ಎಂಬಿಬಿಎಸ್ ನಲ್ಲಿ ಗೋಲ್ಡ್ ಮೆಡಲ್, ಪಿಜಿ ಯಲ್ಲಿ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದ ಅಪ್ಪಟ ಗ್ರಾಮೀಣ ಪ್ರತಿಭೆ ಚಕ್ಕಲೂರು ಗ್ರಾಮದ ಡಾ ಅನುಶ್ರೀ

ಚನ್ನಪಟ್ಟಣ: ತಾಲ್ಲೂಕಿನ ಚಕ್ಕಲೂರು ಗ್ರಾಮದಿಂದ ಚನ್ನಪಟ್ಟಣ ನಗರಕ್ಕೆ ಪ್ರತಿದಿನ ಅಂದರೆ ಹದಿನಾಲ್ಕು ವರ್ಷಗಳ ಕಾಲ ಇಪ್ಪತ್ನಾಲ್ಕು ಕಿಲೋಮೀಟರ್ ಪ್ರಯಾಣ ಮಾಡಿ, ಎಲ್ ಕೆ ಜಿ ಇಂದ ಹತ್ತನೇ ತರಗತಿ ವರೆಗೆ ಸೇಂಟ್ ಮೈಖೇಲ್ ಇಂಗ್ಲಿಷ್ ಶಾಲೆಯಲ್ಲಿ ಓದಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ ಯನ್ನು ನಗರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ಓದಿ ಸಿಇಟಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದು ಐದೂವರೆ ವರ್ಷಗಳ ಕೋರ್ಸಿನಲ್ಲಿ ಎರಡು ಚಿನ್ನದ ಪದಕ ಪಡೆದು, ಪಿಜಿ ಪರೀಕ್ಷೆ ಬರೆದು ಅದರಲ್ಲೂ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದು ಎಂಡಿ ಸೀಟು ಪಡೆದುಕೊಂಡು ಹೆತ್ತವರಿಗೆ, ಓದಿದ ಶಾಲಾ ಕಾಲೇಜುಗಳಿಗೆ, ತಾಲೂಕಿಗೆ, ಜಿಲ್ಲೆಗೆ ಹೆಸರು ತಂದಿರುವ ಅಪ್ಪಟ ಗ್ರಾಮೀಣ ಪ್ರತಿಭೆ ಡಾ ಅನುಶ್ರೀ.
ತಂದೆ ಮೋಹನ್ ದಾಸ್ ಕೃಷಿಕರು ಜೊತೆಗೆ ಬೆಂಗಳೂರಿನ ಐಟಿಸಿ ಖಾಸಗಿ ಕಂಪನಿಯಲ್ಲಿ ಕೆಲಸ, ತಾಯಿ ಭುವನೇಶ್ವರಿ ನಗರದ ಸೇಂಟ್ ಮೈಖೇಲ್ ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿ, ಅಣ್ಣ ಹರ್ಷ ಸಿ ಎಂ ಬಾಲ್ಯದಿಂದಲೂ ರ್ಯಾಂಕ್ ಸ್ಟೂಡೆಂಟ್, ಆತ ಈಗ ಎಂ ಎನ್ ಸಿ ಕಂಪನಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರ್, ಪ್ರೌಢಶಾಲೆಗೆ ಬರುವ ತನಕ ಸಾಮಾನ್ಯ ವಿದ್ಯಾರ್ಥಿನಿಯಾಗಿದ್ದ ಅನುಶ್ರೀ, ಹಲವಾರು ಮಂದಿಯ ಮೂದಲಿಕೆಯಿಂದ ಅಣ್ಣನ ಸಹಾಯದಿಂದ, ಹೆತ್ತವರ ಒತ್ತಾಸೆಯಿಂದ ನಾನೂ ಅಣ್ಣನಂತೆ ರ್ಯಾಂಕ್ ಬರಬೇಕೆಂಬ ಛಲ ತೊಟ್ಟು, ಹತ್ತನೇ ತರಗತಿಯಲ್ಲಿ, ಶೇ ೯೫ ಅಂಕಪಡೆದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ಶೇ ೯೫ ಅಂಕ ಪಡೆದು ತಾನು ಓದಿದ ಕೇಂಬ್ರಿಡ್ಜ್ ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಮನಗರ ಜಿಲ್ಲೆಗೆ ಎರಡನೇ ಸ್ಥಾನ ಪಡೆದು ಜಿಲ್ಲೆಗೆ ಹೆಸರುವಾಸಿಯಾದರು.
ಸಿಇಟಿ ಪರೀಕ್ಷೆ ಬರೆದು ಅಲ್ಲೂ ಯಶಸ್ವಿಯಾದ ಆಕೆಗೆ ದೂರದ ಬೀಜಾಪುರ ದ ಆಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಮೆಡಿಕಲ್ ಸೀಟು ಸಿಕ್ಕಾಯಿತು, ಕೇವಲ ಚಕ್ಕಲೂರು ಟು ಚನ್ನಪಟ್ಟಣ ಎಂದುಕೊಂಡಿದ್ದ ಆಕೆಗೆ ದೂರದ ಬಿಜಾಪುರ, ಅಲ್ಲಿಯ ವಾತಾವರಣ ಕಷ್ಟ ಎನಿಸಿತ್ತಾದರೂ ನೀನು ಸಾಧನೆ ಮಾಡೇ ತೀರುತ್ತಿ ಹೋಗಿ ಬಾ ಎಂದು ತಂದೆ-ತಾಯಿ ಯ ಒತ್ತಾಸೆಯಿಂದ ಬಿಜಾಪುರದಲ್ಲಿ ಓದಲಾರಂಭಿಸಿದರು. ಎರಡನೇ ವರ್ಷದಲ್ಲೇ ರಾಜೀವ್ ಗಾಂಧಿ ವಿಶ್ವವಿದ್ಯಾಲಯಕ್ಕೆ ಮೈಕ್ರೋಬಯಲಾಜಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡರೆ, ನಾಲ್ಕೂವರೆ ವರ್ಷ ಮುಗಿಯುವಷ್ಟರಲ್ಲಿ ಪ್ರಸೂತಿಶಾಸ್ತ್ರ ಮತ್ತು ಶಸ್ತ್ರಚಿಕಿತ್ಸೆ ಯಲ್ಲಿ ತಲಾ ಒಂದೊಂದು ಚಿನ್ನದ ಪದಕ ಪಡೆದು ಉತ್ತಮ ಮೆಡಿಕಲ್ ವಿದ್ಯಾರ್ಥಿನಿ ಎಂದು ಸಾಬೀತು ಪಡಿಸಿದರು.
ನೀಟ್ ಪಿಜಿ ಪ್ರವೇಶ ಪರೀಕ್ಷೆ ಬರೆದ ಡಾ ಅನುಶ್ರೀ ಅದರಲ್ಲೂ ದೇಶಕ್ಕೆ ಎರಡು ಸಾವಿರ ರ್ಯಾಂಕ್ ಪಡೆದು ಅದರಲ್ಲೂ ಸಾಧನೆ ಮಾಡಿದರು. ಇದನ್ನು ರಾಜ್ಯಕ್ಕೆ ಹೋಲಿಸಿದರೆ ನೂರರ ಆಸುಪಾಸಿನ ರ್ಯಾಂಕ್, ಜಿಲ್ಲೆ ಮತ್ತು ತಾಲ್ಲೂಕಿಗೆ ಪ್ರಥಮ ರ್ಯಾಂಕ್ ಪಡೆದು, ಇವರು ಯಾವ ಕಾಲೇಜಿನಲ್ಲಿ ಕೇಳಿದರೂ ಅದೇ ಕಾಲೇಜಿನಲ್ಲಿ ಸೀಟು ಸಿಗುವ ಹಂತದ ರ್ಯಾಂಕ್ ಇದು. ಅಪ್ಪಟ ಗ್ರಾಮೀಣ ಪ್ರತಿಭೆಯೊಬ್ಬರು ಇಂತಹ ಸಾಧನೆ ಮಾಡಿದ್ದು ಜಿಲ್ಲೆ ಮತ್ತು ತಾಲೂಕ್ಕಿಗೆ ಕೀರ್ತಿ ತಂದಿದ್ದಾರೆ.
ಈ ಸಾಧನೆಯನ್ನು ನನ್ನ ಕುಟುಂಬ, ಶಾಲಾಕಾಲೇಜಿನ ಬೋಧಕರಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಅರ್ಪಿಸುತ್ತೇನೆ. ಎಂಡಿ ಯಲ್ಲಿ ಪ್ರಸೂತಿ, ಸ್ತ್ರೀರೋಗ ಶಾಸ್ತ್ರ ಅಥವಾ ಚರ್ಮರೋಗ ಪಠ್ಯ ತೆಗೆದುಕೊಂಡು ಓದಬೇಕೆಂಬ ಬಯಕೆ ಇದೆ. ತರುವಾಯ ಗ್ರಾಮೀಣ ಪ್ರದೇಶಗಳಲ್ಲಿ ವೃತ್ತಿ ಆರಂಭಿಸಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯದ ಅರಿವು ಮೂಡಿಸಬೇಕೆಂಬ ಹೆಬ್ಬಯಕೆ ಇದೆ. ಡಾ ಅನುಶ್ರೀ ಚಕ್ಕಲೂರು.
ಮಕ್ಕಳಿಗೆ ಆಸ್ತಿ ಮಾಡುವುದಲ್ಲಾ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕೆಂಬ ಇಚ್ಚೆಯಿಂದ ಓದಿಸಿದ್ದೇವೆ. ಅವರೂ ಸಹ ಸಾಧಿಸಿದ್ದಾರೆ. ಮುಂದಿನ ಮೆಡಿಕಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ, ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಬೇಕೆಂಬ ಆಕೆಯ ಹೇಳಿಕೆ ನಮಗೆ ಹೆಮ್ಮೆ ಮೂಡಿಸಿದೆ. ಮೋಹನ್ ದಾಸ್ ಮತ್ತು ಭುವನೇಶ್ವರಿ
ಏನು ಓದಿದೆ, ಎಷ್ಟು ಓದಿದೆ ಎಂಬುದು ಮುಖ್ಯವಲ್ಲಾ, ಒಬ್ಬ ಗ್ರಾಮೀಣ ಭಾಗದ ಹೆಣ್ಣು ಮಗಳು ವೈದ್ಯ ವೃತ್ತಿಯಲ್ಲಿ ನಿಪುಣತೆ ಸಾಧಿಸಿರುವುದು ಕರ್ನಾಟಕಕ್ಕೆ ಹೆಮ್ಮೆ ವಿಷಯ. ಹಾಗಾಗಿ ಅವರಿಗೆ ಗ್ರಾಮೀಣ ಭಾಗದ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಿದ್ದೇನೆ. ಲಕ್ಷ್ಮಿ ಗೋ ರಾ ಶ್ರೀನಿವಾಸ... ಜಾನಪದ ಕಲಾವಿದರು ಚನ್ನಪಟ್ಟಣ
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿ
ಪ್ರತಿಕ್ರಿಯೆಗಳು