Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು

Posted date: 03 Nov, 2021

Powered by:     Yellow and Red

ತಾಲ್ಲೂಕು ಆಡಳಿತದ ಭ್ರಷ್ಟಾಚಾರ ಖಂಡಿಸಿ ಬಾರುಕೋಲು ಚಳವಳಿ ನಡೆಸಿದ ರೈತರು

ಚನ್ನಪಟ್ಟಣ:ನ/02/21. ಪ್ರತಿನಿತ್ಯವೂ, ಪ್ರತಿಯೊಬ್ಬ ರೈತರಿಗೂ ತಾಲೂಕು ಆಡಳಿತಾಧಿಕಾರಿಗಳು ವಿಳಂಬ ನೀತಿ ಅನುಸರಿಸುವುದು ಮತ್ತು ಲಂಚ ಪಡೆದು ಕೆಲಸ ನಿರ್ವಹಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತ ಭ್ರಷ್ಟಾಚಾರ ಹಾಗೂ ಸಾರ್ವಜನಿಕ ಕೆಲಸಗಳಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘದ ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಬಾರುಗೋಲು ಚಳುವಳಿ ನಡೆಸಲಾಯಿತು.

ನಗರದ ಗಾಂಧಿಭವನದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತಸಂಘದ ಕಾರ್ಯಕರ್ತರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಮೊಳಗಿಸಿದರು.


ತಾಲೂಕು ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಕೆಲ ಅಧಿಕಾರಿವರ್ಗದ ಹಣದಾಹದಿಂದ ಸಾರ್ವಜನಿಕರು ಪರಿಪಾಟಲು ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.


ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಕೆ. ಮಲ್ಲಯ್ಯ ಮಾತನಾಡಿ, ತಾಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಕೆಲ ಅಧಿಕಾರಿಗಳು ವ್ಯಾಪಕವಾದ ಭ್ರಷ್ಟಚಾರದಲ್ಲಿ ತೊಡಗಿದ್ದಾರೆ. ಕಂದಾಯ ಅಧಿಕಾರಿಗಳಾದ ಆರ್ ಐ ಮತ್ತು ವಿಎಗಳು ಕೇಂದ್ರಸ್ಥಾನದಲ್ಲಿರದೆ, ಪಟ್ಟಣಗಳಲ್ಲಿ ಕಚೇರಿ ತೆರೆದು ದರ್ಬಾರ್ ನಡೆಸುತ್ತಿದ್ದಾರೆ. ಖಾತೆ ಸೇರಿದಂತೆ ಸರ್ಕಾರಿ ಕೆಲಸಗಳಿಗೆ ಹಣ ವಸೂಲು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.


ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹಣವಿಲ್ಲದೇ ಮಾತನಾಡಿಸುವುದು ಸಹ ಕಷ್ಟಸಾಧ್ಯವಾಗಿದೆ. ಭೂ ದಾಖಲೆಗಳ ಅಕ್ರಮ ದುರುಪಯೋಗ ನಡೆಯುತ್ತಿದೆ. ಮಾಹಿತಿ ಹಕ್ಕು ನಿಯಮದಡಿಯಲ್ಲಿ ನೀಡುವ ಅರ್ಜಿಗಳಿಗೆ ಮಾಹಿತಿ ನೀಡದೆ ಹಿಂಬರಹ ಕೊಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಸಕಾಲ ಯೋಜನೆಯನ್ನು ಬುಡಮೇಲು ಮಾಡಲಾಗುತ್ತಿದೆ. ಪಹಣಿ ಹಾಗೂ ಇನ್ನಿತ್ತರ ದಾಖಲೆಗಳಲ್ಲಿ

ಕಂಪ್ಯೂಟರ್ ಆಪರೇಟರ್ ಗಳು ತಪ್ಪು ಮಾಹಿತಿಗಳನ್ನು ದಾಖಲಿಸುವ ಕಾರಣ, ರೈತರು ಎಸಿ, ಡಿಸಿ ಕಚೇರಿ ಹಾಗೂ ನ್ಯಾಯಾಲಯಗಳಿಗೆ ಸುಖಾಸುಮ್ಮನೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.


ಸಣ್ಣಪುಟ್ಟ ಕೆಲಸಗಳಿಗೆ ರೈತರು ಹಾಗೂ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಸ್ಥಿತಿ ಕೊನೆಯಾಗಬೇಕು. ಎಲ್ಲಾ ಕಚೇರಿಗಳಲ್ಲಿ ಸಿಸಿಟಿವಿ ಸರಹದ್ದಿನಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಬೇಕು. ಭ್ರಷ್ಟಾಚಾರ ಕೊನೆಗೊಳ್ಳಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾರದರ್ಶಕ ಹಾಗೂ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ತಾಲೂಕಿನಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ರೈತರ ಕುಂದುಕೊರತೆಗಳ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಿದರು.


ಸಾಮಾಜಿಕ ಕಾರ್ಯಕರ್ತ ರುದ್ರಪ್ಪ ಮಾತನಾಡಿ, ಬಡತನಕ್ಕಿಂತ ಹೆಚ್ಚಿನ ನೋವನ್ನು ಈ ಭ್ರಷ್ಟಾಚಾರ ಕೊಡುತ್ತದೆ. ಸರ್ಕಾರಿ ಕೆಲಸ ದೇವರ ಕೆಲಸವಿಂದಂತೆ, ಪವಿತ್ರವಾದ ಕೆಲಸಕ್ಕೆ ಚ್ಯುತಿ ಬರಬಾರದು. ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಣ ಹೊಡೆಯುವುದನ್ನು ದೊಡ್ಡ ಸಾಧನೆ ಎಂದುಕೊಂಡಿದ್ದಾರೆ. ಅಧಿಕಾರಸ್ಥ ಜನಪ್ರತಿನಿಧಿಗಳು ಸಹ ಹಣವಿರುವ ಖಾತೆಗಳನ್ನೆ ಬಯಸುವುದು ಸಹ ಭ್ರಷ್ಟಚಾರಕ್ಕಾಗಿಯೆ. ಆದರೆ, ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಬಡವರ ಹೊಟ್ಟೆ ಮೇಲೆ ಹೊಡೆಯುವುದು ಅಕ್ಷಮ್ಯ ಅಪರಾಧ. ಅನ್ನಕೊಡುವ ರೈತನಿಗೆ ನೋವು ಕೊಡುವ ಕೆಲಸ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.


*ತಹಸೀಲ್ದಾರ್ ಆಗಮನಕ್ಕೆ ಪಟ್ಟು;*

ಗಾಂಧಿಭವನದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದ ರೈತಸಂಘದ ಕಾರ್ಯಕರ್ತರು, ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಮನವಿ ಸ್ವೀಕರಿಸಲು ಗ್ರೇಡ್ 2 ತಹಸೀಲ್ದಾರ್ ಲಕ್ಷ್ಮಿದೇವಮ್ಮ ಆಗಮಿಸಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ತಹಸೀಲ್ದಾರ್ ಆಗಮಿಸಿ, ನಮ್ಮ ಮನವಿ ಹಾಗೂ ದೂರುಗಳನ್ನು ಆಲಿಸಬೇಕು. ಇಲ್ಲವಾದರೆ, ಹೆದ್ದಾರಿಗೆ ಹೋಗಿ ಕುಳಿತುಕೊಳ್ಳುವುದಾಗಿ ಪಟ್ಟು ಹಿಡಿದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿದ್ದ ತಹಸೀಲ್ದಾರ್ ಎಲ್. ನಾಗೇಶ್ ಕೂಡಲೇ ಸ್ಥಳಕ್ಕಾಗಮಿಸಿ ರೈತರ ಆಹವಾಲುಗಳನ್ನು ಆಲಿಸಿದರು. ಮನವಿ ಆಲಿಸಿದ ತಹಸೀಲ್ದಾರ್, ನೀಡಿರುವ ಪ್ರತಿ ಮನವಿಯನ್ನು ಪ್ರಾಮಾಣಿಕವಾಗಿ ಬಗೆಹರಿಸುತ್ತೇನೆ. ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ರೈತರ ಕುಂದುಕೊರತೆ ಸಭೆ ನಡೆಸಲಾಗುವುದು. ಮೊದಲಿಗೆ ಶೀಘ್ರವಾಗಿ ಕೋಡಂಬಳ್ಳಿ ಗ್ರಾಮದಲ್ಲಿ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.


ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷ ಎಚ್.ಸಿ.ಕೃಷ್ಣಯ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ರಾಜು, ತಾಲೂಕು ಅಧ್ಯಕ್ಷ ರಾಮೇಗೌಡ, ತಾಲೂಕು ಗೌರವಾಧ್ಯಕ್ಷ ತಿಮ್ಮೇಗೌಡ, ಕರವೇ ರೈತ ಘಟಕದ ಜಿಲ್ಲಾಧ್ಯಕ್ಷ ನಾಗವಾರ ಶಂಭೂಗೌಡ, ಪದಾಧಿಕಾರಿಗಳಾದ ಸುಜೀವನ್ ಕುಮಾರ್, ವಿನಯ್, ಗೋಪಾಲ, ನಾಗರಾಜು, ಗುರುಲಿಂಗಯ್ಯ, ಕೆ.ಎಲ್.ನಾಗರಾಜು, ಮೋಹನಗೌಡ ಮತ್ತಿತರರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ

ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ

ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ

ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ

ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು

ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು  ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ

ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ

ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ

ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ

ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ

ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ




ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

Top Stories »  


Top ↑