ಕೋಳಿಫಾರಂ ಗೆ ಚಿರತೆ ದಾಳಿ ಲಕ್ಷಾಂತರ ರೂ ಲುಕ್ಸಾನು
ರಾಮನಗರ.ಅ.25/21: ರಾಮನಗರ ತಾಲೂಕಿನ ಬಿಡದಿ ಹೋಬಳಿ ಶೆಟ್ಟಿಗೌಡನದೊಡ್ಡಿ ಗ್ರಾಮದ ಬಳಿ ಇರುವ ಕೋಳಿ ಫಾರಂ ನಲ್ಲಿ ಚಿರತೆ ಏಕಾಏಕಿ ದಾಳಿ ನಡೆಸಿ ನೂರಾರು ಕೋಳಿಗಳ ಮಾರಣ ಹೋಮ ನಡೆಸಿದೆ.
ಶೆಟ್ಟಿಗೌಡನದೊಡ್ಡಿ ಬಳಿಯಿರುವ ನಾಟಿ ಕೋಳಿ ಫಾರಂ ನೊಳಗೆ ಕಳೆದ ರಾತ್ರಿ ನುಗ್ಗಿದ ಚಿರತೆ, ಗ್ರಾಮದ ರೈತ ಭಾಸ್ಕರ್ ಎಂಬುವರ ಮಾಲೀಕತ್ವದ ಕೋಳಿ ಫಾರಂ ನಲ್ಲಿನ ನೂರಾರು ಕೋಳಿಗಳ ಮೇಲೆ ದಾಳಿ ಮಾಡಿ, ಇಷ್ಟಾನುಸಾರ ಕೋಳಿಗಳನ್ನು ಬಲಿ ತೆಗೆದುಕೊಂಡಿದೆ.
ಚಿರತೆ ದಾಳಿಗೆ ನೂರಾರು ನಾಟಿ ಕೋಳಿಗಳು ಸಾವನ್ನಪ್ಪಿದ್ದು, ಇದರಿಂದ ಭಾರಿ ನಷ್ಟ ಅನುಭವಿಸಿರುವ ರೈತ ಕುಟುಂಬ ಕಂಗಾಲಾಗಿದೆ. ಇವರಿಗೆ ಸೂಕ್ತ ರೀತಿಯ ಪರಿಹಾರವನ್ನು ಒದಗಿಸಕೊಡಬೇಕಾಗಿದೆ ಎಂದು ಗ್ರಾಮದ ನಾಗರೀಕರು ಒತ್ತಾಯಿಸಿದ್ದಾರೆ.
ರೈತ ಆನೆ ದಾಳಿಯಿಂದ ಬೆಳೆ ಕಳೆದುಕೊಂಡಾಗ, ಅದೇ ರೀತಿಯಲ್ಲಿ ಬೇರೆ ಬೇರೆ ಪ್ರಾಣಿಗಳ ಉಪಟಳದಿಂದ ಪ್ರಾಣ ಕಳೆದುಕೊಂಡಾಗ ಅವರ ಕುಟುಂಬಕ್ಕೆ ತುಟಿಗೆ ತುಪ್ಪ ಸವರುವ ಕೆಲಸವನ್ನು ಮಾಡಲಾಗುತ್ತದೆಯೇ ಹೊರತಾಗಿ, ಅವರ ಕುಟುಂಬದ ಅಭಿವೃದ್ಧಿಗೆ ಪೂರಕವಾದ ಸಹಾಯ ಮಾಡುವುದಿಲ್ಲ.
ಇಂತಹ ದುಸ್ಥಿತಿಯಲ್ಲಿ ಸರ್ಕಾರ ವೈಜ್ಞಾನಿಕವಾದ ಪರಿಹಾರವನ್ನು ಒದಗಿಸಿಕೊಡಬೇಕು. ಇಲ್ಲದಿದ್ದರೆ ಆ ರೈತನ ಬದುಕು ಒಂದಲ್ಲ ಒಂದು ರೀತಿಯಲ್ಲಿ ಬರ್ಬಾದ್ ಆಗುತ್ತದೆ.
ಸ್ಥಳಕ್ಕೆ ಭೇಟಿ ನೀಡುವ ಅಧಿಕಾರಿಗಳು, ಭೇಟಿ ಸಂದರ್ಭದಲ್ಲಿ ಎಲ್ಲಾ ರೀತಿಯ ಸಹಕಾರವನ್ನು ಸಹಾಯವನ್ನು ಒದಗಿಸಿಕೊಡುವುದಾಗಿ ಹೇಳಿ ಹೋಗುವರು, ಆದರೆ ಆ ವಿಷಯವನ್ನು ಹೋಗುತ್ತಿದ್ದಂತಯೇ ಮರೆಯುವುದು ಇಂದು ನಡೆಯುತ್ತಿರುವ ಸಾಧನೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ರೈತನಿಗೆ ಸಾಂತ್ವನ ಹೇಳಿ, ಪರಿಶೀಲನೆ ನಡೆಸಿ ಹೋಗಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು