ತಾಲ್ಲೂಕಿನಲ್ಲಿ ಉತ್ತಮ ಮಳೆ, ರಸಗೊಬ್ಬರಕ್ಕಾಗಿ ರೈತರ ದಂಡು, ಕೃಷಿ ಇಲಾಖೆಯಲ್ಲಿ ಲೋಪ
ತಾಲೂಕಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ರಸಗೊಬ್ಬರದ ಅವಶ್ಯಕತೆ ಇದೆ. ಆದರೆ ರಸಗೊಬ್ಬರದ ಅಭಾವ ಉಂಟಾಗಿದ್ದು, ಪಟ್ಟಣದ ಸಾತನೂರು ರಸ್ತೆಯಲ್ಲಿರುವ ಹಾಪ್ಕಾಮ್ಸ್ ಗೋಡೌನ್ ನಲ್ಲಿ ಸಾವಿರಕ್ಕೂ ಹೆಚ್ಚು ರೈತರು ರಸಗೊಬ್ಬರಕ್ಕಾಗಿ ಸಾಲುಗಟ್ಟಿ ಮುಂಜಾನೆಯಿಂದಲೇ ನಿಂತು ಕೊಟ್ಟ ಒಂದೆರಡು ಚೀಲ ರಸಗೊಬ್ಬರ ತೆಗೆದುಕೊಂಡು ಹೋಗುತ್ತಿರುವುದು ಕಂಡುಬರುತ್ತಿದೆ.
ಆದರೆ ಹಾಪ್ಕಾಮ್ಸ್ಗೆ ಬಂದಿದ್ದು ಮಾತ್ರ 400 ಚೀಲ ರಸಗೊಬ್ಬರ. ಈ ನಿಟ್ಟಿನಲ್ಲಿ ರೈತರು ನೂಗುನುಗ್ಗಲಲ್ಲಿ ನಾಮುಂದು ತಾಮುಂದು ಎಂದು ಗೊಬ್ಬರಕ್ಕಾಗಿ ಪರದಾಡಿದರು.
ತಾಲೂಕಿನಲ್ಲಿ ಕೃಷಿ ಚಟುವಟಿಕೆ ಚುರುಕಾಗಿದ್ದು, ಭಾನುವಾರ ತಾಲೂಕಿನಾದ್ಯಂತ ಜೋರು ಮಳೆಯಾದ ಕಾರಣ ರೈತರು ರಸಗೊಬ್ಬರಕ್ಕಾಗಿ ಹಾಪ್ಕಾಮ್ಸ್ಗೆ ಲಗ್ಗೆ ಇಟ್ಟರು. ಆದರೆ ಮಳೆಯ ಮುನ್ಸೂಚನೆ ಇಲ್ಲದ ಹಾಪ್ಕಾಮ್ಸ್ನಿಂದ ಕೇವಲ 400 ಚೀಲ ರಸಗೊಬ್ಬರ ಸಂಗ್ರಹ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಏಕಕಾಲಕ್ಕೆ ಸಾವಿರಾರು ರೈತರು ರಸಗೊಬ್ಬರಕ್ಕಾಗಿ ಸಾಲುಗಟ್ಟಿ ನಿಂತರು.
ಭಾನುವಾರ ಮಳೆ ಜೋರಾಗಿ ಬಂದ ಕಾರಣ ಸೋಮವಾರ ಮುಂಜಾನೆ ರಸಗೊಬ್ಬರಕ್ಕಾಗಿ ರೈತರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಸಾವಿರಕ್ಕೂ ಹೆಚ್ಚು ರೈತರು ರಸಗೊಬ್ಬರಕ್ಕೆ ನೂಕುನುಗ್ಗಲಾಗಿ ನಿಂತರು. ಈ ವೇಳೆ ನೂರಾರು ಬೈಕ್ಗಳು ಪಾರ್ಕಿಂಗ್ ಆಗಿದ್ದವು.
*ಕೃಷಿ ಇಲಾಖೆ ವಿರುದ್ಧ ಆಕ್ರೋಶ:*
ತಾಲೂಕಿನಲ್ಲಿ ಕೃಷಿ ಚಟುವಟಿಕೆ ಆರಂಭವಾಗಿದ್ದು, ಕೃಷಿ ಇಲಾಖೆಯು ರಸಗೊಬ್ಬರ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ. ತಾಲೂಕಿನ ಪಿಎಸಿಎಸ್ಗಳಲ್ಲಿ ರಸಗೊಬ್ಬರ ಪೂರೈಕೆ ಮಾಡಿದ್ದರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಗೊಬ್ಬರಕ್ಕಾಗಿ ರೈತರು ಪಟ್ಟಣಕ್ಕೆ ಬರುವ ಅಗತ್ಯ ಇರಲಿಲ್ಲ. ಆದರೆ ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ನೀಡಿಲ್ಲ ಎಂದು ರಸಗೊಬ್ಬರ ಸಿಗದ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಕೃಷಿ ಚಟುವಟಿಕೆ ಚುರುಕಾದ ವೇಳೆ ರಸಗೊಬ್ಬರ ಪೂರೈಕೆ ಮಾಡಿದರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ. ಆದರೆ ಈ ಬಗ್ಗೆ ಕೃಷಿ ಅಧಿಕಾರಿಗಳು ಮುಂಜಾಗ್ರತೆ ವಹಿಸುವುದಿಲ್ಲ. ಇದನ್ನು ಸದುಪಯೋಗ ಮಾಡಿಕೊಳ್ಳುವ ಖಾಸಗಿ ಅಂಗಡಿಯ ಮಾಲೀಕರು ರಸಗೊಬ್ಬರವನ್ನು ಸ್ಟಾಕ್ ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ಇದರಿಂದ ರೈತರಿಗೂ ಹೆಚ್ಚಿನ ನಷ್ಟ ಉಂಟಾಗುತ್ತದೆ ಎಂದು ರೈತರು ಆರೋಪ ಮಾಡಿದರು.
*ಒತ್ತಡ ಹಾಕುತ್ತಾರೆ:*
ಖಾಸಗಿ ಅಂಗಡಿಗಳಲ್ಲಿ ರಸಗೊಬ್ಬರ ಖರೀದಿ ಮಾಡಲು ಮುಂದಾದರೆ ಅವರು ಕಾಂಪ್ಲೆಕ್ಸ್ ಖರೀದಿ ಮಾಡಲು ಒತ್ತಡ ಹಾಕುತ್ತಾರೆ. ಹೆಚ್ಚು ಲಾಭದಾಯಕವಾಗಿರುವ ಕಾಂಪ್ಲೆಕ್ಸ್ ಕೊಂಡರೆ ಮಾತ್ರ 2 ಚೀಲ ರಸಗೊಬ್ಬರ ನೀಡುತ್ತಾರೆ. ಆದರೆ ರೈತರು ಕಾಂಪ್ಲೆಕ್ಸ್ ಖರೀದಿ ಮಾಡದ ಕಾರಣ ಅವರಿಗೆ 1 ಚೀಲ ಮಾತ್ರ ನೀಡುತ್ತಾರೆ. ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಪೂರೈಕೆ ಮಾಡಲು ಕೃಷಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ರೈತರು ಕಿಡಿಕಾರಿದರು.
*ಕಾದು ಬರಿಗೈಲಿ ಹೋದರು:*
ಪಟ್ಟಣದ ಸಾತನೂರು ಸರ್ಕಲ್ ಬಳಿಯ ಹಾಪ್ಕಾಮ್ಸ್ ಬಳಿ ರಸಗೊಬ್ಬರಕ್ಕೆ ಕಾದು ಕುಳಿತಿದ್ದ ರೈತರಲ್ಲಿ ನೂರಾರು ರೈತರಿಗೆ ರಸಗೊಬ್ಬರ ಸಿಗದೆ ಗಂಟೆಗಟ್ಟಲೆ ಕಾದು ಬರಿಗೈಯಲ್ಲಿ ತೆರಳಿದರು.
ಇದೀಗ ಮಳೆಯಾಗುತ್ತಿರುವ ಕಾರಣ ರೈತರಿಗೆ ಹೆಚ್ಚಿನ ರಸಗೊಬ್ಬರ ಅಗತ್ಯವಿದ್ದು, ಈ ಕೂಡಲೆ ಅಧಿಕಾರಿಗಳು ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಂಡು ತಾಲೂಕಿನ ಪಿಎಸಿಎಸ್ಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು