ಪಾನಿಪೂರಿ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ತುಂಡಾದ ಬಾಲಕನ ಕೈಬೆರಳುಗಳು
ಚನ್ನಪಟ್ಟಣ.ಏ.೦೭: ಪಾನಿ ಪುರಿ ತಯಾರಿಸುವ ಪ್ಯಾಕ್ಟರಿಯಲ್ಲಿ ಅಕ್ರಮವಾಗಿ ಬಾಲಕಾರ್ಮಿಕನನ್ನು ಕೆಲಸಕ್ಕೆ ಬಳಸಿಕೊಂಡಿದ್ದು, ಮೆಷಿನ್ನಲ್ಲಿ ಕೆಲಸ ಮಾಡುವಾಗ ಬಾಲಕ ಕೈ ಬೆರಳುಗಳು ತುಂಡಾಗಿರುವ ಘಟನೆ ನಡೆದು ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ತಾಲ್ಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ನಿವಾಸಿ ಸಾಕಮ್ಮ ಎಂಬುವವರು ಅದೇ ಗ್ರಾಮದ ವಿಕಾಸ್ ಎಂಬುವವರ ಪಾನಿಪುರಿ ಪ್ಯಾಕ್ಟರಿಯಲ್ಲಿ ಕಳೆದ ೨ ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಇವರ ಮಗನಾದ ಚೇತನ್(೧೫) ೮ನೇ ತರಗತಿಯಲ್ಲಿ ಓದುತ್ತಿದ್ದು, ಈಗ ಬೇಸಿಗೆ ರಜೆ ಇದ್ದುದರಿಂದ ತಾಯಿ ಕೆಲಸ ಮಾಡುವ ಸ್ಥಳಕ್ಕೆ ಆಗಾಗ್ಗೆ ಹೋಗುತ್ತಿದ್ದಾಗ ಪ್ಯಾಕ್ಟರಿ ಮಾಲೀಕರು ಅವನ ಕೈಯಲ್ಲಿ ಪಾನಿಪುರಿ ಹಿಟ್ಟನ್ನು ತುಳಿಸುವ ಕೆಲಸ ಮಾಡಿಸಿತ್ತಿದ್ದರು. ಅದಕ್ಕೆ ಹಣವನ್ನು ಕೊಡುತ್ತಿದ್ದರು ಎನ್ನಲಾಗಿದೆ.
ಇತ್ತೀಚಿಗೆ ಸಾಕಮ್ಮನವರಿಗೆ ಹುಷಾರಿಲ್ಲದ ಕಾರಣ ಕೆಲಸಕ್ಕೆ ಹೋಗುವುದು ತಡವಾಗಿದ್ದು ಅದನ್ನು ತಿಳಿಸಲು ಮಗನನ್ನು ಪ್ಯಾಕ್ಟರಿಗೆ ಕಳುಹಿಸಿಕೊಟ್ಟಿದ್ದಾರೆ. ಆಗ ಮಾಲೀಕ ನಿಮ್ಮ ತಾಯಿ ಬರುವವರೆಗೂ ಕೆಲಸ ಮಾಡು ಎಂದು ಮೆಷಿನ್ ಬಳಿ ಕೆಲಸಕ್ಕೆ ಬಿಟ್ಟಿದ್ದಾರೆ. ಅವರ ತಾಯಿ ಪ್ಯಾಕ್ಟರಿಯ ಬಳಿ ಬಂದು ನೋಡಿದಾಗ ಮಗನ ಕೈಯಲ್ಲಿ ರಕ್ತ ಬರುತ್ತಿದ್ದು, ಆತ ಮೆಷಿನ್ ನಲ್ಲಿ ಕೆಲಸ ಮಾಡುವಾಗ ಬಲಗೈ ಮೆಷಿನ್ಗೆ ಸಿಕ್ಕಿ ಎರಡು ಬೆರುಗಳಿಗೆ ಗಾಯವಾಗಿದ್ದು ಆತನನ್ನು ಸಾರ್ವಜನಿಕರ ಸಹಾಯದಿಂದ ಇಲ್ಲಿನ ಬಿಜೆ ಲಿಂಗೇಗೌಡ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಸಂಬಂಧ ಬಾಲಕನ ತಾಯಿ ಸಾಕಮ್ಮ ಪೂರ್ವ ಪೊಲೀಸ್ ಠಾಣೆಯಲ್ಲಿ ವಿಕಾಸ್ ಎಂಬುವವರ ವಿರುದ್ಧ ದೂರು ನೀಡಿದ್ದು, ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಆಕಾಶ್ ಬಿ ಪತ್ತಾರ್ ರವರು ಠಾಣಾ ಮೊಕದ್ದಮೆ ೨೦/೨೦೨೩, ಮಕ್ಕಳ ಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ
ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟ
ಚನ್ನಪಟ್ಟಣ: ಮನೆಯ ಹಿಂಭಾಗ ಮೆದೆ ಹಾಕಿದ ಭತ್ತದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸರಿಸುಮಾರು ನಾಲ್ಕು ಟ್ರ್ಯಾಕ್ಟರ್ ನಷ್ಟು ಹುಲ್ಲು ಸುಟ್ಟು ಭಸ್ಮ
ಹೈನೋದ್ಯಮಿಗಳಿಗೆ ಬೆಂಗಳೂರು ಹಾಲು ಒಕ್ಕೂಟದಿಂದ ಅನ್ಯಾಯ. ರೈತ ಸಂಘದಿಂದ ಪ್ರತಿಭಟನೆ
ಚನ್ನಪಟ್ಟಣ: ಬೆಂಗಳೂರು ಹಾಲು ಒಕ್ಕೂಟವು ಹಾಲು ಉತ್ಪಾದಕರು ಪೂರೈಕೆ ಮಾಡುವ ಪ್ರತಿ ಲೀಟರ್ ಹಾಲಿಗೆ 2₹. ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ
ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್
ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ
ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ
ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.
ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ
ಪ್ರತಿಕ್ರಿಯೆಗಳು