ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ

ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ ಮೈದುನ ಕುಡುಗೋಲಿನಿಂದ ಕತ್ತು ಕೊಯ್ದು ಜೋಡಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ನಿವಾಸಿ ಶಾಂತಮ್ಮ (47) ಹಾಗೂ ಇವರ ಪುತ್ರ ಯಶ್ವಂತ್ (17) ಕೊಲೆಗೀಡಾದವರು. ಇದೇ ಕುಟುಂಬಕ್ಕೆ ಸೇರಿದ ಶಾಂತಮ್ಮ ಅವರ ಮೈದುನ ಸತೀಶ್ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಸತೀಶ್ ಗೆ ಶಾಂತಮ್ಮ ಸ್ವಂತ ಅಣ್ಣನ ಹೆಂಡತಿಯಾಗಿದ್ದು, ಯಶವಂತ್ ಅಣ್ಣನ ಮಗನಾಗಿದ್ದಾನೆ.
ಒಂದೇ ಕುಟುಂಬಕ್ಕೆ ಸೇರಿದ ಶಾಂತಮ್ಮ ಹಾಗೂ ಆರೋಪಿ ಸತೀಶ್ ಅವರಿಗೆ ಐದು ಎಕರೆ ಜಮೀನಿದ್ದು, ಒಂದೇ ಪಂಪ್ ಸೆಟ್ ಬಾವಿಯಿಂದ ನೀರು ಹಾಯಿಸಬೇಕಾಗಿತ್ತು.
ಜಮೀನಿಗೆ ನೀರು ಹಾಯಿಸುವ ವಿಚಾರವಾಗಿ ಕುಟುಂಬಸ್ಥರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಆದರೆ ಬುಧವಾರ ಮಧ್ಯಾಹ್ನ ಹೆಗ್ಗಡಹಳ್ಳಿ ಗ್ರಾಮದ ಸಮೀಪ ಜಮೀನಿನಲ್ಲಿ ಪಂಪ್ ಸೆಟ್ ನೀರಿನ ವಿಚಾರವಾಗಿ ಶಾಂತಮ್ಮ, ಇವರ ಪುತ್ರ ಯಶ್ವಂತ್ ಹಾಗೂ ಸತೀಶ್ ನಡುವೆ ಜಗಳ ನಡೆಯುತ್ತಿದ್ದಾಗ, ಸ್ಥಳದಲ್ಲಿದ್ದ ಸತೀಶ್ ಅವರು ಕೊಡಲಿಯಿಂದ ಶಾಂತಮ್ಮ ಹಾಗೂ ಯಶ್ವಂತ್ ಅವರಿಗೆ ಕತ್ತು ಹಾಗೂ ತಲೆಗೆ ತೀವ್ರವಾಗಿ ಹೊಡೆದ ಪರಿಣಾಮ ಸ್ಥಳದಲ್ಲೇ ತಾಯಿ, ಮಗ ಮರಣ ಹೊಂದಿದ್ದಾರೆ. ತಾಯಿಯನ್ನು ಪಂಪ್ ಸೆಟ್ ಮನೆಯಲ್ಲಿ ಹಾಗೂ ಪುತ್ರನನ್ನು ಮುಂಭಾಗದಲ್ಲಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಆರೋಪಿ ತನ್ನ ಹೆಂಡತಿಯ ಸಹೋದರನಿಗೆ ಕರೆ ಮಾಡಿ, ತನ್ನ ಪತ್ನಿ ಮತ್ತು ಮಕ್ಕಳನ್ನು ತವರಿಗೆ ಕಳುಹಿಸಿ, ಆತ ನೇರವಾಗಿ ಪೋಲೀಸ್ ಠಾಣೆಗೆ ತೆರಳಿ ಶರಣಾಗಿದ್ದು, ಪೋಲೀಸರು ಗ್ರಾಮಕ್ಕೆ ಬಂದು ವಿಷಯ ತಿಳಿಸುವ ತನಕ ಕುಟುಂಬದವರಿಗಾಗಲಿ, ಗ್ರಾಮಸ್ಥರಿಗೆ ಕೊಲೆಯ ವಿಷಯವೇ ತಿಳಿದಿರಲಿಲ್ಲಾ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಯ ಹಬ್ಬುತ್ತಿದ್ದಂತೆ ತಾಲ್ಲೂಕು ಸೇರಿದಂತೆ ಮಂಡ್ಯ ಜಿಲ್ಲೆಯಾದ್ಯಂತ ಸಹಸ್ರಾರು ಮಂದಿ ನೆರೆದಿದ್ದು, ಜನರನ್ನು ನಿಯಂತ್ರಿಸಲು ಪೋಲೀಸರು ಸಿ ಆರ್ ಪಿ ಎಫ್ ತುಕಡಿಯನ್ನು ಕರೆಸಿಕೊಂಡು ನಿಯಂತ್ರಿಸಿದ್ದಾರೆ.
ವಿಷಯ ತಿಳಿದ ತಕ್ಷಣ ಪಾಂಡವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಸತೀಶ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಜೋಡಿ ಕೊಲೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ಕೃಷ್ಣಭೈರೇಗೌಡರನ್ನೇ ಕೃಷಿಮಂತ್ರಿಯಾಗಿ ಮಾಡಿ ಡಿಕೆಶಿಗೆ ಪತ್ರ ಬರೆದ ಸೋಗಾಲ ಗ್ರಾಮದ ಪ್ರಫುಲ್ಲಚಂದ್ರ
ಚನ್ನಪಟ್ಟಣ: ಮೈತ್ರಿ ಸರ್ಕಾರದಲ್ಲಿ ಕೃಷಿ ಮಂತ್ರಿಯಾಗಿ ತನ್ನ ಕರ್ತವ್ಯವನ್ನು ಸರಿಯಾದ ನಿಟ್ಟಿನಲ್ಲಿ ನಿರ್ವಹಿಸಿ ಸೈ ಎನಿಸಿಕೊಂಡಿರುವ ಕೃಷ್ಣ ಬೈರ

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿ

ಸಮಸ್ಯೆಗಳ ಆಗರವಾಗಿರುವ ರಾಗಿ ಖರೀದಿ ಕೇಂದ್ರ ಖರೀದಿಯಲ್ಲಿ ವಿಳಂಬ
ಚನ್ನಪಟ್ಟಣ ಮೇ 23 22. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೈತರಿಂದ ರಾಗಿ ಖರೀದಿ ಮಾಡುವ ಸಲುವಾಗಿ ಕೇಂದ್ರವೊಂದನ್ನು ತೆರೆದಿದ್ದು ಸಂಪೂರ್

ಏಪ್ರಿಲ್ 25ರಿಂದ ರೈತರೇ ಸ್ವಯಂ ನಕ್ಷೆ ತಯಾರಿಸುವ ವ್ಯವಸ್ಥೆ ಜಾರಿ: ಆರ್ ಅಶೋಕ್
April 22, 2022: ಬೆಂಗಳೂರು: ಭೂ ಒಡೆತನ ಹೊಂದಿರುವವ ರೈತರು ತಮ್ಮ ಸ್ವಂತ ಜಮೀನಿನ 11 ಇ ಸ್ಕೆಚ್, ಪೋಡಿ, ಭೂಪರಿವರ್ತನಾ ಪೂರ್ವ ಸ್ಕೆಚ್ಗಳನ್ನ

ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಾರರ ಸಮಸ್ಯೆಗಳ ನಿವಾರಣೆಗೆ ಒತ್ತಾಯಿಸಿ ಮಾ.23 ರಿಂದ ಅನಿರ್ಧಿಷ್ಠಾವಧಿ ಧರಣಿ : ಸಿ. ಪುಟ್ಟಸ್ವಾಮಿ
ರಾಮನಗರ: ಜಿಲ್ಲೆಯಲ್ಲಿ ಎಲ್ಲಾ ರೈತರು ಬೆಳೆಗಳ ವಿಷಯದಲ್ಲಿ ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಮಾವು, ತೆಂಗು, ಬಾಳೆ ಸೇರಿದಂತೆ ಇತರೆ ತೋಟಗಾರಿಕ

ತಾಲ್ಲೂಕಿನ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶಾಸಕರ ನೇತೃತ್ವದಲ್ಲಿ ಸಭೆ ಕರೆಯುವಂತೆ ಆಗ್ರಹಿಸಿದ ಸಿ ಪುಟ್ಟಸ್ವಾಮಿ
ಚನ್ನಪಟ್ಟಣ: ಜಿಲ್ಲಾ ಮತ್ತು ತಾಲೂಕು ಆಡಳಿತ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿತನದಿಂದಾಗಿ, ರೈತರಿಗೆ ಸಾಕಷ

ರೈತೋತ್ಪನ್ನ ಹೆಚ್ಚಾದಂತೆಲ್ಲಾ ರೈತ ಬಡವನಾಗುತ್ತಿದ್ದಾನೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ವೀರಭದ್ರಪ್ಪ ಬಿಸ್ಲಳ್ಳಿ
ರೈತರ ಯೋಗ ಮತ್ತು ಯೋಗ್ಯತೆ ತಿಳಿದುಕೊಂಡಿದ್ದ ಏಕೈಕ ಹೋರಾಟಗಾರ ಪ್ರೊ ನಂಜುಂಡಸ್ವಾಮಿ ಯವರು. ಅವರ ಒಂದು ಮಾತಿಗೆ ಇಡೀ ಸರ್ಕಾರ ನಡುಗುವಂತೆ ಮಾಡುವ ತಾಕತ್ತು ಅವರ ಮಾತಿನಲ್ಲಿತ್ತು. ಸಂಘಟನೆಯ ಮೂಲಕ ರೈತರು

ಕನ್ನಮಂಗಲ ಗ್ರಾಮದ ದೇವಾಲಯಗಳ ಕೊಡುಗೆ ಜಮೀನು ಮಾರಾಟ ಮಾಡಿದವರ ಖಾತೆ ರದ್ದು ಮಾಡುವಂತೆ ಡಿ ಸಿ ಗೆ ಮನವಿ ಸಲ್ಲಿಸಿದ ರೈತ ಮುಖಂಡರು
ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮದ ದೇವರುಗಳಾದ ಶ್ರೀ ಮಾಧವರಾಯ ಸ್ವಾಮಿ, ಬಸವೇಶ್ವರ ಸ್ವಾಮಿ ಮತ್ತು ಗುರುಮಠ ದ ಅಭಿವೃದ್ಧಿಗಾಗಿ
ಪ್ರತಿಕ್ರಿಯೆಗಳು