇಶಿಕ ವಿಭಾಗ-21 ಕಿ.ಮೀ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ -171 ಕಿ.ಮೀ ಹಾಗೂ ಕಾವೇರಿ ವನ್ಯಜೀವಿ ಧಾಮ-107 ಕಿ.ಮೀ ಒಟ್ಟು -299 ಕಿ.ಮೀ.ನ್ನು ಆನೆ ಸಂಘರ್ಷವಿರುವ ಅರಣ್ಯ ಗಡಿ ಎಂದು ಗುರುತಿಸಲಾಗಿದೆ. ಕಳೆದ 3 ವರ್ಷಗಳಲ್ಲಿ ರಾಮನಗರ ಜಿಲ್ಲೆಯಲ್ಲಿರುವ 3 ವಿಭಾಗದಲ್ಲಿ 2018-19 ನೇ ಸಾಲಿನಲ್ಲಿ 3,479 ರೈತರಿಗೆ ರೂ.198.09 ಲಕ್ಷ ರೂ, 2019-20 ಸಾಲಿನಲ್ಲಿ 3,347 ರೈತರಿಗೆ 169.14 ಲಕ್ಷ ರೂ. ಹಾಗೂ 2020-21 ಸಾಲಿನಲ್ಲಿ 4,396. ರೈತರಿಗೆ 273.14 ಲಕ್ಷ ರೂ ಒಟ್ಟು 11,222 ರೈತರಿಗೆ 640.37 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದರು.
ಮಾನವ-ಆನೆ ಸಂಘರ್ಷ ತಡೆಗಟ್ಟಲು ಗಡಿಯಲ್ಲಿ ಬ್ಯಾರಿಯರ್ ನಿರ್ಮಾಣದಲ್ಲಿ ಸಂಗಮ ವನ್ಯಜೀವಿ ವಲಯದ ಚಿಕ್ಕಮುದುಡೆ ಗ್ರಾಮದ ಸರ್ವೆ ನಂ 26 ರಲ್ಲಿ ಒಟ್ಟು 33.00 ಎಕರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದು, ಸ್ಥಳೀಯ ಗ್ರಾಮಸ್ಥರ ತಕರಾರಿದೆ. ಸಂಗಮ ವನ್ಯಜೀವಿ ವಲಯದ ದಂತೂರು ಗ್ರಾಮದ ಸರ್ವೆ ನಂ 15 ರಲ್ಲಿ ಪೋಡಿಯಾಗಿರುವ ಜಮೀನಿನ ಬಗ್ಗೆ ತಕಾರಾರಿರುತ್ತಾದೆ. ಕೋಡಿಹಳ್ಳಿ ವನ್ಯಜೀವಿ ವಲಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಟಾನವಾಗಿರುವ ಅರಣ್ಯ ಗ್ರಾಮಗಳಲ್ಲಿ ಗೊಂದಲಗಳಿವೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಶಾಸಕ ಮಂಜುನಾಥ್,ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕ ವಿಜಯ್ ಕುಮಾರ್ ಗೋಗಿ, ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಅಪರಜಿಲ್ಲಾಧಿಕಾರಿ ಜವರೇಗೌಡ ಟಿ. ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್, ಬೆಂಗಳೂರು ವಿಭಾಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟೇಶ್, ಡಿ.ಸಿ.ಎಫ್ ರಮೇಶ್ ಕುಮಾರ್, ಹಾಗೂ ಗಿರೀಶ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು