ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ
ಮಾವು ಸಂಸ್ಕರಣಾ ಘಟಕಕ್ಕೆ 15 ಎಕರೆ ಭೂಮಿಯನ್ನು ಸರ್ಕಾರ ನೀಡಿದೆ. ಸದ್ಯ ಐದು ಎಕರೆಯಲ್ಲಿ ಶೀಘ್ರವಾಗಿ ಕಾರ್ಯಾರಂಭ ಮಾಡುತ್ತೇವೆ. ಘಟಕದಲ್ಲಿ ಉನ್ನತ ದರ್ಜೆಯ ಉಪಕರಣಗಳನ್ನು ಜೋಡಿಸಿ, ರಫ್ತು ಮಾಡಲು ಅಣಿಗೊಳಿಸಲಾಗುತ್ತದೆ. ಈ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಅಶ್ವಥ್ ನಾರಾಯಣ ರವರು ಶೀಘ್ರವಾಗಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಕೆ ವಿ ನಾಗರಾಜು ತಿಳಿಸಿದರು.
ಅವರು ಶುಕ್ರವಾರ ತಾಲ್ಲೂಕಿನ ಭೈರಾಪಟ್ಟಣ ಗ್ರಾಮದ ಸಸ್ಯಕ್ಷೇತ್ರದ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ವತಿಯಿಂದ ಹಣಕಾಸು ನೀಡಿದ್ದಾರೆ. ಈಗಾಗಲೇ ಈ ಸ್ಥಳಕ್ಕೆ ಇಂಜಿನಿಯರ್ ಗಳು, ಆರ್ಕಿಟೆಕ್ಚರ್ ಗಳು ಬಂದು ವೀಕ್ಷಿಸಿ, ನೀಲಿ ನಕ್ಷೆಯನ್ನು ತಯಾರು ಮಾಡಿದ್ದಾರೆ. ಶೋಭಾ ಕರಂದ್ಲಾಜೆ ರವರು ಸಹ ಇದರ ಹಿಂದೆ ಮಾರ್ಗದರ್ಶನ ನೀಡುವುದರ ಜೊತೆಗೆ ಉನ್ನತ ಮಟ್ಟದಲ್ಲಿ, ಯಾವುದೇ ಲೋಪದೋಷಗಳಾಗದಂತೆ ಕಾರ್ಯಾರಂಭ ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದರು. ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಈಗ ಕೆಲಸವನ್ನು ಪ್ರಾರಂಭಿಸುತ್ತೇವೆ. ನಂತರ ಉಪ ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆ ಮತ್ತು ಮಾರುಕಟ್ಟೆಗೆ ಸಂಬಂಧಿಸಿದ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಮಾರುಕಟ್ಟೆಗೆ ಸಂಬಂಧಿಸಿದಂತೆ ಸಂಸ್ಥೆಯ ವತಿಯಿಂದ ವೆಬ್ಸೈಟ್ ರೂಪಿಸಿ, ಗ್ರಾಹಕರು ಬುಕ್ ಮಾಡಿದರೆ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ.
ಬೆಂಗಳೂರು ಸೇರಿದಂತೆ ಹಲವಾರು ಕಡೆ ಇರುವ ಅಪಾರ್ಟ್ಮೆಂಟ್ ಗಳಲ್ಲಿ ಕೊಂಡುಕೊಳ್ಳಲು ಉತ್ಸುಕರಾಗಿದ್ದಾರೆ. ಅವರಿಗೂ ಸಹ ಉತ್ತಮ ತಳಿಯ ಹಣ್ಣುಗಳನ್ನು ಕೊಡುವ ಮೂಲಕ ಮಾರುಕಟ್ಟೆ ವಿಸ್ತರಿಸಿ, ರೈತರಿಗೆ ಅನುಕೂಲ ಕಲ್ಪಿಸಲಾಗುವುದು, ಮಾವಿನಲ್ಲಿ ಇತ್ತೀಚೆಗೆ ವಿವಿಧ ರೀತಿಯ ಉನ್ನತ ಪೋಷಕಾಂಶಗಳಿರುವ ತಳಿಗಳು ಬಂದಿವೆ. ಈ ಹಣ್ಣುಗಳನ್ನು ಗ್ರಾಹಕರಿಗೆ ತಲುಪಿಸುವ ವ್ಯವಸ್ಥೆ ಮಾಡುವುದು ನಮ್ಮ ಸಂಸ್ಥೆಯ ಧ್ಯೇಯವಾಗಿದೆ.
ರೈತರಿಗೆ ಈಗಾಗಲೇ ಸಬ್ಸಿಡಿಯಲ್ಲಿ ಕ್ರೇಟ್ ಮತ್ತು ಮೋಹಕ ಬಲೆಗಳನ್ನು ನೀಡಿದ್ದೇವೆ. ರೈತರಿಗೆ ತರಬೇತಿ ನೀಡಲಾಗುತ್ತಿದೆ. ಇಸ್ರೇಲ್ ಮಾದರಿಯ ಒತ್ತು ಮಾವು ಬೆಳೆಯಲು ಪ್ರೋತ್ಸಾಹ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ.
ಮಣ್ಣಿನ ಆರೋಗ್ಯ ಮತ್ತು ಔಷಧ ಸಿಂಪಡಣೆಯಿಂದ ಆರೋಗ್ಯಯುತ ಹಣ್ಣನ್ನು ಕೊಡುವುದು ಸಂಸ್ಥೆಯ ಉದ್ದೇಶವಾಗಿದೆ. ಇದರಿಂದ ರೈತರಿಗೆ ಹೆಚ್ಚಿನ ಆದಾಯ ಸಿಗುವುದರಲ್ಲಿ ಅನುಮಾನವಿಲ್ಲ ಎಂದು ಅಭಿಪ್ರಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜು, ತೋಟಗಾರಿಕಾ ನಿರ್ದೇಶಕ ಗುಣವಂತ, ತೋಟಗಾರಿಕ ಉಪ ನಿರ್ದೇಶಕ ಮುನೇಗೌಡ, ಸಹಾಯಕ ನಿರ್ದೇಶಕ ವಿವೇಕ್ ಮತ್ತು ಮಾವು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಾಂಪುರ ಧರಣೀಶ್ ಕುಮಾರ್ ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು