ರಸ್ತೆ ಜಮೀನಿನ ನಡುವೆ ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ಅನ್ನದಾತರು, ಪ್ರಯಾಣಿಕರು
ಚನ್ನಪಟ್ಟಣ : ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದಿಂದ ಗೊವಿಂದೇಗೌಡನದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚಾನೆಲ್ ರಸ್ತೆಯನ್ನು
ಇತ್ತೀಚೆಗೆ ಹೊಸದಾಗಿ ನಿರ್ಮಿಸಿದ ಸಿಮೆಂಟ್ ಕಾಂಕ್ರೀಟ್ ರಸ್ತೆಯ ಪಕ್ಕದಲ್ಲಿ ಇನ್ನೇನು ಬೀಳಲು ಅಣಿಯಾದ ವಿದ್ಯುತ್ ಕಂಬಗಳು ಕಾಣಸಿಗುತ್ತವೆ.
ಇದಕ್ಕೆ ಕಾರಣ ಇತ್ತೀಚೆಗೆ ಕಣ್ವ ಜಲಾಶಯದ ನೀರು ಹರಿಸಲು ಪ್ರಾರಂಭ ಮಾಡಿದ ಹಿನ್ನೆಲೆಯಲ್ಲಿ ಸದರಿ ರಸ್ತೆಯ ಪಕ್ಕದಲ್ಲಿಯೇ ಇರುವ ಕಾಲುವೆಯನ್ನು ಜೆ.ಸಿ.ಬಿ ಯಂತ್ರಗಳಿಂದ ದುರಸ್ಥಿ ಮಾಡಲಾಗಿದ್ದು ಸದರಿ ಕಾಲುವೆ ಯ ಒಳಗಡೆಯೇ ನೆಡಲಾಗಿರುವ ವಿದ್ಯುತ್ ಪೂರೈಕೆ ಕಂಬಗಳು
ಮಣ್ಣಿನ ಸವೆತದಿಂದ ಅಲ್ಲಿನ ರೈತರ ಕೃಷಿ ಭೂಮಿಯ ಕಡೆ ವಾಲಿವೆ.
ಇತ್ತೀಚೆಗೆ ಬೀಳುತ್ತಿರುವ ಸತತವಾದ ಮಳೆಯ ಪರಿಣಾಮವಾಗಿ ಮಣ್ಣಿನ ತೇವಾಂಶ ಹೆಚ್ಚಾಗಿ ಏನಾದರೂ ವಿದ್ಯುತ್ ಪೂರೈಕೆ ಕಂಬಗಳು ನೆಲಕ್ಕೆ ಉರುಳಿದರೆ ಬೆಳಗಿನ ಜಾವ ಜಮೀನಿನಲ್ಲಿ ಬೆಳೆ ವೀಕ್ಷಣೆಯನ್ನು ಮಾಡಲು ಬರುವ ಅನ್ನದಾತರ ಸಾವು ಕಟ್ಡಿಟ್ಟ ಬುತ್ತಿ ಎನ್ನುತ್ತಾರೆ
ಅಲ್ಲಿಯೇ ವಾಯು ವಿಹಾರಕ್ಕೆ
ನಿತ್ಯ ಬರುವ ಹೆಸರೇಳಲಿಚ್ಚಿಸದ
ನಗರದ ಕೆಲವರು.
ಸಂಬಂಧಿಸಿದ ಬೆಸ್ಕಾಂ ಅಧಿಕಾರಿ ವರ್ಗದವರು ಸ್ಥಳ ಪರಿಶೀನೆ ಮಾಡಿ ಈ ಕೂಡಲೇ ವಿದ್ಯುತ್ ಪೂರೈಕೆ ಕಂಬ ಇರುವ ಕಡೆ ಪವರ್ ಸ್ಥಗಿತ ಗೊಳಿಸಿ ಕಂಬಗಳ ತಳಮಟ್ಟದಲ್ಲಿ ಸಿಮೆಂಟ್ ಕಾಂಕ್ರೀಟ್ ಹಾಕುವುದರ ಮೂಲಕ ಅಥವಾ ಬದಲಿ ಜಾಗದಲ್ಲಿ ನೆಟ್ಟು ಮುಂದಾಗುವ ಅವಘಡಗಳನ್ನ
ತಪ್ಪಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು