ವಿದ್ಯುತ್ ಸ್ಪರ್ಶದಿಂದ ಆನೆ ಸಾವು, ನ್ಯಾಯಾಂಗ ಬಂಧನಕ್ಕೆ ರೈತ
ಚನ್ನಪಟ್ಟಣ.ಸೆ.೧೧: ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಗಿನಕಲ್ಲು ಅರಣ್ಯ ಪ್ರದೇಶದ ಚಿಕ್ಕವಿಠಲೇನಹಳ್ಳಿ ಗ್ರಾಮದ ತೋಟವೊಂದರಲ್ಲಿ ಕಾಡಾನೆಯೊಂದು ನೆನ್ನೆ ಮುಂಜಾನೆ ಸತ್ತು ಬಿದ್ದಿದ್ದು, ಮರಣೋತ್ತರ ಪರೀಕ್ಷೆಯ ನಂತರ ವಿದ್ಯುತ್ ಸ್ಪರ್ಶದಿಂದ ಸತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಇತ್ತೀಚಿಗೆ ಆನೆಗಳು ಮತ್ತು ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ಬೆಳೆಗಳು ಮತ್ತು ಜಾನುವಾರಗಳು ಬಲಿಯಾಗುತ್ತಲೇ ಇವೆ. ಇತ್ತೀಚಿಗೆ ಎಚ್ಚೆತ್ತುಕೊಂಡು ಕೆಲ ರೈತರು, ತಾವು ಬೆಳೆದ ಬೆಳೆಯ ರಕ್ಷಣೆಗೆ ತಂತಿಯನ್ನು ಹಾಕಿಕೊಂಡಿದ್ದು, ಕೆಲ ಸಮಯ ಅದಕ್ಕೆ ವಿದ್ಯುತ್ ಸಂಪರ್ಕ ನೀಡುತ್ತಿದ್ದಾರೆ.
ಇದೇ ರೀತಿ ಚಿಕ್ಕ ವಿಠೇನಹಳ್ಳಿ ಗ್ರಾಮದ ಶಿವರಾಜು ಎಂಬುವವರ 229/1 ಸರ್ವೆ ನಂ.ನ 1 ಎಕೆರೆ ಜಮೀನನನ್ನು ಅದೇ ಗ್ರಾಮದ 42 ವರ್ಷದ ಗುರುಶಾಂತಯ್ಯ ಬಿನ್ ಬಸವಯ್ಯ ಎಂಬುವವರು ಗುತ್ತಿಗೆ ಪಡೆದು, ಟೊಮೋಟಾ ಬೆಳೆ ಹಾಕಿದ್ದರು, ಆನೆಗಳ ಹಾವಳಿಯನ್ನು ತಪ್ಪಿಸಿಕೊಳ್ಳಲು ಇವರು, ತಂತಿ ಬೇಲಿಗೆ ನೇರವಾಗಿ ವಿದ್ಯುತ್ ಕಂಬದಿಂದ ವಿದ್ಯುತ್ ಹರಿಸಿದ್ದರು.
ತೋಟಕ್ಕೆ ಬಂದ ಆನೆಗೆ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಪಶು ವೈದ್ಯರು ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಿ, ಅಲ್ಲಿಯೇ ಸಂಸ್ಕಾರ ಮಾಡಿದ್ದಾರೆ.
ವಿದ್ಯುತ್ ಸ್ಪರ್ಶದಿಂದ ಸತ್ತಿದೆ ಎಂಬುದು ದೃಢವಾದ ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಗುರುಶಾಂತಯ್ಯ ಅವರನ್ನು ಬಂಧಿಸಿ, ಎಫ್ಓಸಿ 13/2021-22 ವನ್ಯಜೀವಿ ಸಂರಕ್ಷಣೆ ಕಾಯ್ದೆ 2.9.39.50 ಮತ್ತು 52/1972 ರ ಕಾಯ್ದೆಯಂತೆ ಪ್ರಕರಣವನ್ನು ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ಒಪ್ಪಿಸಿ ತದನಂತರ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.
ಸ್ಥಳದಲ್ಲಿ ಎಸಿಎಫ್ ದೇವರಾಜು, ಉಪವಲಯ ಅರಣ್ಯಾಧಿಕಾರಿ ದಿನೇಶ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಹೆಚ್.ಎಂ ಶಿವಕುಮಾರ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.
*ರೈತ ಮುಖಂಡ ಸಿ ಪುಟ್ಟಸ್ವಾಮಿ ಆಕ್ರೋಶ*
ಕಾಡಾನೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನಿಜವಾಗಿಯೂ ಆಘಾತ ತಂದಿದೆ. ಆದರೆ ರೈತ ತನ್ನ ಬೆಳೆಯನ್ನು ರಕ್ಷಿಸಲೋಸುಗ ಈ ಕ್ರಮ ಕೈಗೊಂಡಿದ್ದಾನೆ.
ಮುಗ್ಧ ರೈತರು ಪ್ರಾಣಿಗಳನ್ನು ಕೊಲ್ಲುವ ಉದ್ದೇಶ ಇರುವುದಿಲ್ಲ. ಆತ ರಾತ್ರಿ ಸಮಯದಲ್ಲಿ ಜಮೀನಿನ ಫಸಲನ್ನು ಕಾಯಲು ಆಗುವುದಿಲ್ಲ. ಕಾಡು ಪ್ರಾಣಿಗಳನ್ನು ಕೊಲ್ಲುವುದರಿಂದ ಇಂತಹ ಪ್ರಕರಣಗಳು ತಮ್ಮ ಮೇಲೆ ದಾಖಲಾಗುತ್ತದೆ. ಇಷ್ಟು ವರ್ಷ ಶಿಕ್ಷೆ, ಜುಲ್ಮಾನೆ ಆಗುತ್ತದೆ ಎಂದು ಗ್ರಾಮಸಭೆಗಳಲ್ಲಾಗಲಿ, ಹಳ್ಳಿಗಳಲ್ಲಿ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಅಧಿಕಾರಿಗಳು ಇದುವರೆಗೂ ಮಾಡಿಲ್ಲ. ಇದಕ್ಕಿಂತ ಹೆಚ್ಚಾಗಿ ಇಲಾಖೆಯು ಶಾಶ್ವತವಾಗಿ ಆನೆಗಳನ್ನು ಓಡಿಸುವ ಕೆಲಸ ಮಾಡಿದರೆ, ಇಂತಹ ಪ್ರಮೇಯಗಳೇ ಬರುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಕ್ರಮಕೈಗೊಳ್ಳಬೇಕಾಗಿದೆ ಎಂದು ಅಭಿಪ್ರಾಯಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು