ತಿಮ್ಮಸಂದ್ರ ಕೆರೆಯಲ್ಲಿ ಜಲಕ್ರೀಡೆ ಆಡುತ್ತಿರುವ ಕಾಡಾನೆಗಳು
ಚನ್ನಪಟ್ಟಣ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗಳ ಹಿಂಡು ಚನ್ನಪಟ್ಟಣ ತಾಲೂಕಿನ ತಿಮ್ಮಸಂದ್ರ ಗ್ರಾಮದ ಕೆರೆಯಲ್ಲಿ ಬೀಡುಬಿಟ್ಟಿವೆ. ತಿಮ್ಮಸಂದ್ರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ಕೆರೆಯಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.
ಇಂದು ಬೆಳಗಿನಿಂದಲೇ ಆನೆಗಳನ್ನು ನೋಡಲು ಕೆರೆಯ ಬಳಿ ಜನಜಂಗುಳಿ ಸೇರಿದ್ದು ಆನೆಗಳನ್ನು ಕಾಡಿಗೆ ಅಟ್ಟಲು ಜನರ ಚೀರಾಟ ಅರಣ್ಯ ಇಲಾಖೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇಂದು ಬೆಳಿಗ್ಗೆ ಕೆರೆಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಗಳು ರಾತ್ರಿ ರೈತರ ಜಮೀನುಗಳಿಗೆ ಲಗ್ಗೆಯಿಟ್ಟು ಬೆಳೆಗಳನ್ನು ನಾಶ ಮಾಡಿವೆ.
ರಾತ್ರಿ ಕೆಂಗಲ್ ಬಳಿಯ ರುದ್ರಪ್ಪ ಎಂಬುವರ ತೋಟಕ್ಕೆ ನುಗ್ಗಿದ ಆನೆಗಳು ತೋಟದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಅಡಿಕೆ, ತೆಂಗು, ಕಾಫಿ, ಮೆಣಸು ಸೇರಿದಂತೆ ಇತರೆ ಬೆಳೆಗಳನ್ನು ತಿಂದು-ತುಳಿದು ಧ್ವಂಸ ಮಾಡಿವೆ. ನಂತರ ಅಲ್ಲಿಂದ ತೆರಳಿರುವ ಆನೆಗಳು ಹಲವು ಗ್ರಾಮಗಳ ಹೊಲ ಗದ್ದೆಗಳಲ್ಲಿ ಬೆಳೆದಿದ್ದ ರಾಗಿ ಭತ್ತ ಸೇರಿದಂತೆ ಹಲವು ಫಸಲು ನಾಶ ನಾಶ ಮಾಡಿ, ಈಗ ತಿಮ್ಮಸಂದ್ರ ಕೆರೆಯಲ್ಲಿ ಬೀಡು ಬಿಟ್ಟಿವೆ.
ನಿರಂತರವಾಗಿ ಈ ಭಾಗದಲ್ಲಿ ಆನೆಗಳು ರೈತರ ಜಮೀನುಗಳಿಗೆ ಗ್ರಾಮಗಳಿಗೆ ನುಗ್ಗುವುದಲ್ಲದೇ ದೊಡ್ಡನಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಬಲಿ ತೆಗೆದುಕೊಂಡಿದ್ದವು. ಇದರಿಂದ ಆಕ್ರೋಶಗೊಂಡಿರುವ ರೈತರು ಅರಣ್ಯ ಇಲಾಖೆ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು