ಬಿಳಿ ರಾಗಿ ಬೆಳೆದು ಆದಾಯ ದ್ವಿಗುಣಗೊಳಿಸಿಕೊಂಡ ಮಂಡ್ಯದ ಮಾಯಣ್ಣನಕೊಪ್ಪಲಿನ ರೈತ ಆನಂದ್
ರಾಗಿ ಎಲ್ಲರಿಗೂ ಗೊತ್ತು. ಕನಕದಾಸರು ಹಾಡಿಹೊಗಳಿದ, ಮಾಜಿ ಪ್ರಧಾನಿ ದೇವೇಗೌಡರು ವಿಶ್ವಕ್ಕೆ ಪರಿಚಯಿಸಿದ ರಾಗಿ ಯಾರಿಗೆ ಗೊತ್ತಿಲ್ಲ. ರಾಗಿ ಉಂಡು ರೋಗದಿಂದ ಪಾರಾದವರೇನಕರಿದ್ದಾರೆ. ಹಳ್ಳಿಹೈದರೆಲ್ಲರಿಗೂ ಅಚ್ಚುಮೆಚ್ಚಿನ ಗುಂಡು ಈ ರಾಗಿಮುದ್ದೆ. ರಾಗಿಯಲ್ಲಿ ಕಪ್ಪು ಮತ್ತು ಕೆಂಪು ಬಣ್ಣದ ರಾಗಿಯ ಬಗ್ಗೆ ಮಾತ್ರ ಗೊತ್ತಿದ್ದ ಜನರಿಗೆ ಕೃಷಿ ತಜ್ಞರಾದ ಡ ರವಿಶಂಕರ್ ರವರು ಶೋಧಿಸಿದ ಬಿಳಿರಾಗಿಯನ್ನು ಕೃಷಿ ಇಲಾಖೆಯವರು ಪರಿಚಯಿಸಿದರು. ಬೇಕರಿಗಳಲ್ಲಿ ಹೆಚ್ಚು ಉಪಯೋಗಿಸುವ ಈ ರಾಗಿಯನ್ನು ಬೆಳೆದವರು ಮಾತ್ರ ಕಡಿಮೆ ರೈತರು. ಮಂಡ್ಯ ಜಿಲ್ಲೆ ಮತ್ತು ತಾಲ್ಲೂಕಿನ ಮಾಯಣ್ಣನಕೊಪ್ಪಲು ಗ್ರಾಮದ ರೈತ ಆನಂದ್ ರವರು ತಮ್ಮ ಜಮೀನಿನಲ್ಲಿ ಬಿಳಿರಾಗಿಯನ್ನು ಬೆಳೆದು ಸೈ ಎನಿಸಿಕೊಂಡಿದ್ದಲ್ಲದೆ, ಆದಾಯವನ್ನು ದುಪ್ಪಟ್ಟು ಮಾಡಿಕೊಂಡಿದ್ದಾರೆ.
ಮೊದಲ ಬಾರಿಗೆ ಆನಂದ್ ರವರು ತಮ್ಮ ಜಮೀನಿನಲ್ಲಿ ಬಿಳಿರಾಗಿ ಬೆಳೆದು ಒಳ್ಳೆಯ ಇಳುವರಿ ಪಡೆದಿದ್ದಾರೆ. ಕ್ವಿಂಟಾಲ್ಗೆ ಐದು ಸಾವಿರ ಬೆಲೆ ಸಿಗುತ್ತಿರುವುದರಿಂದ ಸಂತಸಗೊಂಡಿರುವ ಅವರು "ಬಿಳಿರಾಗಿಯ ಬೇಸಾಯ-ಆದಾಯ ಎರಡೂ ಚೆನ್ನಾಗಿದೆ. ಇನ್ನೂ ಆರೈಕೆ ಮಾಡಿದರೆ ಇನ್ನೂ ಹೆಚ್ಚಿನ ಲಾಭ ಸಿಗುತ್ತದೆ" ಎಂದು ಅವರು ಸ್ಪಷ್ಟವಾಗಿ ಹೇಳುತ್ತಾರೆ.
ಕೆಎಂಆರ್-340 ತಳಿಯ ಬಿಳಿರಾಗಿಯ ಮಹತ್ವದ ಕುರಿತು ಅವರು ಹೇಳಿದ ಮೇಲಿನ ಹೊಗಳಿಕೆಯ ಮಾತು ಮೂರು ವರ್ಷಗಳ ಹಿಂದೆ ದೇಶದ ರೈತರಿಗಾಗಿ ಬಿಳಿರಾಗಿ ಸಂಶೋಧಿಸಿ ಕೊಟ್ಟ ನಮ್ಮ ಹೆಮ್ಮೆಯ ಕನ್ನಡಿಗರಾದ ಕೃಷಿ ವಿಜ್ಞಾನಿ ಡಾ. ಸಿ ಆರ್ ರವಿಶಂಕರ್ ಅವರಿಗೆ ಸಲ್ಲುವ ಬಹುದೊಡ್ಡ ಗೌರವ. ಅವರಿಂದ ರೈತರಿಗೆ ಇನ್ನೂ ಅನೇಕ ಸಂಶೋಧನೆಗಳು ನಡೆಯಲೆಂದು ಅವರು ಆಶಿಸಿದ್ದಾರೆ.
ಮನುಷ್ಯನ ಆರೋಗ್ಯಕ್ಕೆ ಮಾರಕವಾದ ಮೈದಾ ಹಿಟ್ಟಿಗೆ ಪರ್ಯಾಯವಾದ ಬಿಳಿರಾಗಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಭವಿಷ್ಯವಿದೆ. ತನ್ನ ರೋಗನಿರೋಧಕ ಶಕ್ತಿ ಮತ್ತು ಅತಿ ಹೆಚ್ಚು ಪೋಷಕಾಂಶಗಳನ್ನು ಹೊಂದಿರುವ ಕಾರಣಕ್ಕಾಗಿ ಗ್ರಾಹಕರನ್ನು ಸೆಳೆಯುತ್ತಿದೆ. ಬುದ್ಧಿವಂತ ರೈತರು ಬಿಳಿರಾಗಿಯ ಕಡೆ ಗಮನಹರಿಸಿ. ಬಿಳಿರಾಗಿ ಬೇಸಾಯದಿಂದ ಆದಾಯ ಖಂಡಿತ ಹೆಚ್ಚಾಗುತ್ತದೆ ಎಂದು ಅವರು ಉಳಿದ ರೈತರಿಗೆ ಕಿವಿಮಾತು ಹೇಳಿದ್ದಾರೆ.
ಒಬ್ಬ ಮುಂದಾಲೋಚನೆಯ ಮಾದರಿ ಕೃಷಿಕರಾದ ಆನಂದ್ ರವರು ಹತ್ತಿರದಲ್ಲಿರುವ ವಿಸಿ ಫಾರ್ಮ್ ಕೃಷಿ ಸಂಶೋಧನಾ ಕೇಂದ್ರದ ಜತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದಾರೆ. ಹಲವು ವರ್ಷಗಳಿಂದ ತಮ್ಮ ಜಮೀನಿನಲ್ಲಿ ಹತ್ತಾರು ಪ್ರಯೋಗಗಳನ್ನು ಮಾಡಿ ಯಶಸ್ವಿಯಾಗಿದ್ದಾರೆ. ಕಬ್ಬು, ಬಿಳಿರಾಗಿಯ ಜತೆಗೆ ಐತಿಹಾಸಿಕ ರಾಜಮುಡಿ ಭತ್ತವನ್ನು ಈ ಭಾಗದಲ್ಲಿ ಅತ್ಯಧಿಕ ಇಳುವರಿಯೊಂದಿಗೆ ಬೆಳೆದು ಅಕ್ಕಪಕ್ಕದ ರೈತರಿಗೂ ಬಿತ್ತನೆ ಬೀಜಗಳನ್ನು ನೀಡುತ್ತಾ ಕೃಷಿ ಸಂಸ್ಕೃತಿಯ ಸಂರಕ್ಷಣೆ ಮಾಡುತ್ತಿದ್ದಾರೆ.
ಐಟಿಐ ಓದಿಕೊಂಡ ಮಗನನ್ನು ಬೆಂಗಳೂರಿಗೆ ಕೆಲಸಕ್ಕೆ ಕಳಿಸದೆ ವ್ಯವಸಾಯದಲ್ಲಿ ತೊಡಗುವಂತೆ ಅವರು ಅಂದು ಪ್ರೇರಿಪಿಸಿದುದರ ಪರಿಣಾಮ ಇಂದು ಈ ಭಾಗದಲ್ಲಿ ಕೃಷಿ ವಿಜ್ಞಾನಿಗಳೊಂದಿಗೆ, ಪ್ರಗತಿಪರ ಕೃಷಿಕರೊಂದಿಗೆ ಒಡನಾಟ ಇಟ್ಟುಕೊಂಡು ಅವರ ಜ್ಞಾನ, ಸಂಶೋಧನೆಗಳನ್ನು ತಮ್ಮ ಹೊಲಗದ್ದೆಗಳಲ್ಲಿ ಸಾಕಾರಗೊಳಿಸುವ ವಿದ್ಯಾವಂತ ಯುವ ರೈತರ ಸಂಖ್ಯೆ ಹೆಚ್ಚಾಗುತ್ತಿರುವುದು ದೇಶದ ಆಹಾರ ಭದ್ರತೆಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಎಂಬುದು
AgriStartUp ಕಟ್ಟುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಭು ರವರ ಮಾತಾಗಿದೆ.
-ಗೋ ರಾ ಶ್ರೀನಿವಾಸ...
ಮೊ:984585613
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು