ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಕಾಡಾನೆ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಕೈಗೊಂಡ ಪ್ಲಾನ್ ಸಕ್ಸಸ್ ಆಗಿದೆ. ತೆಂಗಿನ ಕಲ್ಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆಯನ್ನು ನಡೆಸುತ್ತಾ ಎರಡು ಜೀವಗಳನ್ನು ಸಹ ಬಲಿಯನ್ನ ಪಡೆದಿತ್ತು. ಕೊನೆಗೂ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಅಭಿಮನ್ಯು ಟೀಮ್ ಯಶಸನ್ನು ಕಂಡಿದೆ.
ಕಳೆದ ನಾಲ್ಕೈದು ದಿನಗಳ ಹಿಂದೆ ಕಾಡಾನೆ ತೆರೆಗೆ ಅಭಿಮನ್ಯು ನೇತೃತ್ವದ 5 ಸಾಕಾನೆಗಳ ತಂಡ ಚನ್ನಪಟ್ಟಣ ತಾಲೂಕಿನ ವಿರೂಪಾಕ್ಷಿಪುರ ಪಂಚಾಯತಿ ವ್ಯಾಪ್ತಿಗೆ ಆಗಮಿಸಿತ್ತು. ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಕಾಡಾನೆಗಳನ್ನು ಬರಮಾಡಿಕೊಳ್ಳಲಾಗಿತ್ತು.
ಎರಡು ದಿನಗಳಲ್ಲಿ ನಡೆದ ಕಾರ್ಯಾಚರಣೆಯ ವೇಳೆ ಇಂದು ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅಭಿಮನ್ಯು ತಂಡ ಸಫಲವಾಗಿದೆ.
ತಾಲೂಕಿನ ಅರಳಾಳುಸಂದ್ರ, ಕಾಡನಕುಪ್ಪೆ ಗ್ರಾಮದ ಮಧ್ಯ ಭಾಗದಲ್ಲಿ ಒಂಟಿ ಸಲಗವನ್ನು ಸೆರೆ ಹಿಡಿಯಲಾಗಿದೆ. ಕಾಡಾನೆಯನ್ನ ತಾತ್ಕಾಲಿಕ ಕ್ಯಾಂಪ್ಗೆ ಕರೆತರಲಾಗಿದ್ದು ಸ್ಥಳಾಂತರ ಕಾರ್ಯವನ್ನು ಕೈಗೊಳ್ಳಲಾಗಿದೆ. ವೈದ್ಯರಾದ ಮುಜೀಬ್ - ರಮೇಶ್ ನೇತೃತ್ವದಲ್ಲಿ ಕಾಡಾನೆ ಸೆರೆ ಹಿಡಿಯಲಾಗಿದೆ. ಅರಿವಳಿಕೆ ಮದ್ದನ್ನು ನೀಡಿದ ನಂತರ ಪಳಗಿದ ಸಾಕಾನೆಗಳ ಸಹಾಯದಿಂದ ಕಾಡಾನೆ ಸೆರೆ ಹಿಡಿಯಲಾಗಿದ್ದು, ಆನೆ ಸದ್ಯಕ್ಕೆ ಆರೋಗ್ಯವಾಗಿದೆ, ಯಾವುದೇ ಸಮಸ್ಯೆ ಇಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ನಂತರ ಮಾತನಾಡಿದ ವೈದ್ಯರಾದ ಮುಜೀಬ್ - ರಮೇಶ್ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕಾಡಾನೆಗಳನ್ನ ಸುರಕ್ಷಿತ ಅರಣ್ಯಕ್ಕೆ ಬಿಡಲಾಗುತ್ತದೆ.
ಅಭಿಮನ್ಯುವಿನ ಸಹಕಾರದೊಂದಿಗೆ ಈ ಕಾಡಾನೆ ಕಾರ್ಯಾಚರಣೆ ಮಾಡಲಾಗಿದೆ. ಇನ್ನೆರಡು ದಿನಗಳ ಕಾಲ 5 ಸಾಕಾನೆಗಳಿಗೆ ವಿಶ್ರಾಂತಿ ನೀಡಲಾಗುತ್ತೆ ನಂತರ 2 ದಿನ ಬಿಟ್ಟು ಮತ್ತೆ ಕಾಡಾನೆ ಕಾರ್ಯಾಚರಣೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.
ಒಟ್ಟು 5 ಆನೆಗಳ ಕಾರ್ಯಾಚರಣೆಗೆ ಅನುಮತಿ ಕೇಳಿದ್ದೇವೆ ಆದರೆ ಅನುಮತಿ ಸಿಕ್ಕಿಲ್ಲ, ಇನ್ನೊಂದು ಆನೆ ಹಿಡಿಯಲಾಗುತ್ತೆ ಎಂದು ಅರಣ್ಯಾಧಿಕಾರಿ (ಎಸಿಎಫ್) ನಿಜಾಮುದ್ದೀನ್ ಮಾಹಿತಿಯನ್ನು ನೀಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in agriculture »

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್

ಹೆಚ್ಚು ಹಾಲು ಹಾಕುವ ಉತ್ಪಾದಕರಿಗೆ ಬಹುಮಾನ ನೀಡುವ ಮೂಲಕ ಉತ್ತೇಜಿಸಿದ ನಿರ್ದೇಶಕ
ಚನ್ನಪಟ್ಟಣ: ಸಂಘಕ್ಕೆ ನಾನೇ ಹೆಚ್ಚು ಹಾಲು ಹಾಕಬೇಕು, ಹೆಚ್ಚು ಲಾಭ ಮಾಡಬೇಕು ಎನ್ನುವ ಸ್ಪರ್ಧಾತ್ಮಕ ಯುಗದಲ್ಲಿ ಹತ್ತಾರು ರೈತರಿಗೆ ಪ್ರೋತ್ಸಾಹ ನೀಡಲು ಸ್ವಂತ ಹಣದಲ್ಲಿ ಬಹುಮಾನಗಳನ್ನು ಕೊಟ್ಟು ಸಂಘಕ್ಕೆ

ಅಕ್ಕೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳಿಂದ ಬೆಳೆ ನಾಶ
ಚನ್ನಪಟ್ಟಣ : ತಾಲೂಕಿನ ಅಕ್ಕೂರು, ಸಾದರಹಳ್ಳಿ, ಸೋಮನಾಥಪುರ, ಹೊಸಹಳ್ಳಿ, ಎಸ್.ಎಂ.ಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಲ್ಲಿ ಸೋಮವಾರ ರಾತ್ರಿ ಹಾಗೂ ಮಂ

ಕಾಡಾನೆ ದಾಳಿ, ಕೂದಲೆಳೆ ಅಂತರದಲ್ಲಿ ಬಚಾವಾದ ವ್ಯಕ್ತಿ
ಇತ್ತೀಚೆಗೆ ತಾಲ್ಲೂಕಿನಾದ್ಯಂತ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಮಂಗಳವಾರ ಸಹ ಅದೇ ಗ್ರಾಮದಲ್ಲಿ ಮತ್ತೇ ಕಾಡಾನೆ ದಾಳಿ ನಡೆಸಿದ್ದು ಅದೃಷ್ಟವಶಾತ್ ವ್ಯಕ್ತಿಯೊರ್ವ ಸಾವಿನಿಂದ ಬಚಾವಾಗಿದ್ದಾನೆ.

ಆನೆ ದಾಳಿಗೆ ರೈತರು ಹೈರಾಣು: ಹೆಚ್ಚಾದ ಕಾಟ, ವಿಫಲವಾದ ಅರಣ್ಯ ಇಲಾಖೆ
ಚನ್ನಪಟ್ಟಣ: ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ದಿನದಿಂದ ದಿನಕ್ಕೆ ರೈತರ ಜಮೀನುಗಳ ಮೇಲೆ ಆನೆಗಳು ಲಗ್ಗೆ ಇಟ್ಟು ದಾಳಿಯನ್ನು ಮಾಡ
ವ್ಯಕ್ತಿ ಬಲಿ ಪಡೆದ ಪುಂಡಾನೆ ಸೆರೆ
ಚನ್ನಪಟ್ಟಣ: ತಾಲೂಕಿನಲ್ಲಿ ಆನೆ ಉಪಟಳ ಹೆಚ್ಚಾದ ಹಿ

ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್
ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್

ಪಂಪ್ ಸೆಟ್ ಬಾವಿ ನೀರಿಗಾಗಿ ತಾಯಿ, ಪುತ್ರ ಕೊಲೆ
ಪಾಂಡವಪುರ: ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಪಂಪ್ ಸೆಟ್ ಬಾವಿ ನೀರಿನ ವಿಚಾರಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಪುತ್ರನನ್ನು ಸ್ವಂತ ಸಂಬಂಧಿ

ಕೆರೆಯಲ್ಲಿ ಕುರಿ ಮೈತೊಳೆಯುತ್ತಿದ್ದ ಒಂದೇ ಕುಟುಂಬದ ಮೂರು ಮಂದಿ ಸಾವು
ಮಾಗಡಿ: ತಾಲೂಕಿನ ಮುತ್ತಸಾಗರ ಗೊಲ್ಲರಹಟ್ಟಿ ಗ್ರಾಮದ ಪೂಜಾರಿ ರಾಜಣ್ಣ ಎಂಬುವರ ಪುತ್ರ ನಾಗರಾಜು [30], ಜ್ಯೋತಿ [35], ಲಕ್ಷ್ಮೀ [22] ಕುರಿ ಮೈತೊಳೆಯುತ್ತ

ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ಗಂಟುರೋಗ (ಪೆಬ್ರಿನ್) ಸೋಂಕು ತಕ್ಷಣ ನಿಯಂತ್ರಿಸದಿದ್ದರೆ ರೇಷ್ಮೆ ಉದ್ಯಮ ಸರ್ವನಾಶ: ವಿ.ಬಾಲಸುಬ್ರಮಣ್ಯಂ ಆತಂಕ
ಬೆಂಗಳೂರು: ರೇಷ್ಮೆ ಬಿತ್ತನೆ ಮೊಟ್ಟೆಗಳಿಗೆ ತೀವ್ರ ತರವಾಗಿ ಹರಡುತ್ತಿರುವ ಗಂಟುರೋಗ (ಪೆಬ್ರಿನ್) ಸೋಂಕನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಇನ್ನೊಂದು ವರ್ಷದೊಳಗೆ ರೇಷ್ಮೆ ಉದ್ಯಮ ಪೂರ್ತಿ ನಶಿಸಿಹೋಗಲಿ
ಪ್ರತಿಕ್ರಿಯೆಗಳು